
ಬೀದರ್: ನಗರದ ಅಂಬೇಡ್ಕರ್ ವೃತ್ತದ ಹತ್ತಿರ ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿ ಬೀದರ್ ಘಟಕ ವತಿಯಿಂದ ಪ್ರತಿಭಟನೆ ಮಾಡಲಾಯಿತು.
ಸಂವಿಧಾನ ಶಿಲ್ಪಿ, ಭಾರತ ರತ್ನ, ಡಾ.ಬಿ.ಆರ್ ಅಂಬೇಡ್ಕರ್ ರವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರು ಪಾರ್ಲಿಮೆಂಟ್ ನಲ್ಲಿ ಭಾಷಣ ಮಾಡುತ್ತಾ ಪರಮಪೂಜ್ಯ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಬಗ್ಗೆ ಕೀಳು ಮಟ್ಟದ ಮಾತನಾಡಿ ಅವಮಾನ ಪಡಿಸಿದ್ದಾರೆ, ಅಮಿತ್ ಶಾ ಸಂವಿಧಾನದ ಮೇಲೆ ಪ್ರಮಾಣ ವಚನ ಸ್ವೀಕರಿಸಿ ಕೇಂದ್ರ ಮಂತ್ರಿಯಾಗಿ ಪೂಜ್ಯ ಬಾಬಾಸಾಹೇಬ್ ಅವರ ಬಗ್ಗೆ ನಗಣ್ಯ ರೀತಿಯಲ್ಲಿ ವ್ಯಾಖ್ಯಾನಿಸಿ ಮಾತನಾಡಿರುವುದರಿಂದ ಜಗತ್ತಿನ ಎಲ್ಲಾ ಪ್ರಜಾಪ್ರಭುತ್ವವಾದಿಗಳು ಮತ್ತು ಅಂಬೇಡ್ಕರ್ ಅಭಿಮಾನಿಗಳಿಗೆ ಮಾನಸಿಕವಾಗಿ ಬಹಳ ನೋವುಂಟು ಮಾಡಿದ್ದಾರೆ.ಅಲ್ಲದೇ ಇವರ ಹೇಳಿಕೆಯು ಡಾ. ಬಿ. ಆರ್. ಅಂಬೇಡ್ಕರ್ ವಿರೋಧಿಗಳಿಗೆ ಪ್ರಚೋದನೆ ನೀಡಿದಂತಾಗುತ್ತದೆ ಜಗತ್ತಿನ ಎಲ್ಲಾ ಪರಮಪೂಜ್ಯ ಬಾಬಾಸಾಹೇಬ್ ಅಂಬೇಡ್ಕರ್ ಅವರ ಅಭಿಮಾನಿಗಳ ಪರವಾಗಿ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರ ರಾಜೀನಾಮೆಗೆ ಆಗ್ರಹಿಸಿ ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿಯು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಅಮಿತ್ ಶಾ ಅವರ ಪ್ರತಿ ಕೃತಿ ದಹನ ಮಾಡಲಾಗುವುದು ಎಂದು ಆಲ್ ಇಂಡಿಯಾ ಬಹುಜನ ಸಮಾಜ ಪಕ್ಷದ ಜಿಲ್ಲಾಧ್ಯಕ್ಷರಾದ ಯೋಹಾನ್ ಡಿಸೋಜಾರವರು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ರಾಜ್ಯ ಉಪಾಧ್ಯಕ್ಷರಾದ ದತ್ತು ಸೂರ್ಯವಂಶಿ, ಸತ್ಯದೀಪ್ ಹವಾನೂರ್ ರಾಜ್ಯ ಪ್ರಧಾನ ಕಾರ್ಯದರ್ಶಿ, ಪ್ರಕಾಶ್ ಕೋಟೆ, ಹಾಗೂ ಶಾದ್ರಕ್ ಸೀತಾಳಕೆ, ಗುಣವಂತ ಸಿಂಧೆ ಮಲ್ಲಿಕಾರ್ಜುನ ಕಪಲಾಪುರ, ರಾಜಕುಮಾರ ಡೋಂಗ್ರೆ, ಸಾಲುಮನ್, ಉಮೇಶ್ ಗುತ್ತೇದಾರ, ಶ್ರೀಮಂತ ಬಗ್ದಾಲ್, ಆಕಾಶ ಬಗ್ದಾಲ್ ಹಾಗೂ ಮಸ್ತಾನ್ ಉಪಸ್ಥಿತರಿದ್ದರು.
ವರದಿ: ರೋಹನ್ ವಾಘಮಾರೆ
