ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಭಾವಚಿತ್ರ ಅಳವಡಿಸಲುಡಾ.ಭೇರ್ಯ ರಾಮಕುಮಾರ್ ಆಗ್ರಹ

ಮೈಸೂರು: ಎಲ್ಲಾ ಸರ್ಕಾರಿ ಶಾಲಾ ಕಾಲೇಜುಗಳಲ್ಲಿ , ಗ್ರಂಥಾಲಯಗಳಲ್ಲಿ ಹಾಗೂ ಸರ್ಕಾರಿ ಕಚೇರಿಗಳಲ್ಲಿ ಕನ್ನಡ ಸಾಹಿತ್ಯಕ್ಕೆ ಜ್ಞಾನಪೀಠ ಪ್ರಶಸ್ತಿಯ ಗೌರವ ತಂದುಕೊಟ್ಟ ಕುವೆಂಪು, ದ. ರಾ .ಬೇಂದ್ರೆ , ಶಿವರಾಮ ಕಾರಂತ , ಮಾಸ್ತಿ ವೆಂಕಟೇಶ ಅಯ್ಯಂಗಾರ್, ವಿ. ಕೃ.ಗೋಕಾಕ್, ಯು.ಆರ್.ಅನಂತ ಮೂರ್ತಿ , ಗಿರೀಶ್ ಕಾರ್ನಾಡ್ , ಚಂದ್ರಶೇಖರ ಕಂಬಾರ ಅವರ ಭಾವ ಚಿತ್ರಗಳನ್ನು ಎಲ್ಲಾ ಶಾಲಾ ಕಾಲೇಜುಗಳಲ್ಲಿ ಅಳವಡಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು. ಆ ಮೂಲಕ ಶಾಲಾ ಮಕ್ಕಳಲ್ಲಿ ಸಾಧಕ ಕವಿಗಳ ಬಗ್ಗೆ ಅರಿವು ಮೂಡಿಸಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ದತ್ತಿ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ.ಭೇರ್ಯ ರಾಮಕುಮಾರ್ ನುಡಿದರು.

ಮೈಸೂರು ಜಿಲ್ಲೆಯ ಸಾಲಿಗ್ರಾಮದ ಸಾರ್ವಜನಿಕ ಗ್ರಂಥಾಲಯದಲ್ಲಿ ನಡೆದ ವರಕವಿ ದ .ರಾ.ಬೇಂದ್ರೆ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಗಳಾಗಿ ಮಾತನಾಡುತ್ತಿದ್ದ ಅವರು ವರಕವಿ ದ. ರಾ.ಬೇಂದ್ರೆ ಅವರು ಜೀವನದಲ್ಲಿ ನೊಂದು , ಬೆಂದರು ಜೀವನ ಪ್ರೀತಿ ಬಿಡಲಿಲ್ಲ. ತಮ್ಮ ಒಂಬತ್ತು ಮಕ್ಕಳ ಪೈಕಿ ಆರು ಮಕ್ಕಳನ್ನು ಕಳೆದುಕೊಂಡರು. ಸ್ವಾತಂತ್ರ್ಯ ಜಾಗೃತಿ ಕವಿತೆ ಬರೆದು ಶಿಕ್ಷಕ ಹುದ್ದೆ ಕಳೆದುಕೊಂಡರು. ಜೈಲು ವಾಸವನ್ನೂ ಅನುಭವಿಸಿದರು. ಆದರೂ ಅವರ ಕಾವ್ಯ ರಚನೆಯ ಶಕ್ತಿ ಕುಂದಲಿಲ್ಲ. ನೋವಿನಲ್ಲೂ ಸಮಾಜದಲ್ಲಿ ಕಾವ್ಯ ಜಾಗೃತಿ ಮೂಡಿಸಿದ ಸಾದನೆ ಅವರದು ಎಂದು ಶ್ಲಾಘಿಸಿದರು.

ವರಕವಿ ಬೇಂದ್ರೆ ಅವರು ಶಬ್ದ ಗಾರುಡಿಗ 27 ಕವನ ಸಂಕಲನಗಳು ಸೇರಿದಂತೆ ಅರವತ್ತಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದಾರೆ. ಅವರ ನಾಕುತಂತಿ ಕೃತಿಗೆ ಜ್ಞಾನಪೀಠ ಪ್ರಶಸ್ತಿ ದೊರೆತಿದೆ. ನಾದಲೀಲೆ ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ದೊರೆತಿದೆ. ಶಿವಮೊಗ್ಗದಲ್ಲಿ ನಡೆದ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆಯ ಗೌರವ ದೊರೆತಿದೆ. ಅವರ ಸಾಹಿತ್ಯ ಸಾಧನೆ ಅಮೂಲ್ಯ, ಅಪಾರ ಎಂದು ರಾಮ್ ಕುಮಾರ್ ಬಣ್ಣಿಸಿದರು.

ಮತ್ತೊಬ್ಬ ಮುಖ್ಯ ಅತಿಥಿಗಳಾದ ಶ್ರೀಮತಿ ಜ್ಯೋತಿ ಜಯಸೇನ ಕುಮಾರ್ ಅವರು ಮಾತನಾಡಿ ಗ್ರಂಥಾಲಯಗಳು ಮಕ್ಕಳಿಗೆ ದಾರಿದೀಪಗಳು ಗ್ರಂಥಾಲಯಗಳು ಜ್ಞಾನದ ಕಣಜಗಳು ಮಕ್ಕಳು ಇಲ್ಲರುವ ಪುಸ್ತಕಗಳನ್ನು ಓದಬೇಕು ತಮ್ಮ ಜ್ಞಾನವನ್ನು ವಿಸ್ತರಿಸಿ ಕೊಳ್ಳಬೇಕು. ಆ ಮೂಲಕ ಜೀವನದಲ್ಲಿ ಯಶಸ್ಸಿನತ್ತ ಸಾಗಬೇಕು ಎಂದು ಕರೆ ನೀಡಿದರು.
ಶಿವಕುಮಾರ್, ವೆಂಕಟೇಶ್ ಸಭೆಯಲ್ಲಿ ಮಾತನಾಡಿದರು. ಗ್ರಂಥಪಾಲಕರಾದ ದಿವ್ಯ ಕುಮಾರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಬೇಂದ್ರೆ ಅವರನ್ನು ಕುರಿತು ಬಾಲಕಿ ಆಶ್ವಿಕಾ ಮಾತನಾಡಿದಳು. ಇದೇ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ನರೇಗಾ ಯೋಜನೆ ಕುರಿತ ಚಿತ್ರಕಲಾ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಗಳಿಸಿದ ದೀಕ್ಷಿತ್ ಹಾಗೂ ದ್ವಿತೀಯ ಸ್ಥಾನ ಗಳಿಸಿದ ಯುವರಾಜ್ ಅವರಿಗೆ ಬಹುಮಾನ ವಿತರಿಸಲಾಯಿತು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!