ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ರಾಷ್ಟ್ರಕವಿ ಕುವೆಂಪುರವರ ಜಯಂತಿ:ತಾಲೂಕು ಆಡಳಿತದಿಂದ ಕಾಟಾಚಾರದ ಆಚರಣೆ.


ಚಾಮರಾಜನಗರ ಜಿಲ್ಲೆಯ ಹನೂರು ಪಟ್ಟಣದ ಲೋಕೋಪಯೋಗಿ ವಸತಿಗೃಹದಲ್ಲಿ
ತಾಲೂಕು ಆಡಳಿತ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರಕವಿ ಜ್ಞಾನಪೀಠ ಪುರಸ್ಕೃತ
ಕುವೆಂಪುರವರ ಜಯಂತಿಗೆ ಹಿರಿಯ ಅಧಿಕಾರಿಗಳು ಗೈರಾಗುವ ಮೂಲಕ ಕಿರಿಯ ಅಧಿಕಾರಿಗಳು ಕಾಟಾಚಾರಕ್ಕೆ ಆಚರಿಸಿದ್ದಾರೆ ಗುರುವಾರ ರಾಷ್ಟ್ರಕವಿ ಕುವೆಂಪುರವರ 119ನೇ ಜಯಂತಿ ಆಚರಣೆ ಹಮ್ಮಿಕೊಳ್ಳಲಾಗಿತ್ತು.ಕಾರ್ಯಕ್ರಮಕ್ಕೆ ತಹಸಿಲ್ದಾರ್‌
ಆನಂದಯ್ಯರವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ
ಜರುಗಬೇಕಿತ್ತು ಆದರೆ ಅವರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಭೆಯಲ್ಲಿ ಭಾಗವಹಿಸಿದ್ದ ಕಾರಣ ಗ್ರೇಡ್ 2 ತಹಸಿಲ್ದಾರ್ ಧನಂಜಯ್ ರವರಿಗೆ ಉಸ್ತುವಾರಿ ನೀಡಲಾಗಿತ್ತು.ಈ ಹಿನ್ನೆಲೆ ಗುರುವಾರ 10:30 ಸಮಯಕ್ಕೆ ಕುವೆಂಪು ಜಯಂತಿ ನಿಗದಿ ಮಾಡಲಾಗಿತ್ತು ಕಾರ್ಯಕ್ರಮಕ್ಕೆ ಪಟ್ಟಣ ಪಂಚಾಯಿತಿ
ಉಪಾಧ್ಯಕ್ಷ ಗಿರೀಶ್,ಸದಸ್ಯ ಹರೀಶ್,ಸುದೇಶ್
ಮುಖಂಡರುಗಳಾದ ನಟರಾಜು, ಸಿದ್ದೇಗೌಡ ಆಗಮಿಸಿ ಅಧಿಕಾರಿಗಳ ಬರುವಿಕೆಗೆ ಕಾದು ಕುಳಿತಿದ್ದರು. 11. 20 ಸಮಯ
ಆದರೂ ಸಹ ಗ್ರೇಡ್ 2 ತಹಸಿಲ್ದಾರ್ ಹಾಜರಾಗಿರಲಿಲ್ಲ.
ಇದರಿಂದ ಅಸಮಾಧಾನಗೊಂಡ ಪಟ್ಟಣ ಪಂಚಾಯಿತಿ
ಉಪಾಧ್ಯಕ್ಷ ಗಿರೀಶ್ ರವರು ಅಧಿಕಾರಿಗಳನ್ನು ತರಾಟೆಗೆ
ತೆಗೆದುಕೊಂಡ ನಂತರ ಶಿರಸ್ತಿದಾರ್ ಶ್ರೀನಿವಾಸ್
ತರಾತುರಿಯಲ್ಲಿ ಪೂಜೆ ಮಾಡಿಸಿ ಜಯಂತಿ ಆಚರಿಸಿದರು.
ರಾಷ್ಟ್ರಕವಿ ಕುವೆಂಪುರವರಿಗೆ ಜನ್ಮದಿನದಂದು ಗೌರವನೀಡುವ
ಬದಲು ಅಗೌರವ ತೋರಿಸಿರುವುದಕ್ಕೆ ಅಧಿಕಾರಿಗಳ ವಿರುದ್ಧ
ಪ್ರಜ್ಞಾವಂತ ನಾಗರಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

-ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ