ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸಸಿ ನೀಡುವ ಮೂಲಕ ಮದುವೆ ವಾರ್ಷಿಕೋತ್ಸವ ಶುಭ ಕೋರಿದ ವನಸಿರಿ ತಂಡ

ಸಿಂಧನೂರು ನಗರದ ಸುಕಲಪೇಟೆ ನಿವಾಸದಲ್ಲಿ ಇಂದು ರಾಯಚೂರು ವಿಶ್ವಕರ್ಮ ಸಮಾಜದ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾದ ಮೌನೇಶ ಸಾಲ್ವಾಡಗಿ ಹಾಗೂ ಶ್ರೀಮತಿ ಸುವರ್ಣ ಅವರಿಗೆ ಸಸಿ ನೀಡುವ ಮೂಲಕ ವನಸಿರಿ ಫೌಂಡೇಶನ್ ವತಿಯಿಂದ ಮದುವೆ ವಾರ್ಷಿಕೋತ್ಸವದ ಶುಭಾಷಯಗಳನ್ನು ಕೋರಲಾಯಿತು.

ಈ ಸಂದರ್ಭದಲ್ಲಿ ವನಸಿರಿ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷ ಅಮರೇಗೌಡ ಮಲ್ಲಾಪೂರ ಮಾತನಾಡಿ ಪ್ರತಿಯೊಬ್ಬರೂ ತಮ್ಮ ಮದುವೆ, ಉಪನಯನ, ಗೃಹ ಪ್ರವೇಶ ಹಾಗೂ ಹುಟ್ಟು ಹಬ್ಬಗಳಂತಹ ಕಾರ್ಯಕ್ರಮಗಳಿಗೆ ಸಸಿಗಳನ್ನು ಉಡುಗೊರೆ ನೀಡುವ ಮೂಲಕ ಪರಿಸರ ಜಾಗೃತಿ ಮೂಡಿಸಬೇಕು ನಮ್ಮ ವನಸಿರಿ ಫೌಂಡೇಶನ್ ತಂಡ ಅಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಸಸಿ ನೀಡುವ ಮೂಲಕ ಪರಿಸರ ಜಾಗೃತಿ ಮೂಡಿಸುತ್ತೇವೆ ಇಂದು ಕೂಡ ನಮ್ಮ ವನಸಿರಿ ಫೌಂಡೇಶನ್ ಮಾರ್ಗದರ್ಶಕರು ಹಾಗೂ ಪರಿಸರ ಪ್ರೇಮಿಗಳಾದ ಮೌನೇಶ ಪತ್ತಾರ(ಸಾಲ್ವಾಡಗಿ) ಬಳಗಾನೂರ ಇವರಿಗೆ ಸಸಿ ನೀಡುವ ಮೂಲಕ ಮದುವೆ ವಾರ್ಷಿಕೋತ್ಸವ ಶುಭಾಷಯಗಳು ಕೋರಲು ಬಂದಿದ್ದೇವೆ ಅವರು ನೂರು ಕಾಲ ಸುಖವಾಗಿ ಬಾಳಲಿ ಶುಭ ಆರೈಸಿದೆವು ಎಂದು ಹರ್ಷ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ವನಸಿರಿ ಫೌಂಡೇಶನ್ ಸಂಸ್ಥಾಪಕ ಅದ್ಯಕ್ಷ ಅಮರೇಗೌಡ ಮಲ್ಲಾಪೂರ,ರಾಜ್ಯ ಕಾರ್ಯದರ್ಶಿ ಶರಣೇಗೌಡ ಹೆಡಗಿನಾಳ, ವೆಂಕಟರಡ್ಡಿ ಹೆಡಗಿನಾಳ,ವನಸಿರಿ ಫೌಂಡೇಶನ್ ಮಸ್ಕಿ ತಾಲೂಕ ಅದ್ಯಕ್ಷ ರಾಜು ಪತ್ತಾರ ಬಳಗಾನೂರ ಹಾಗೂ ಇನ್ನಿತರರು ಇದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ