ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೊಜನೆಯಡಿಯಲ್ಲಿ ಸಹಕರಿಸಲಾಗುವುದು:ಯೋಜನಾಧಿಕಾರಿ ಪ್ರವೀಣ್

ಹನೂರು :
ಒಡೆಯರಪಾಳ್ಯ ಕೆರೆ ಅಭಿವೃದ್ಧಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೊಜನೆಯಡಿಯಲ್ಲಿ ಸಹಕರಿಸಲಾಗುವುದು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾಧಿಕಾರಿ ಪ್ರವೀಣ್ ತಿಳಿಸಿದರು.

ಹನೂರು ಪಟ್ಟಣದ ಕರ್ನಾಟಕ ಪತ್ರಕರ್ತರ ಸಂಘದ ಕಚೇರಿಗೆ ಬೇಟಿ ನೀಡಿ ಶ್ರೀ ಕ್ಷೇತ್ರದ ಧರ್ಮಸ್ಥಳದ 2023ರ ನೂತನ ಡೈರಿಯನ್ನು ಸದಸ್ಯರಿಗೆ ನೀಡಿ
ನೂತನ ಪತ್ರಕರ್ತರ ಸಂಘಕ್ಕೆ ಶುಭ ಹಾರೈಸಿದರು.
ಇದೇ ವೇಳೆ ಪತ್ರಕರ್ತರು ತಾಲ್ಲೂಕಿನ ಗಡಿಯಂಚಿನಲ್ಲಿರುವಂತಹ ಒಡೆಯರಪಾಳ್ಯದ ದೊಡ್ಡ ಕೆರೆಯ ಅಭಿವೃದ್ಧಿಗೆ ನಿಮ್ಮ‌ ಸಂಸ್ಥೆ ಮುಖೇನಾ ಸಹಕರಿಸಿ ಎಂದು ಕೋರಿದಾಗ‌
ಬಳಿಕ ಮಾತನಾಡಿದ ಯೋಜನಾಧಿಕಾರಿ ನಾನು ಒಡೆಯರಪಾಳ್ಯ ಹಲವು ಬಾರಿ ಭೇಟಿ ನೀಡಿದಾಗ ಆ ಕೆರೆ ಅನೇರ್ಮಲ್ಯದಿಂದ ಕೂಡಿ ಗಬ್ಬುನಾರುತ್ತಿದ್ದನ್ನು ಗಮನಿಸಿದ್ದೇನೆ ಅಲ್ಲದೆ ಈ ಕೆರೆ ಒತ್ತುವರಿ ಸಂಬಂದಿಸಿದಂತೆ ಮಾಧ್ಯಮಗಳಲ್ಲಿ ಸುದ್ದಿ ಬಿತ್ತರವಾಗಿದ್ದನ್ನು ಗಮನಿಸಿದ್ದೇನೆ ನಮ್ಮ ಸಂಸ್ಥೆಯಲ್ಲಿ ಸುಮಾರು 10 ಲಕ್ಷದವರೆಗೂ ಕೆರೆ ಅಭಿವೃದ್ಧಿ ಮಾಡಲು ಅವಕಾಶವಿದ್ದು ಗ್ರಾಮಸ್ಥರನ್ನು ಒಳಗೊಂಡು ಒಂದು ಸಮಿತಿ ರಚನೆ ಮಾಡಿ ಮುಂದಿನ ದಿನಗಳಲ್ಲಿ ಮಾದರಿ ಕೆರೆಯನ್ನಾಗಿ ಮಾಡಲು ಶ್ರಮಿಸಲಾಗುವುದು ಎಂದು ಭರವಸೆ‌ ನೀಡಿದರು.

ಇದೇ ಸಂದರ್ಭದಲ್ಲಿ ಕರ್ನಾಟಕ ಪತ್ರಕರ್ತರ ಸಂಘದ ಅಧ್ಯಕ್ಷ ಕುಮಾರ್ ದೊರೆ ಕಾರ್ಯದರ್ಶಿ ಅಭಿಲಾಶ್ ಗೌಡ ಸದಸ್ಯ ವಿಜಯ್ ಸೇರದಂತೆ ಧರ್ಮಸ್ಥಳ ಯೋಜನೆಯ‌ ಸಿಬ್ಬಂದಿಗಳು ಹಾಜರಿದ್ದರು.

-ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ