ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಆರ್ಥಿಕ ಸಬಲೀಕರಣಕ್ಕೆ ಜೇನು ಸಾಕಾಣಿಕೆ ಸಹಕಾರಿ

ಶಿವಮೊಗ್ಗ: ಆರ್ಥಿಕ ಸಬಲೀಕರಣಕ್ಕೆ ಜೇನು ಸಾಕಾಣಿಕೆ ಒಂದು ಉತ್ತಮ ಮಾರ್ಗವಾಗಿದ್ದು, ಜೇನು ಸಾಕಾಣಿಕೆ ತರಬೇತಿಯ ಸದುಪಯೋಗ ಪಡೆಯಬೇಕೆಂದು ತೀರ್ಥಹಳ್ಳಿ ತಾ.ಪಂ ಕಾರ್ಯ ನಿರ್ವಾಹಕ ಅಧಿಕಾರಿ ಶೈಲಾ ಎನ್ ತಿಳಿಸಿದರು.
ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಇರುವಕ್ಕಿ, ತಾ.ಪಂ ತೀರ್ಥಹಳ್ಳಿ ಇವರ ಸಂಯುಕ್ತಾಶ್ರಯದಲ್ಲಿ ಐಸಿಎಆರ್, ಟಿಎಸ್‌ಪಿ ಯೋಜನೆ ‘ಕರ್ನಾಟಕದ ಶಿವಮೊಗ್ಗ ಜಿಲ್ಲೆಯಲ್ಲಿ ಜೇನು ಸಾಕಾಣಿಕೆಯ ತಂತ್ರಗಳೊoದಿಗೆ ಪರಿಶಿಷ್ಟ ಪಂಗಡಗಳ ಸಬಲೀಕರಣ’ ಎಂಬ ವಿಷಯದಡಿ ಫೆ.14 ರಿಂದ 16 ರವರೆಗೆ ತೀರ್ಥಹಳ್ಳಿ ಗ್ರಾಮೀಣಾಭಿವೃದ್ದಿ ಭವನದಲ್ಲಿ ಏರ್ಪಡಿಸಲಾಗಿದ್ದ ಜೇನು ಸಾಕಾಣಿಕೆ ತರಬೇತಿಯ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜೇನು ಸಾಕಾಣಿಕೆ ಒಂದು ಉತ್ತಮ ತರಬೇತಿಯಾಗಿದೆ. ಪ್ರಾರಂಭದಲ್ಲಿ ಸಣ್ಣ ಪ್ರಮಾಣದಲ್ಲಿ ಸಾಕಾಣಿಕೆ ಕೈಗೊಂಡು ನಂತರ ಹಲವಾರು ಪೆಟ್ಟಿಗೆಗಳನ್ನು ಇಟ್ಟು ದೊಡ್ಡ ಪ್ರಮಾಣದಲ್ಲಿ ಮಾಡಿ ಕುಟುಂಬದ, ಸಮಾಜದ ಹಾಗೂ ದೇಶದ ಅಭಿವೃದ್ದಿಗೆ ಕಾರಣರಾಗುವಂತೆ ಕರೆ ನೀಡಿದರು.
ಆರ್ಥಿಕ ಸಬಲೀಕರಣಕ್ಕೆ ಈ ತರಬೇತಿಯು ಸಹಕಾರಿಯಾಗಿದ್ದು ಆಸಕ್ತರೆಲ್ಲ ಈ ತರಬೇತಿಯ ಪ್ರಯೋಜನ ಪಡೆದುಕೊಂಡು ತಮ್ಮ ಜೀವನ ಸುಧಾರಿಸಿಕೊಳ್ಳುವಂತೆ ಸಲಹೆ ನೀಡಿದರು.
ಇದೇ ವೇಳೆ ಶಿಬಿರಾರ್ಥಿಗಳಿಗೆ ತರಬೇತಿ ಪ್ರಮಾಣ ಪತ್ರದೊಂದಿಗೆ ಜೇನು ಸಾಕಾಣಿಕೆಗೆ ಅಗತ್ಯವಾದ ಪರಿಕರಗಳನ್ನು ವಿತರಣೆ ಮಾಡಲಾಯಿತು.
ನೋಡಲ್ ಅಧಿಕಾರಿ ಹಾಗೂ ಪ್ರಧಾನ ಪರಿಶೋಧಕರಾದ ಡಾ.ಜಯಲಕ್ಷ್ಮಿ ನಾರಾಯಣ ಹೆಗಡೆ ಕಾರ್ಯಕ್ರಮ ನಿರ್ವಹಿಸಿ, ಮೂರು ದಿನಗಳ ಕಾಲ ನಡೆದ ತರಬೇತಿಯ ಕುರಿತು ವಿವರಣೆ ನೀಡಿದರು.
ವಿಘ್ನೇಶ ತಲಕಾಲಕೊಪ್ಪ, ಪ್ರತೀಕ್ ಇತರರು ಹಾಜರಿದ್ದರು. ತೀರ್ಥಹಳ್ಳಿ ತಾಲ್ಲೂಕಿನ ಸುತ್ತಮುತ್ತಲಿನ ಪರಿಶಿಷ್ಟ ಪಂಗಡಗಳ 30 ರೈತ ಮಹಿಳೆಯರು, ರೈತರು, ಯುವಕ ಯುವತಿಯರು ಭಾಗವಹಿಸಿದ್ದರು.

ವರದಿ : ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ