ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ವಿವಿಧ ಬಡಾವಣೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಎ.ಆರ್. ಕೃಷ್ಣಮೂರ್ತಿ ಗುದ್ದಲಿ ಪೂಜೆ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನಗರಸಭೆ ವ್ಯಾಪ್ತಿಗೆ ಬರುವ ಅಮ್ಮನ್ ಕಾಲೋನಿಯಲ್ಲಿ ವಿವಿಧ ಬಡಾವಣೆ ಅಭಿವೃದ್ಧಿ ಕಾಮಗಾರಿಗೆ ಸುಮಾರು 200 ಲಕ್ಷ ರೂ. ವೆಚ್ಚದಲ್ಲಿ ಶಾಸಕ ಎ. ಆರ್. ಕೃಷ್ಣಮೂರ್ತಿ ಗುದ್ದಲಿ ಪೂಜೆ ನೆರೆವೇರಿಸಿದರು.
ನಂತರ ಮಾತನಾಡಿದ ಅವರು ಮುಸ್ಲಿಂ ಕಾಲೋನಿಗೆ ಚರಂಡಿ, ಸಿ.ಸಿ.ರಸ್ತೆ, ಅಮ್ಮನ್ ಕಾಲೋನಿಗೆ ಚರಂಡಿ ಸಿ.ಸಿ.ರಸ್ತೆ ಹಾಗೂ ಡಾ.ಬಿ.ಆರ್.ಅಂಬೇಡ್ಕರ್, ರಾಜ್ ಕುಮಾರ್ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ ಎಂದರು. ರಾಜ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ನನ್ನ ಕೊರಿಕೆ ಮೆರೆಗೆ ಕ್ಷೇತ್ರದ ಅಭಿವೃದ್ಧಿಗೆ 25 ಕೋಟಿ ರೂ. ನೀಡಿ ಮಂಜೂರು ಮಾಡಿದ್ದಾರೆ. ರಾಜ್ಯದಲ್ಲಿ 5 ಗ್ಯಾರಂಟಿ ಯೋಜನೆ ಅನುಷ್ಠಾನಕ್ಕೆ 56,000 ಕೋಟಿ ರೂ. ಹಣಕಾಸು ಕ್ರೂಢೀಕರಿಸಿ ಯಶಸ್ವಿಯಾಗಿ ನಡೆಸುತ್ತಿದ್ದಾರೆ ಇಷ್ಟೊಂದು ಕಷ್ಟ ಸಮಯದಲ್ಲೂ ಮುಖ್ಯಮಂತ್ರಿಗಳು ನನ್ನ ಕ್ಷೇತ್ರಕ್ಕೆ 25. ಕೋಟಿ ರೂ. ನೀಡುವುದರಿಂದ ಕ್ಷೇತ್ರದ ಜನತೆಯ ಪರವಾಗಿ ಅವರಿಗೆ ನನ್ನ ಕೃತಜ್ಞೆತೆ ಸಲ್ಲಿಸುತ್ತೇನೆ ಹಾಗೂ ಯಳಂದೂರು ತಾಲ್ಲೂಕು ವೈ. ಕೆ. ಮೋಳೆ ಗ್ರಾಮದಿಂದ ಬಿಳಿಗಿರಿ ಬೆಟ್ಟದವರೆಗೆ ಸುಸಜ್ಜಿತ ರಸ್ತೆ ನಿಮಾರ್ಣಕ್ಕೆ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಅನುದಾನ ಬಿಡುಗಡೆ ಮಾಡಿದ್ದು ಟೆಂಡರ್ ಪ್ರಕ್ರಿಯೆ ನೆಡೆಯುತ್ತಿದೆ ಈ ಸಂದರ್ಭದಲ್ಲಿ ಅವರಿಗೂ ಕೂಡಾ ಕ್ಷೇತ್ರದ ಜನತೆಯ ಪರವಾಗಿ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು. ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷೆ ರೇಖಾ ರಮೇಶ್, ಉಪಾದ್ಯಕ್ಷ ಎ.ಪಿ. ಶಂಕರ್, ಸ್ಥಾಯಿ ಸಮಿತಿ ಅಧ್ಯಕ್ಷ ಸುರೇಶ್, ಸದಸ್ಯರುಗಳಾದ ರಾಘವೇಂದ್ರ, ಧರಣೇಶ್, ಬಸ್ತಿಪುರ ಶಾಂತರಾಜು ಪೌರಾಯುಕ್ತ ರಮೇಶ್, ಎ.ಇ.ಇ. ಸುರೇಶ್, ಜೆ.ಇ. ನಾಗೇಂದ್ರ, ಮುಖಂಡರುಗಳಾದ ‘ಚೇತನ್ ದೊರೆ ರಾಜ್, ಕುಂತೂರು ಮೋಳೆ ರಾಜೇಂದ್ರ, ಬಸ್ತಿಪುರ ಸ್ವಾಮಿ ನಂಜಪ್ಪ, ರವಿ, ಪುನೀತ್ ಸೇರಿದಂತೆ ಇತರರು ಇದ್ದರು.

ವರದಿ : ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ