ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

“ಅಂಬೇಡ್ಕರ್ ಜಯಂತಿ ಬಳಿಕ ಚುನಾವಣೆ ಘೋಷಿಸಿರಾಜ್ಯಾಧ್ಯಕ್ಷ ಶ್ರೀ ಚಿದಾನಂದ ಕಾಂಬಳೆ ಸರ್ಕಾರಕ್ಕೆ ಮನವಿ”

ವಿಜಯಪುರ/ ಇಂಡಿ: ಪ್ರತಿ ವರ್ಷ ಡಾ. ಅಂಬೇಡ್ಕರ್ ಅವರ ಜಯಂತಿ ಆಚರಿಸುವ ಸಮಯದಲ್ಲಿಯೇ ಚುನಾವಣೆಗಳು ಘೋಷಣೆಯಾಗುತ್ತಿದ್ದು, ಚುನಾವಣೆ ನೀತಿ ಸಂಹಿತೆ ಇರುವುದರಿಂದ ಅಂಬೇಡ್ಕರ್ ಅವರ ಜಯಂತಿಯನ್ನು ರಾಜ್ಯ ಸರ್ಕಾರ, ಜಿಲ್ಲೆ, ತಾಲೂಕ ಆಡಳಿತ ಅದ್ದೂರಿಯಾಗಿ ಆಚರಣೆ ಮಾಡಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಈ ಬಾರಿಯೂ ಜಿ.ಪಂ, ತಾ.ಪಂ. ಚುನಾವಣೆ ಘೋಷಣೆ ಮಾಡುವ ಸಾಧ್ಯತೆ ಇದೆ. ಆದ ಕಾರಣ ಏ.14 ಮುಗಿಯೋವರೆಗೆ ಜಿ.ಪಂ, ತಾ.ಪಂ, ಚುನಾವಣೆ ಘೋಷಣೆ ಮಾಡದಂತೆ ಸಿ.ಎಂ ಸಿದ್ದರಾಮಯ್ಯನವರು ಕ್ರಮ ಕೈಗೊಳ್ಳಬೇಕೆಂದು ರಾಜ್ಯ ಛಲವಾದಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಶ್ರೀ ಚಿದಾನಂದ ಕಾಂಬಳೆ ಅವರು ಮನವಿ ಮಾಡಿದ್ದಾರೆ. ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಈಗಾಗಲೇ ಈ ವಿಷಯ ಕುರಿತು ಮನವಿ ಪತ್ರವನ್ನು ಸಿ.ಎಂ ಸೇರಿದಂತೆ ಜಿಲ್ಲೆ, ರಾಜ್ಯಮಟ್ಟ ಅಧಿಕಾರಿ, ಸಚಿವರಿಗೆ ಅಂಚೆ ಮೂಲಕ ಕಳುಹಿಸಲಾಗಿದೆ ಎಂದು ತಿಳಿಸಿದರು.
ಬುದ್ಧ, ಬಸವ, ಅಂಬೇಡ್ಕರ್ ಅವರ ಚಿಂತನೆಯನ್ನು ಮೈಗೂಡಿಸಿಕೊಂಡು ಅವರ ಆದರ್ಶವನ್ನು ಮಾದರಿಯಾಗಿಟ್ಟುಕೊಂಡು ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು 2024 ರಲ್ಲಿ ಭಾರತ ಸಂವಿಧಾನ ಜಾರಿಗೆ ಬಂದು 75 ವರ್ಷಗಳು ಸಂದ ಹಿನ್ನಲೆಯಲ್ಲಿ ಪ್ರತಿ ಜಿಲ್ಲೆಯಲ್ಲಿ ಸಂವಿಧಾನ ಜಾಗೃತಿ ಜಾಥಾ ಆಯೋಜಿಸಿ ಜಾಗೃತಿ ಮೂಡಿಸಿದರು. ಅದಕ್ಕೆ ಸರಕಾರಕ್ಕೆ ರಾಜ್ಯದ ಜನತೆಯ ಪರವಾಗಿ ಛಲವಾದಿ ನೌಕರರ ಸಂಘ ರಾಜ್ಯ ಸಮಿತಿ ಕೋಟಿ ಕೋಟಿ ಅಭಿನಂದನೆ ಸಲ್ಲಿಸುತ್ತದೆ ಎಂದು ತಿಳಿಸಿದರು.

ವರದಿ ಮನೋಜ್ ನಿಂಬಾಳ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ