ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಆಂತರಿಕ ಶಕ್ತಿ ನಮ್ಮನ್ನು ಉನ್ನತ ಮಟ್ಟಕ್ಕೆ ತೆಗೆದುಕೊಂಡು ಹೋಗುತ್ತದೆ

ಶಿವಮೊಗ್ಗ : ನಮ್ಮೊಳಗಿನ ಆಂತರಿಕ ಶಕ್ತಿ ನಮ್ಮನ್ನು ಉನ್ನತ ಮಟ್ಟಕ್ಕೆ ತೆಗೆದುಕೊಂಡು ಹೋಗುತ್ತದೆ. ಆದ್ದರಿಂದ ಹೆಣ್ಣು ಮಕ್ಕಳು ತಮ್ಮ ಶಕ್ತಿ ಅರಿತು ಇತರೆ ಹೆಣ್ಣುಮಕ್ಕಳ ಶಕ್ತಿಯನ್ನು ಅರ್ಥ ಮಾಡಿಕೊಂಡು ಮುಂದೆ ಬರಬೇಕೆಂದು ಕೌಟುಂಬಿಕ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶರಾದ ಶೈನಿ ಕೆ ಎಂ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಬುಧವಾರ ನೆಹರೂ ಕ್ರೀಡಾಂಗಣದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಆಯೋಜಿಸಲಾಗಿದ್ದ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಹೆಣ್ಣುಮಕ್ಕಳು ಕಟ್ಟುಪಾಡು, ಕಟ್ಟಳೆಗಳನ್ನು ಮುರಿದು ಮುಂದೆ ಬಂದಿದ್ದಾಳೆ. ಪುರುಷರು ನಿರ್ವಹಿಸುವಂತಹ ಬಹುತೇಕ ಎಲ್ಲಾ ಕ್ಷೇತ್ರಗಳಲ್ಲೂ ಇಂದು ಹೆಣ್ಣುಮಕ್ಕಳಿದ್ದಾರೆ. ಜೊತೆಗೆ ಅವಳೆಡೆಗಿನ ಸಮಾಜದ ನಿರೀಕ್ಷೆಗಳು, ಪಿತೃಪ್ರಧಾನ ಸಮಾಜದ ರೂಢಿಗಳು ಹಾಗೂ ಸಾಕಷ್ಟು ಇತರೆ ಸವಾಲುಗಳನ್ನು ಎದುರಿಸುತ್ತಾ ಬಂದಿದ್ದಾಳೆ. ಹೆಣ್ಣು ಎಷ್ಟೇ ಯಶಸ್ಸು ಸಾಧಿಸಿದ್ದರೂ ಕುಟುಂಬ, ಕಾಳಜಿ ವಿಷಯ ಬಂದಾಗ ತನ್ನ ಆಸೆಗಳನ್ನು ತ್ಯಾಗ ಮಾಡಿ ರಾಜೀ ಮಾಡಿಕೊಳ್ಳಲೇಬೇಕಾಗುತ್ತದೆ.
ಹೆಣ್ಣುಮಕ್ಕಳು ಕ್ಲೇಷಗಳನ್ನು ಕಳೆದು ಮನಸ್ಥಿತಿ ಮತ್ತು ಆಲೋಚನೆ ಬದಲಾಯಿಸಿಕೊಂಡಲ್ಲಿ ಉತ್ತಮ ಬದಲಾವಣೆ ಸಾಧ್ಯವಾಗುತ್ತದೆ. ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಮ್ಮಲ್ಲಿನ ಕೌಶಲ್ಯವನ್ನು, ಶಕ್ತಿಯನ್ನು ಹೆಚ್ಚಿಸುತ್ತದೆ. ಬಲವಾದ ಸಾಮಾಜಿಕ ನೆಟ್‌ವರ್ಕ್ ಒದಗಿಸುತ್ತದೆ. ಮಾತಿಗೆ ಒಳ್ಳೆಯ ಶಕ್ತಿ ಇದ್ದು ನಾವಾಡುವ ಮಾತು ಸತ್ವ ಮತ್ತು ತತ್ವಭರಿತವಾಗಿರಬೇಕು. ವೈಷಮ್ಯ, ದ್ವೇಷ, ಪ್ರಚೋದನೆಗೀಡು ಮಾಡದೇ ಸೌಹಾರ್ಧಯುತವಾಗಿರಬೇಕು ಎಂದ ಅವರು ಮಹಿಳೆಯರಾದ ನಾವೆಲ್ಲಾ ನಮ್ಮ ಸಾಧನೆಗಳನ್ನು ಆಚರಿಸೋಣ, ಒಬ್ಬರಿಗೊಬ್ಬರು ಬೆಂಬಲಿಸೋಣ, ಕರ್ತವ್ಯ ಪಾಲನೆಯೊಂದಿಗೆ ಸಬಲೀಕರಣಗೊಳ್ಳೋಣ ಎಂದು ಕರೆ ನೀಡಿದರು.
ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನ ಪ್ರಾಂಶುಪಾಲರಾದ ಡಾ. ಸಂಧ್ಯಾ ಕಾವೇರಿ ಕೆ ಮಾತನಾಡಿ, ಈ ವರ್ಷದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಘೋಷವಾಕ್ಯ ‘ಕ್ರಿಯೆಗಳ ವೇಗವನ್ನು ವರ್ಧಿಸಿ’ ಎಂಬುದಾಗಿದ್ದು, ನಾವು ಸಮಾನತೆಯ ಕ್ರಿಯೆಗಳ ವೇಗವನ್ನು ವರ್ಧಿಸಬೇಕು. ಇಡೀ ಸಮಾಜ ಸಕ್ರಿಯವಾಗಿ ಪಾಲ್ಗೊಂಡು ಸಮಾನತೆಯನ್ನು ಸಾಧಿಸಬೇಕು. ಸಾಧನೆಯೊಂದೇ ಸಾಲದು, ಇದರ ವೇಗವನ್ನು ವರ್ಧಿಸಬೇಕು ಎಂದು ಹೇಳಿದರು.
ಉತ್ತಮ ಸಾಧನೆಯ ಭಾಗವೇ ಕ್ರೀಡೆ, ಇದೊಂದು ಸಮಾಜದ ಅಭಿವೃದ್ದಿಯ ಅತ್ಯುತ್ತಮ ಮಾದರಿ. ಹಾಗೂ ಇದನ್ನು ಸಮಾನತೆಯ ಸೂಚ್ಯಂಕವನ್ನಾಗಿ ತೆಗೆದುಕೊಳ್ಳಬಹುದು. ಕ್ರೀಡೆಯಿಂದ ಮನುಷ್ಯನ ಎಲ್ಲಾ ಸ್ನಾಯುಗಳಿಗೆ ಚಲನೆ ದೊರೆಯುತ್ತದೆ. ಸ್ನಾಯು ಮತ್ತು ಮೆದುಳಿನ ಸಂಯೋಜನೆ ಅತ್ಯಂತ ಮುಖ್ಯ. ಕ್ರೀಡೆ ಮೆದುಳಿನ ರಾಸಾಯನಿಕ ಏರುಪೇರುಗಳನ್ನು ಸಮತೋಲನಗೊಳಿಸುತ್ತದೆ. ಮಾನಸಿಕ ಸುಸ್ಥಿತಿಗೆ ಕಾರಣವಾಗುತ್ತದೆ. ಏಕಾಗ್ರತೆಯನ್ನು ಹೆಚ್ಚಿಸಿ, ಭಾವನೆಗಳನ್ನು ನಿಯಂತ್ರಿಸುತ್ತದೆ. ಹಾಗೂ ಸೋಲು, ಗೆಲುವನ್ನು ಸಮಾನವಾಗಿ ಸ್ವೀಕರಿಸುವುದನ್ನು ಕಲಿಸುತ್ತದೆ. ಕ್ರೀಡೆಯನ್ನು ಪ್ರೀತಿಸಿದರೆ ಅದು ತಮ್ಮ ಬಗ್ಗೆ ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ.ಆದ್ದರಿಂದ ಹೆಣ್ಣುಮಕ್ಕಳು ಕ್ರೀಡೆ ಕುರಿತು ಯಾವುದೇ ತಪ್ಪು ಕಲ್ಪನೆ ಹೊಂದದೆ ಮುಂದೆ ಬರಬೇಕೆಂದು ಕರೆ ನೀಡಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಅಧಿಕಾರಿ ಶಶಿರೇಖಾ, ಜಿಲ್ಲಾ ಪಂಚಾಯ್ತಿ ಸಹಾಯಕ ಕಾರ್ಯದರ್ಶಿ ತಾರಾ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ, ರೇಖ್ಯಾನಾಯ್ಕ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಉಮೇಶ್, ನೆಹರು ಯುವ ಕೇಂದ್ರದ ಯುವ ಅಧಿಕಾರಿ ಉಲ್ಲಾಸ್, ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಕ್ರೀಡಾಪಟುಗಳು ಹಾಜರಿದ್ದರು.

ವರದಿ : ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ