ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಮುಂಡಗೋಡ ತಹಶೀಲ್ದಾರ್ ಮೇಲೆ ಹಲ್ಲೆ ಯತ್ನ!

ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಸನವಳ್ಳಿ ಗ್ರಾಮದ ಸರ್ವೆ ನಂಬರ್ 21/6 ರಲ್ಲಿ ಜಮೀನುಗಳ ಸಾಗುವಳಿ ಮತ್ತು ಅನಧಿಕೃತ ಇಟ್ಟಿಗೆ ಭಟ್ಟಿ ನಿರ್ಮಾಣ ಮಾಡಿರುವ ಕುರಿತು ದೂರು ಬಂದ ಹಿನ್ನೆಲೆಯಲ್ಲಿ ಪರಿಶೀಲನೆಗೆ ತೆರಳಿದ ತಹಶೀಲ್ದಾರ್ ಮತ್ತು ದಂಡಾಧಿಕಾರಿಗಳಾದ ಶ್ರೀಶಂಕರ್ ಗೌಡಿ ಹಾಗೂ ಕಂದಾಯ ನಿರೀಕ್ಷಕರು ಆದ ವಿಕ್ರಮ ಸಿಂಗ ರಜಪೂತ,ಗ್ರಾಮ ಆಡಳಿತ ಅಧಿಕಾರಿಯಾದ ಗಿರೀಶ್ ರಣದೇವ್ ಅವರೊಂದಿಗೆ ತೆರಳಿದ್ದರು,

ಈ ವೇಳೆ ರವಿ ನಾಗಪ್ಪ ಕೋಣನಕೇರಿ,
ಕುಬೇರಪ್ಪ ಯಲ್ಲಪ್ಪ ಕೋಣನಕೇರಿ
ಗುಡ್ಡಪ್ಪ ಕುಬೇರಪ್ಪ ಕೋಣನಕೇರಿ ಇವರುಗಳು

ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಮತ್ತು ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ಉಂಟು ಮಾಡಿದ್ದು, ಜೀವಬೆದರಿಕೆ ಹಾಕಿದ್ದಾರೆ ಎಂದು ಮಾನ್ಯ ತಹಶೀಲ್ದಾರ ಆದಂತಹ ಶಂಕರ್ ಗೌಡಿ ಅವರು ಮುಂಡಗೋಡ ನಗರದ ಪೊಲೀಸ್ ಠಾಣೆಗೆ ದೂರು ನೀಡಿದ್ದು,

ಮೇಲೆ ಹೆಸರಿಸಿದ ಆರೋಪಿತರ ಮೇಲೆ ಭಾರತೀಯ ದಂಡ ಸಂಹಿತೆ ಪ್ರಕಾರ 447,341,353,504,506 ರ ಪ್ರಕಾರ FIR ದಾಖಲಾಗಿದ್ದು,
ಮುಂದಿನ ಕ್ರಮಗಳ ಬಗ್ಗೆ ಕಾದು ನೋಡಬೇಕಿದೆ.

ಶಾಸನಗಳನ್ನು ರಚಿಸುವುದು ಶಾಸಕಾಂಗದ ಕೆಲಸವಾದರೂ ಅವುಗಳನ್ನು ಸಮರ್ಥವಾಗಿ ನಿಭಾಯಿಸಿ ಕಾರ್ಯರೂಪಕ್ಕೆ ತರುವ ಕೆಲಸ ಕಾರ್ಯಾoಗದ್ದು ಅಂತಹ ಕಾರ್ಯಾoಗ ವನ್ನು ಪ್ರತಿನಿಧಿಸುವ ತಾಲೂಕ ಆಡಳಿತ ನೋಡಿಕೊಳ್ಳುವ ಅಧಿಕಾರಿಗಳನ್ನು ದಬಾಯಿಸುವ ಅವರ ಕಾರ್ಯವ್ಯಾಪ್ತಿಯನ್ನು ಹತ್ತಿಕ್ಕುವ ಕೆಲಸ ನಡೆಯುತ್ತಿದ್ದು,ಇದು ಅಪಾಯಕಾರಿ ಬೆಳವಣಿಗೆ ಆಗಿದೆ ಅಧಿಕಾರಿಗಳ ಬೆನ್ನಿಗೆ ಸರ್ಕಾರ ಮತ್ತು ಜಿಲ್ಲಾಡಳಿತ ನಿಲ್ಲಬೇಕು ಎಂದು ಸಾರ್ವಜನಿಕರು ಚರ್ಚಿಸುತ್ತಿದ್ದಾರೆ.
ವರದಿ – ಶಿವರಾಜ್ ಶಿರಾಲಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!