ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಆಸ್ಕಿಹಾಳ ಸರಕಾರಿ ಪ್ರೌಢ ಶಾಲೆಯಲ್ಲಿ ಪ್ಲಾಸ್ಟಿಕ್ ಡಬ್ಬಿಗಳಿಂದ ಪಕ್ಷಿಗಳಿಗೆ ಕಾಳು ಮತ್ತು ನೀರಿನ ಅರವಟ್ಟಿಗೆ

ರಾಯಚೂರು ನಗರದ ಆಸ್ಕಿಹಾಳ ಪ್ರೌಢ ಶಾಲೆಯಲ್ಲಿ ವನಸಿರಿ ಫೌಂಡೇಶನ್ ಹಾಗೂ ಸರಕಾರಿ ಪ್ರೌಢ ಶಾಲೆ ಆಸ್ಕಿಹಾಳ ಯುಕೋ ಕ್ಲಬ್ ಸಂಯುಕ್ತ ಆಶ್ರಯದಲ್ಲಿ ಇಂದು ಭೂಮಿಯ ಮೇಲಿನ ನಿರುಪಯುಕ್ತ ವಸ್ತುಗಳಾದ ಪ್ಲಾಸ್ಟಿಕ್ ಡಬ್ಬಿಗಳ ಮೂಲಕ ಪಕ್ಷಿಗಳಿಗೆ ನೀರು ಮತ್ತು ಕಾಳು ಇರಿಸುವ ಪಕ್ಷಿಗಳ ಅರವಟ್ಟಿಗೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ವಿಜಯ ಲಕ್ಷ್ಮಿ ಮಾತನಾಡಿ ಬೇಸಿಗೆಯಲ್ಲಿ ಪಕ್ಷಿಗಳಿಗೆ ನೀರಿನ ದಾಹವನ್ನು ನಿಗಿಸಲು ಪ್ರತಿಯೊಬ್ಬರೂ ಸಹಕರಿಸಬೇಕು ಹಾಗೂ ಪ್ರತಿವರ್ಷ ವನಸಿರಿ ತಂಡ ಏಪ್ರಿಲ್ ಫೂಲ್ ಬದಲಿಗೆ ಎಪ್ರೀಲ್ ಕೂಲ್ ಆಚರಿಸುತ್ತಿರುವುದು ತುಂಬಾ ಒಳ್ಳೆಯ ಕಾರ್ಯ ಎಂದು ವನಸಿರಿ ತಂಡದ ಕಾರ್ಯದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಈ ವರ್ಷ ಎಪ್ರೀಲ್ ಗೂ ಮೊದಲೇ ಆಚರಿಸಲಾಗುತ್ತಿದೆ. ಯಾಕಂದರೆ ಬೇಸಿಗೆ ಬಿಸಿಲು ಈಗಿನಿಂದಲೇ ಚುರುಕುಗೊಳ್ಳುತ್ತಿರುವುದರಿಂದ ಭೂಮಿಯ ಮೇಲೆ ನೀರಿನ ಪ್ರಮಾಣ ಕಡಿಮೆಯಾಗಿ ಪ್ರಾಣಿ ಪಕ್ಷಿಗಳಿಗೆ ನೀರಿನ ಅಹಕಾರ ಉಂಟಾಗಿದೆ ಆದ್ದರಿಂದ ಈವಾಗಿನಿಂದಲೇ ಪ್ರಾಣಿ ಪಕ್ಷಿಗಳಿಗೆ ಪ್ರಾರಂಭಿಸಿದ್ದಾರೆ. ಆದರೆ ಅದಕ್ಕೆ ಬೇಕಾದ ಮಣ್ಣಿನ ಮಡಿಕೆಗಳನ್ನು ಇನ್ನೂ ತಯಾರಿಸುತ್ತಿರುವುದರಿಂದ ಸದ್ಯ ಈ ಭೂಮಿಯ ಮೇಲೆ ನಿರೂಪಯುಕ್ತ ವಸ್ತುಗಳನ್ನು ಬಳಸಿಕೊಂಡು ಈ ಪ್ಲಾಸ್ಟಿಕ್ ಡಬ್ಬಿಗಳಿಂದ ಅರವಟ್ಟಿಗೆಗಳನ್ನು ಕಟ್ಟಲಾಗುತ್ತಿದೆ ಮುಂದಿನ ದಿನಗಳಲ್ಲಿ ಮಣ್ಣಿನ ಅರವಟ್ಟಿಗೆ ಕಟ್ಟುವ ಮೂಲಕ ಇದೇ ಕಾರ್ಯಕ್ರಮವನ್ನು ಇನ್ನಷ್ಟು ಪಕ್ಷಿಗಳಿಗೆ ಕಾಳು ನೀರು ಇರಿಸುವ ಕಾರ್ಯಕ್ಕೆ ನಮ್ಮ ಶಾಲೆ ಮುಂದಾಗಲಿದೆ ಎಂದು ತಿಳಿಸಿದರು.
ವೀರಶೈವ ಬಿ.ಎಡ್ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿಗಳು ಕೂಡಾ ಈ ಕಾರ್ಯಕ್ರಮಕ್ಕೆ ಸಹಕರಿಸಿದರು.
ಈ ಸಂದರ್ಭದಲ್ಲಿ ವನಸಿರಿ ಫೌಂಡೇಶನ್ ದೇವದುರ್ಗ ತಾಲೂಕ ಅಧ್ಯಕ್ಷರಾದ ಪ್ರಕಾಶ ಪಾಟೀಲ್ ಶಾವಂತಗೇರಾ ಕಾರ್ಯದರ್ಶಿಯಾದ ಸುನಿಲ ಜಾಡಲ್ದಿನ್ನಿ ಹಾಗೂ ಶಾಲೆಯ ಶಿಕ್ಷಕರು ಸಿಬ್ಬಂದಿ ವರ್ಗದವರು ಮಕ್ಕಳು ಮತ್ತು ಭಾಗವಹಿಸಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ