ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಜಲಸಂಜೀವಿನಿ ಯೋಜನೆಯನ್ನು ಸಮರ್ಪಕವಾಗಿ ಅನುಷ್ಟಾನಗೊಳಿಸಿ ಕಾರ್ಯನಿರ್ವಾಹಕ ಅಧಿಕಾರಿ ಶ್ರೀನಿವಾಸ್ ಅಭಿಮತ

ಹನೂರು :ಸರ್ಕಾರವು ರೈತರಿಗಾಗಿ
ಜಲಸಂಜೀವಿನಿ ಕ್ರಿಯಾಯೋಜನೆಯನ್ನು ಜಿಯೋ ಸ್ಪೇಷಿಯಲ್ ತಂತ್ರಜ್ಞಾನ ಬಳಸಿ ಇದರಿಂದ ರೈತರಿಗೆ ಅನುಕೂಲಕರ ವ್ಯವಸ್ಥೆ ಮಾಡಲಾಗಿದೆ ಎಂದು ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಣಾ ಅಧಿಕಾರಿ ಶ್ರೀನಿವಾಸ್ ತಿಳಿಸಿದರು .
ಹನೂರು ಸಮೀಪದ ಮಂಗಲ ಗ್ರಾಮದಲ್ಲಿ ರೈತರಿಗಾಗಿ ಸರ್ಕಾರದ ಯೋಜನೆಯನ್ನು ಜಾರಿಗೆ ತಂದಿದೆ ನೀರನ್ನು “ದಿಬ್ಬದಿಂದ ಕಣಿವೆ” ತತ್ವದಡಿ ಹರಿಯುವ ನೀರನ್ನು ತೆವಳುವಂತೆ ಮಾಡಿ, ತೆವಳುವ ನೀರನ್ನು ನಿಲ್ಲುವಂತೆ ಮಾಡಿ, ನಿಲ್ಲುವ ನೀರನ್ನು ಇಂಗುವಂತೆ ಮಾಡುವ ವಿಶಿಷ್ಟ ಪರಿಕಲ್ಪನೆಯಾಗಿದ್ದು, ಇದನ್ನು ಸಮರ್ಪಕ ವಾಗಿ ಅನುಷ್ಟಾನಗೊಳಿಸಲು ರೈತರು ಕೈ ಜೋಡಿಸಬೇಕು ಎಂದು
ರಾಷ್ಟ್ರೀಯ ರೈತ ದಿನದ ಅಂಗವಾಗಿ ಇಂದು ಮಂಗಲ ಗ್ರಾಮ ಪಂಚಾಯಿತಿ ಕಾಳಿಂಗನ ಕೆರೆ ಆವರಣದಲ್ಲಿ ಜಲ ಸಂಜೀವಿನಿ ರೈತ ಸಂವಾದ ನಮ್ಮ ನಡಿಗೆ ಅನ್ನದಾತನ ಕಡೆಗೆ ಎಂಬ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು .
ಇದೇ ಸಮಯದಲ್ಲಿ
ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಕನಿಷ್ಟ ಶೇ 65 % ರಷ್ಟು ವೆಚ್ಚವನ್ನು ನೈಸರ್ಗಿಕ ಸಂಪನ್ಮೂಲ ನಿರ್ವಹಣೆ ಆಧಾರಿತ ಕಾಮಗಾರಿಗಳ ಅನುಷ್ಟಾನಕ್ಕೆ ಭರಿಸಬೇಕೆಂಬ ನಿಯಮವಿದೆ.ಈ ಹಿನ್ನೆಲೆಯಲ್ಲಿ ತಾಲೂಕಿನ ಕೆರೆಗಳ ಸಮಗ್ರ ಅಭಿವೃದ್ದಿ,ಕಾಲುವೆಗಳ ಪುನಶ್ಚೇತನದಿಂದ ನೀರಿನ ಅಂತರ್ಜಲದ ಮಟ್ಟ ಹೆಚ್ಚಾಗುತ್ತದೆ ಎಂದು ಹೇಳಿದರು.

ಗೋಕಟ್ಟೆ ನಿರ್ಮಾಣ,ಕಲ್ಯಾಣಿಗಳ ಪುನಶ್ಚೇತನ,ಚೆಕ್ ಡ್ಯಾಂ ಗಳ ನಿರ್ಮಾಣ,ಕೊಳವೆ ಬಾವಿ ಮರುಪೂರಣ ಘಟಕ,ಕಂದಕ ಬದು,ರಸ್ತೆ ಬದಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಸಸಿ ನೆಡುವುದು ಮುಂತಾದ ಮಣ್ಣು ಮತ್ತು ನೀರಿನ ಸಂರಕ್ಷಣೆ ಆಧಾರಿತ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಅನುಷ್ಟಾನಗೊಳಿಸ ಬೇಕು. ಎಂದು ತಿಳಿಸಿದರು.
ಮಂಗಲ ಗ್ರಾಮದ ಅಧ್ಯಕ್ಷರಾದ
ಕನಕರಾಜು ಮಾತನಾಡಿದ ಜಲಸಂಜೀವಿನಿ ಯೋಜನೆಯು ತನ್ನದೇ ಆದ ಮಹತ್ವ ಪಡೆದುಕೊಂಡಿದ್ದು ಜಲಸಂರಕ್ಷಣೆ ಆಧಾರಿತ ಕಾಮಗಾರಿಗಳನ್ನು ವೈಜ್ಞಾನಿಕವಾಗಿ ಗುರುತಿಸಿ ಅನುಷ್ಟಾನಗೊಳಿಸುವ ಸಲುವಾಗಿ ಕ್ರಿಯಾ ಯೋಜನೆ ತಯಾರಿಕೆಯಲ್ಲಿ ಎಲ್ಲರ ಭಾಗವಹಿಸುವಿಕೆ ಅಗತ್ಯ ಎಂದು ಹೇಳಿದರು.

ಪಂಚಾಯತಿ ಅಭಿವೃದ್ಧಿ ಅಧಿಕಾರಿ ದೊರೆ ಅವರು ಮಾತನಾಡಿ ಒಂದು ಜಲಾನಯನ ಪ್ರದೇಶವನ್ನು ಮೇಲುಸ್ಥರ, ಮಧ್ಯಸ್ಥರ, ಕೆಳಸ್ಥರ ಎಂಬುದಾಗಿ ಮೂರು ಬಾಗಗಳನ್ನಾಗಿ ವಿಂಗಡಿಸಿ ಹಂತ ಹಂತವಾಗಿ ಮೂರು. ವರ್ಷದ ಯೋಜನೆಯನ್ನು ರೂಪಿಸಬೇಕು.

ಈ ಸಂದರ್ಭದಲ್ಲಿ ರೈತ ಮುಖಂಡರಾದ ಗುರುಸ್ವಾಮಿ, ರೇವಣ್ಣ ಹಾಗೂ ಗ್ರಾಮಸ್ಥರು ಹಾಜರಿದ್ದರು.
ವರದಿ:ಉಸ್ಮಾನ್ ಖಾನ್.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ