ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಬಡಮಕ್ಕಳ ವೈದ್ಯಕೀಯ ಸೇವೆಗೆ ವನಸಿರಿ ತಂಡದಿಂದ ಸನ್ಮಾನ

ಇಂದು ಶನಿವಾರ ಸಿಂಧನೂರಿನ ಪರಿಸರ ಪ್ರೇಮಿಗಳು, ಬಡಮಕ್ಕಳ ಆಶಾಕಿರಣ,ಬಸವ ಮಕ್ಕಳ ಆಸ್ಪತ್ರೆಯ ವೈದ್ಯರಾದ ಡಾ.ಕೆ.ದೊಡ್ಡಬಸವ ಅವರ ಬಡಮಕ್ಕಳ ವೈದ್ಯಕೀಯ ಸೇವೆ ಗುರುತಿಸಿ ವನಸಿರಿ ಫೌಂಡೇಶನ್ ವತಿಯಿಂದ ಸಸಿ ನೀಡಿ ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ವನಸಿರಿ ಫೌಂಡೇಶನ್ ಸಂಸ್ಥಾಪಕ ಅದ್ಯಕ್ಷ ಅಮರೇಗೌಡ ಮಲ್ಲಾಪೂರ ಮಾತನಾಡಿ ಬಸವ ಮಕ್ಕಳ ಆಸ್ಪತ್ರೆಯ ವೈದ್ಯರಾದ ಡಾ.ಕೆ.ದೊಡ್ಡಬಸವ ಅವರು ತಮ್ಮ ಆಸ್ಪತ್ರೆಗೆ ಬಂದಂತಹ ಅತ್ಯಂತ ಕಡುಬಡತನದಲ್ಲಿರುವ ಮಕ್ಕಳಿಗೆ ಉಚಿತ ಚಿಕಿತ್ಸೆ ನೀಡುವರು,ಮತ್ತು ತುರ್ತು ಪರಿಸ್ಥಿತಿಯಲ್ಲಿ ಕೂಡ ಬಹಳ ಬೇಗ ಸ್ಪಂದಿಸಿ ಸಿಂಧನೂರು ತಾಲೂಕಿನಾದ್ಯಂತ ಹಲವಾರು ಮಕ್ಕಳ ಜೀವವನ್ನು ಉಳಿಸುವಲ್ಲಿ ಅವರ ಸೇವೆ ಅಪಾರವಾದದ್ದು,ಇತ್ತೀಚಿಗೆ ವನಸಿರಿ ತಂಡ ಪ್ರಜ್ಞೆ ತಪ್ಪಿದ ಮಗುವನ್ನು ಕರೆದುಕೊಂಡು ಬಂದು ಇದೇ ಆಸ್ಪತ್ರೆಯಲ್ಲಿ ಸೇರಿಸಿದಾಗ ಇಲ್ಲಿನ ವೈದ್ಯರಾದ ಡಾ.ಕೆ.ದೊಡ್ಡಬಸವ ಅವರು ಆ ಮಗುವನ್ನು ಪ್ರಾಣಪಾಯದಿಂದ ಪಾರು ಮಾಡಿದ್ದಾರೆ ಅವರಿಗೆ ಎಷ್ಟು ಕೃತಜ್ಞತೆಗಳನ್ನು ಸಲ್ಲಿಸಿದರು ಕಡಿಮೆ ಇಂದು ಈ ಬಸವ ಆಸ್ಪತ್ರೆಗೆ ಬಂದು ಅವರ ಈ ವೈದ್ಯಕೀಯ ಸೇವೆಗೆ ಮನಸೋತು ನಾವು ಸನ್ಮಾನಿಸಿ ಗೌರವಿಸುತ್ತಿದ್ದೇವೆ ಎಂದರು.

ಈ ಸಂದರ್ಭದಲ್ಲಿ ವನಸಿರಿ ರಾಜ್ಯ ಕಾರ್ಯದರ್ಶಿ ಶರಣೇಗೌಡ ಹೆಡಗಿನಾಳ,ಮಸ್ಕಿ ತಾಲೂಕ ಅದ್ಯಕ್ಷ ರಾಜು ಬಳಗಾನೂರ,ಸದಸ್ಯರಾದ ವೀರಭದ್ರಯ್ಯ ಸ್ವಾಮಿ ತಿಮ್ಮಾಪೂರ,ದೇವರಾಜ ವಿಶ್ವಕರ್ಮ ಇನ್ನಿತರರು ಉಪಸ್ಥಿತರಿದ್ದರು.
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ