ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಬಡಸ್ನೇಹಿ, ಉತ್ತಮ ಜನಪರ ಬಜೆಟ್

ಕಲಬುರಗಿ: ಸಿಎಂ ಸಿದ್ದರಾಮಯ್ಯನವರು ಮಂಡಿಸಿರುವ ಬಜೆಟ್ ಅತ್ಯಂತ ಜನಪರವಾಗಿದ್ದು, ಬಡವರ ಪರವಾಗಿ ಅತ್ಯುತ್ತಮ ಬಜೆಟ್ ಆಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಿಂದುಳಿದವರ್ಗ ಜನಾಂಗಕ್ಕೂಕೂಡಹೆಚ್ಚು ಅನುದಾನ ನೀಡಿರುವುದು ಅಲ್ಲದೇ ಸಾಮಾನ್ಯ ಜನ ಸಾಮಾನ್ಯರಿಗೆ ಜನಪರ ಬಜೆಟ್ ಮಂಡಿಸಿರುವುದು ಶ್ಲಾಘನೀಯವಾಗಿದೆ ಎಂದು ಅಖಿಲ‌ ಕರ್ನಾಟಕ ಡಾ. ಎಚ್. ಸಿ‌. ಮಹಾದೇವಪ್ಪ ಅಭಿಮಾನಿಗಳ ಸಂಘದ ಸಂಸ್ಥಾಪಕ ರಾಜ್ಯಾಧ್ಯಕ್ಷ ಓಂಕಾರ ವಠಾರ ಹೇಳಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ದಾಖಲೆಯ 16ನೇ ಬಜೆಟ್ ಮಂಡಿಸಿರುವ ಮೂಲಕ ದಾಖಲೆ ರಾಮಯ್ಯ ಎಂಬ ಹೆಸರಿಗೆ ಪಾತ್ರರಾಗಿದ್ದಾರೆ. ಇಂದಿನ ಬಜೆಟ್‌ನಲ್ಲಿ ಮುಖ್ಯವಾಗಿ ಕಂಡು ಬಂದಿದ್ದು ರೈತರು ಮತ್ತು ಮಹಿಳೆಯರು ರೈತರಿಗೆ ಬಂಪರ್ ಗಿಫ್ಟ್ ಕೊಡುವುದರ ಮೂಲಕ ರೈತರ ಮುಖದಲ್ಲಿ ಮಂದಹಾಸ ಮೂಡಿಸಿದ್ದಾರೆ. ಶಿಕ್ಷಣ ಕ್ಷೇತ್ರ, ಮತ್ತು ಆರೋಗ್ಯ ಕ್ಷೇತ್ರದಲ್ಲಿ ಬುದ್ಧಿವಂತಿಕೆಯ ಬಜೆಟ್ ಇದಾಗಿದ್ದು ರಾಜ್ಯವನ್ನು ಮಾದರಿ ರಾಜ್ಯವನ್ನಾಗಿ ಮಾಡುವ ಕನಸು ಸಾಕಾರಗೊಳಿಸಿದ್ದಾರೆ.
ಮಹಿಳಾ ಸಬಲೀಕರಣಕ್ಕೆ 9,40,009, ಎಸ್.ಸಿ.ಪಿ, ಟಿ.ಎಸ್.ಪಿ ಯೋಜನೆಗೆ 42,000 ಕೋಟಿ ರೂ. ಕೃಷಿ ಭಾಗ್ಯ, ಅನ್ನಭಾಗ್ಯ ಯೋಜನೆಗಳನ್ನು ಮರುಜಾರಿ ಹಾಗೂ ಹಿಂದುಳಿದ, ಅಲ್ಪಸಂಖ್ಯಾತರ ಕಾಮಗಾರಿ ಹಾಗೂ ಕೈಗಾರಿಕಾ ಪ್ರವೇಶ ಹಂಚಿಕೆಯಲ್ಲಿ ಭರ್ಜರಿ ಮೀಸಲಾತಿಯನ್ನು ಈ ಸಲದ ಬಜೆಟ್ ನಲ್ಲಿ ಒದಗಿಸಲಾಗಿದೆ. ಈ ಬಜೆಟ್ ಅತ್ಯಂತ ಜನಪರ ಬಜೆಟ್ ಆಗಿದೆ ಎಂದು ಅವರು ಹರ್ಷ ವ್ಯಕ್ತಪಡಿಸಿದರು.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ