ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಮಾಹಿತಿ ನೀಡದ ಸಿಡಿಪಿಓಗೆ ದಂಡ ವಿಧಿಸಿದ ಆಯೋಗ

ಬೀದರ್ /ಬಸವಕಲ್ಯಾಣ: ಮಾಹಿತಿ ಹಕ್ಕಿನ ಅಡಿ ಕೇಳಲಾದ ವಿಷಯದ ಬಗ್ಗೆ ಮಾಹಿತಿ ನೀಡದ ಸಿಡಿಪಿಓಗೆ 25 ಸಾವಿರ ರೂ. ದಂಡ ವಿಧಿಸಿ ಕರ್ನಾಟಕ ಮಾಹಿತಿ ಆಯೋಗದ ಕಲಬುರ್ಗಿ ಪೀಠ ಆದೇಶ ಹೊರಡಿಸಿದೆ. ನಗರದ ಬನಶಂಕರಿಗಲ್ಲಿ ನಿವಾಸಿ ರೇವಣಸಿದ್ದಯ್ಯ ಎನ್ನುವರು ತಮ್ಮ ತಾಯಿ ನಿಧನ ಹಿನ್ನೆಲೆಯಲ್ಲಿ ತಮಗೆ ಸಿಡಿಪಿಓ ಕಚೇರಿಯಿಂದ ಸಿಗಬೇಕಿದ್ದ ಪರಿಹಾರ ಧನವನ್ನು ತಮ್ಮ ಸಹಿ ನಕಲು ಮಾಡಿ ತಮ್ಮ ಸಹೋದರರು ವಂಚನೆ ಮಾಡಿದ್ದಾರೆ. ತಾವು ವಿದೇಶದಲ್ಲಿ ಇದ್ದರೂ ಸಹ ತಮ್ಮ ಸಹಿ ನಕಲು ಮಾಡಿ ಪರಿಹಾರದ ಹಣ ಲಪಟಾಯಿಸಲಾಗಿದೆ ಎಂದು ನಗರ ಠಾಣೆಗೆ ದೂರು ಸಲ್ಲಿಸಿದ್ದಾರೆ. ಈ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 3-9-2022ರಲ್ಲಿ ರೇವಣಸಿದ್ದಯ್ಯ ನವರು ಸಿಡಿಪಿಓ ಕಚೇರಿಯಿಂದ ಮಾಹಿತಿ ಹಕ್ಕಿನ ಅಡಿಯಲ್ಲಿ ದಾಖಲೆಗಳನ್ನು ಕೇಳಿ ಅರ್ಜಿ ಸಲ್ಲಿಸಿದ್ದರು. ಆದರೆ ದಾಖಲೆಗಳನ್ನು ನೀಡದೆ ತಮಗೆ ಸಿಡಿಪಿಓ ಕಚೇರಿಯಿಂದ ಉಡಾಫೆ ಉತ್ತರ ನೀಡಲಾಗಿದೆ ಎಂದು ಕರ್ನಾಟಕ ಮಾಹಿತಿ ಆಯೋಗದ ಕಲಬುರ್ಗಿ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದರು. ಪ್ರಕರಣ ಕುರಿತು ಕುಲಂಕುಶವಾಗಿ ಪರಿಶೀಲಿಸಿ, ವಿಚಾರಣೆ ನಡೆಸಿದ ಮಾಹಿತಿ ಆಯೋಗವು, ಮಾಹಿತಿ ನೀಡಲು ವಿಫಲವಾದ ಬಸವಕಲ್ಯಾಣ ಸಿಡಿಪಿಓ ಗೌತಮ ಶಿಂಧೆ ಅವರಿಗೆ 25 ಸಾವಿರ ರೂ. ದಂಡ ವಿಧಿಸಿ ಆದೇಶ ಹೋರಡಿಸಿದೆ. ದಂಡದ ಮೋತ್ತ ಭರಿಸಲು ನಿರ್ಲಕ್ಷ್ಯ ವಹಿಸಿದಲ್ಲಿ ಸೂಕ್ತ ಕ್ರಮಕ್ಕಾಗಿ ಶಿಫಾರಸ್ಸು ಮಾಡಲಾಗುವುದು ಎಂದು ರಾಜ್ಯ ಮಾಹಿತಿ ಆಯುಕ್ತರಾದ ರವೀಂದ್ರ ಗುರುನಾಥ ದಾಕಪ್ಪ ಅವರು ಆದೇಶ ಹೊರಡಿಸಿದ್ದಾರೆ ಎಂದು ನ್ಯಾಯವಾದಿ ಸಿ.ಪಿ. ಸಿಗೇದಾರ ತಿಳಿಸಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ