ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಬಾಯಾರಿದ ಬಾನಾಡಿಗಳಿಗೆ ನೀರುಣಿಸಲು ಅರವಟ್ಟಿಗೆ ಕಾರ್ಯಕ್ರಮ

ಬಾಯಾರಿದ ಬಾನಾಡಿಗಳಿಗೆ ನೀರುಣಿಸಲು ಪಕ್ಷಿಗಳಿಗೆ ಅರವಟ್ಟಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ : ಪರಿಸರ ರಾಜ್ಯ ಪ್ರಶಸ್ತಿ ಪುರಸ್ಕೃತ ಅಮರೇಗೌಡ ಮಲ್ಲಾಪುರ

ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಜವಳಗೇರಾ ಗ್ರಾಮದ ಸರಕಾರಿ ಉರ್ದು ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವನಸಿರಿ ಫೌಂಡೇಷನ್ ಹಾಗೂ ನಿಸರ್ಗ ಯುಕೋ ಕ್ಲಬ್ ಜವಳಗೇರಾ ಸಹಯೋಗದೊಂದಿಗೆ ಬಾಯಾರಿದ ಬಾನಾಡಿಗಳಿಗೆ ನೀರುಣಿಸಲು ಪಕ್ಷಿಗಳು ಅರವಟ್ಟಿಗೆ ಕಾರ್ಯಕ್ರಮ ಹಮ್ಮಿಕೊಳ್ಳಯಿತು.

ಕಾರ್ಯಕ್ರಮದ ಉದ್ಘಾಟಕರಾಗಿ ಆಗಮಿಸಿದ ಪರಿಸರ ರಾಜ್ಯ ಪ್ರಶಸ್ತಿ ಪುರಸ್ಕೃತರು ಹಾಗೂ ವನಸಿರಿ ಫೌಂಡೇಷನ್ ರಾಜ್ಯಾಧ್ಯಕ್ಷರಾದ ಅಮರೇಗೌಡ ಮಲ್ಲಾಪುರ ಗಿಡ ನೆಟ್ಟು ನೀರುಣಿಸಿ ಪ್ರಾಣಿ ಪಕ್ಷಿಗಳಿಗೆ ಕಾಳು ಮತ್ತು ನೀರು ಹಾಕುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ನಂತರ ಮಾತನಾಡಿ ರಾಜ್ಯ ಸರ್ಕಾರ ಪ್ರತಿ ಶಾಲೆಯ ಮಕ್ಕಳಿಗೆ ಪರಿಸರ ಪ್ರಜ್ಞೆ ಮೂಡಿಸಲು, ಪರಿಸರವನ್ನು ಪ್ರೀತಿಸಿ, ಪರಿಸರವನ್ನು ಕಾಪಾಡಬೇಕೆನ್ನುವ ಉದ್ದೇಶದಿಂದ ನಿಸರ್ಗ ಯುಕೋ ಕ್ಲಬ್ ಗಳನ್ನು ಪ್ರತಿ ಶಾಲೆಯಲ್ಲಿ ರಚನೆ ಮಾಡಲಾಗಿದೆ. ಈ ನಿಸರ್ಗದಲ್ಲಿ ಚೆರ್ರಿ ಗಿಡದ ಹಣ್ಣುಗಳು ಬೆಳೆಯುತ್ತವೆ. ಈ ಹಣ್ಣುಗಳನ್ನು ದಿನಕ್ಕೆ ನಾಲ್ಕು ತಿನ್ನುವುದರಿಂದ ಶುಗರ್ ಎನ್ನುವ ರೋಗ ಕಡಿಮೆಯಾಗುತ್ತದೆ. ಇಂತಹ ಇನ್ನೂ ಹಲವಾರು ರೋಗಗಳನ್ನು ಹೋಗಲಾಡಿಸುವಂತಹ ಗಿಡಮರಗಳು ಈ ನಮ್ಮ ಪರಿಸರದಲ್ಲಿವೆ ಮತ್ತು ಹಣ್ಣಿನ ಗಿಡಗಳು ಪ್ರಾಣಿ ಪಕ್ಷಿಗಳಿಗೂ ಆಹಾರವಾಗಿವೆ. ಪ್ರಾಣಿಪಾಕ್ಷಿಗಳ ಉಳುವಿಗಾಗಿ ಹಣ್ಣಿನ ಗಿಡಮರಗಳನ್ನು ನಾವುಗಳೆಲ್ಲರೂ ಹೆಚ್ಚು ಹೆಚ್ಚು ಬೆಳಸಿ ಉಳಿಸಲು ಮುಂದಾಗಬೇಕು. ಪ್ರಾಣಿಪಾಕ್ಷಿಗಳಿಗೆ ಗಿಡಮರಗಳು ಆಹಾರವಾಗುತ್ತವೆ ಆದರೆ ಬೇಸಿಗೆಯಲ್ಲಿ ನೀರಿನ ಕೊರತೆ ಉಂಟಾಗುತ್ತದೆ. ಅದಕ್ಕಾಗಿಯೇ ನಮ್ಮ ವನಸಿರಿ ತಂಡದಿಂದ ಬೇಸಿಗೆಯಲ್ಲಿ ಪ್ರಾಣಿಪಾಕ್ಷಿಗಳಿಗೆ ನೀರಿನ ಅರವಟ್ಟಿಗೆಗಳನ್ನು ಕಟ್ಟುವ ಬಾಯಾರಿದ ಬನಾಡಿಗಳಿಗೆ ನೀರುಣಿಸುವ ಕಾರ್ಯವನ್ನು ಕೈಗೊಂಡಿದ್ದೇವೆ ತಾವುಗಳೆಲ್ಲರೂ ಇದಕ್ಕೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ವನಸಿರಿ ತಂಡದ ಸದಸ್ಯರಾದ ಸಿದ್ದನಗೌಡ ಗೋನವಾರ, ರಾಜು ಪತ್ತಾರ, ಮುದೀಯಪ್ಪ ಹೊಸಳ್ಳಿ ಕ್ಯಾಂಪ್, ಮುಖ್ಯ ಗುರುಗಳಾದ ಶ್ರೀಮತಿ ರುಬೀನಾ ತಸ್ಲಿಮಾ, ಶಿಕ್ಷಕಿಯರಾದ ಶ್ರೀಮತಿ ಪವಿತ್ರ SH, ಅನುಷಾ ಬೇಗಂ ಹಾಗೂ ವಿದ್ಯಾರ್ಥಿಗಳು ಇದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ