ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಮೊಬೈಲ್, ರಮ್ಮಿ, ಕ್ರಿಕೆಟ್ ಬೆಟ್ಟಿಂಗ್ ಯುವಕರ ಬದುಕಿಗೆ ಮಾರಕ : ಕ.ಸಾ. ಪರಿಷತ್ತಿನ ತಾಲೂಕು ಅಧ್ಯಕ್ಷ ಸುರೇಶ ಲೇಂಗಟಿ

ಕಲಬುರಗಿ: ಮೊಬೈಲ್, ರಮ್ಮಿ, ಕ್ರಿಕೆಟ್ ಬೆಟ್ಟಿಂಗ್ ಯುವಕರ ಬದುಕಿಗೆ ಪ್ರಸ್ತುತ ಸಮಾಜದಲ್ಲಿ ಮಾರಕವಾಗಿ ಸಂಭವಿಸುತ್ತಿವೆ, ಹೆತ್ತರು ಹೆತ್ತವರಿಗೆ ಆಸರೆಯಾಗಬೇಕಾದ ವಯಸ್ಸಿನಲ್ಲಿ ಯುವಕರು ಹಾಸಿಗೆ ಹಿಡಿದು ಪ್ರಾಣ ಕಳೆದುಕೊಳ್ಳುವ ಸ್ಥಿತಿ ತಲುಪುತ್ತಿದ್ದಾರೆ ಇದು ಹೀಗೆ ಮುಂದುವರೆದರೆ ಅಪಾಯ ಕಟ್ಟಿಟ್ಟ ಬುತ್ತಿ, ಈ ಕುರಿತು ಪ್ರತಿಯೊಬ್ಬ ಪಾಲಕರು ಜಾಗೃತಿ ವಹಿಸಬೇಕಾದ ಅನಿವಾರ್ಯತೆ ಎದುರಾಗಿದೆ ಎಂದು ಕಮಲಾಪುರ ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕು ಅಧ್ಯಕ್ಷ ಸುರೇಶ ಲೇಂಗಟಿ ಹೇಳಿದರು.

ಕಮಲಾಪುರ ತಾಲೂಕಿನ ಲೇಂಗಟಿ ಮಂಗಳವಾರ ಸಂಜೆ ಶ್ರೀ ಕರಿಬಸವೇಶ್ವರರ 62ನೇ ಪುಣ್ಯ ಸ್ಮರಣೋತ್ಸವ ನಿಮಿತ್ಯ ಹಮ್ಮಿಕೊಂಡ ಪ್ರವಚನ ಕಾರ್ಯಕ್ರಮದ ಮುಕ್ತಾಯ ಸಮಾರಂಭದಲ್ಲಿ ಮಾತನಾಡಿದ ಅವರು ಮಾನವ ಬದುಕಿನಲ್ಲಿ ಸಂಕಷ್ಟಗಳು ಎದುರಾಗುವುದು ಸಹಜ ಗುರುವಿನ ಸನ್ಮಾರ್ಗದಲ್ಲಿ ನಡೆದರೆ ಬರುವ ಸಂಕಷ್ಟಗಳು ದೂರವಾಗಿ ಸಂತೃಪ್ತ ಜೀವನ ನಡೆಸಲು ಸಾಧ್ಯವಾಗುತ್ತದೆ, ಹಿಂದೆ ಗುರು ಮುಂದೆ ಗುರಿ ಇದ್ದಾಗ ಯಾವುದೇ ಗುರಿ ಸಾಧನೆ ಕಷ್ಟವಾಗುವುದಿಲ್ಲ ಎಂದರು.

ಲೇಂಗಟಿ ಶ್ರೀ ಪ್ರಭುಲಿಂಗ ಮಹಾರಾಜರು ಮಾತನಾಡಿ ಇಂದಿನ ಆಧುನಿಕ ಜಗತ್ತಿನಲ್ಲಿ ತಾಂತ್ರಿಕತೆಯ
ಭರಾಟೆಯಲ್ಲಿ ಮಾನವೀಯ ಮೌಲ್ಯಗಳು ಕ್ಷೀಣಿಸುತ್ತಿರುವುದು ಒಳ್ಳೆಯ ಬೆಳವಣಿಗೆ ಅಲ್ಲ, ಇದು ಹೀಗೆಯೇ ಮುಂದುವರೆದರೆ ಅಪಾಯ ಕಟ್ಟಿಟ್ಟ ಬುತ್ತಿ, ಆದ್ದರಿಂದ ಪಾಲಕರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಸಂಸ್ಕಾರಗಳನ್ನು ಕಲಿಸಬೇಕು ಎಂದರು.
ಬೀದರ್ ಜಿಲ್ಲೆಯ ಬ್ಯಾಲಹಳ್ಳಿಯ ಶ್ರೀ ನಾಗಲಿಂಗಯ್ಯ ಸ್ವಾಮಿಗಳು ಆಶೀರ್ವಚನ ನೀಡಿ ತಾಯಿ ತನ್ನ ಮಕ್ಕಳನ್ನ ಎತ್ತು ಹೊತ್ತು ದೊಡ್ಡವರನ್ನಾಗಿ ಮಾಡಿ ಶಾಲೆಯಲ್ಲಿ ದಾಖಲಾತಿ ಮಾಡಿಸುವಾಗ ಮಗುವಿನ ಹೆಸರಿನೊಂದಿಗೆ ತಂದೆ ಹೆಸರು ಬರೆಸಿ ಬರುತ್ತಾಳೆ, ಇದು ತಾಯಿಯ ನಿಸ್ವಾರ್ಥ ಮನೋಭಾವ ಎತ್ತು ತೋರುತ್ತದೆ ಎಂದರು.
ಈ ಸಂದರ್ಭದಲ್ಲಿ ಪ್ರಮುಖರಾದ ಉದಯಕುಮಾರ್ ಕುಲಕರ್ಣಿ , ರಾಜಕುಮಾರ್ ಲೇಂಗಟಿ , ಸಂಜಯ್ ನಾಟಿಕರ್, ಶಿವಕುಮಾರ್ ತೆಂಗಳಿ, ಶಿವಾನಂದ ಗದುಗೆ, ಕಾಶಿನಾಥ್ ಹಳಕೆ, ಡಾ. ಕುಪೇಂದ್ರ, ಅರ್ಜುನ್ ದೇಗಾವ್, ಶ್ಯಾಮರಾವ್, ಮೇಘರಾಜ್ ದರ್ಜಿ, ಶಮಣ್ಣ ಕೊಳ್ಳೋರೆ ಗುಂಡಪ್ಪ ಕೊಳ್ಳುರೆ, ವಿಠಲ ಚಿಂಚನಸೂರ, ದತ್ತು ಗೌಂಡಿ ಮಸ್ತಾನ್ ಸಾಬ್ ಪಠಣ, ಮಹದೇವ ಮಾಂಗ್ ಇತರರು ಇದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ