ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕಾಂಗ್ರೆಸ್ ಕಛೇರಿಯಲ್ಲಿ ಶ್ರದ್ಧಾಂಜಲಿ ಸಭೆ

ಮಾಜಿ‌ ಸಿಎಂ ಎಸ್.ಎಂ.ಕೃಷ್ಣ ನಿಧನಕ್ಕೆ ಕಂಬನಿ

ಕೊಪ್ಪಳ/ ಯಲಬುರ್ಗಾ: ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ನಿಧನರಾದ ಹಿನ್ನೆಲೆಯಲ್ಲಿ ಪಟ್ಟಣದ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಕಾರ್ಯಕರ್ತರು ಶ್ರದ್ಧಾಂಜಲಿ ಸಲ್ಲಿಸಿ, ಸಂತಾಪ ಸೂಚಿಸಿದರು.
ಈ ವೇಳೆ ಬ್ಲಾಕ್‌ ಕಾಂಗ್ರೆಸ್ ಕಾರ್ಯಾಧ್ಯಕ್ಷ
ಕರಿಬಸಪ್ಪ ನಿಡಗುಂದಿ ಮಾತನಾಡಿ ರಾಜ್ಯ ಹಾಗೂ ದೇಶ ಕಂಡ ಅತ್ಯುತ್ತಮ ನಾಯಕರಾಗಿ, ನಾಡಿನ ಅಚ್ಚುಮೆಚ್ಚಿನ ಮುಖ್ಯಮಂತ್ರಿಯಾಗಿ ಉತ್ತಮ ಕೆಲಸವನ್ನು ಮಾಡಿದ್ದಾರೆ. ಕರ್ನಾಟಕ ಹಾಗೂ ಕೊಪ್ಪಳ ‌ಜಿಲ್ಲೆಗೆ ಕೃಷ್ಣ ರವರ ಕೊಡುಗೆ ಅಪಾರವಿದೆ, ಇಂದು ಅವರ ಅಗಲಿಕೆ ಬಹಳಷ್ಟು ನೋವು ತಂದಿದೆ,
ಬೆಂಗಳೂರಿನಲ್ಲಿ ಐಟಿ-ಬಿಟಿ ಸ್ಥಾಪಿಸಿ ಅಭಿವೃದ್ಧಿಗೆ ಶ್ರಮಿಸಿದ್ದಾರೆ,ಕೇಂದ್ರ ಸಚಿವರಾಗಿ, ರಾಜ್ಯಪಾಲ, ಮುಖ್ಯಮಂತ್ರಿಗಳಾಗಿ ದಕ್ಷ ಆಡಳಿತ ನಡೆಸಿ ರಾಜ್ಯದ ಜನತೆಗೆ ಕೊಡುಗೆ ನೀಡಿದ್ದಾರೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದರು.

ಈ ವೇಳೆ ಬ್ಲಾಕ್ ಕಾಂಗ್ರೆಸ್ ಕಾರ್ಯಾಧ್ಯಕ್ಷ ಡಾ.ಶಿವನಗೌಡ ದಾನರೆಡ್ಡಿ,ಮುಖಂಡರಾದ ಶರಣಪ್ಪ ಗಾಂಜಿ, ಆನಂದ ಉಳ್ಳಾಗಡ್ಡಿ, ಮಲ್ಲು ಜಕ್ಕಲಿ, ಸಿಎಂ ಈಶ್ವರ ಅಟಮಾಳಗಿ, ಮಲ್ಲೇಶಗೌಡ ಪಾಟೀಲ, ಹುಲಗಪ್ಪ ಬಂಡಿವಡ್ಡರ್, ಹನುಮಂತ ಭಜಂತ್ರಿ, ಸಂತೋಷ ಬೆಣಕಲ್ಲ, ವಂಸತರಾವ ಕುಲಕರ್ಣಿ, ಎಂ.ಎಫ್.ನದಾಫ್, ಪುನೀತ್ ಕೊಪ್ಪಳ, ಮೌನೇಶ ಬಡಿಗೇರ್, ರಾಜ ಹಡಪದ, ಪರಶುರಾಮ ಸಂಗನಾಳ , ಖಾಜಾವಲಿ ಗಡಾದ ಇದ್ದರು.

ವರದಿ : ಮೌನೇಶ ಎಚ್ ನಾಯಕ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ