ಕಲಬುರಗಿ: ಬಜೆಟ್ ನಲ್ಲಿ ಆರ್ಥಿಕ ಸುಧಾರಣೆ,ಆರ್ಥಿಕ ಸಬಲೀಕರದತ್ತ ರಾಜ್ಯವನ್ನು ತೆಗದುಕೊಂಡು ಹೋಗುವ ಯಾವುದೇ ಕ್ರಮ ಇಲ್ಲ. ಇದೊಂದು ಜನರ ಮೇಲೆ ಆರ್ಥಿಕ ಹೊರೆಯನ್ನು ಹೇರಿರುವ ಜನವಿರೋಧಿ ನಿರಾಶಾದಾಯಕ ಬಜೆಟ್ ಆಗಿದೆ ಎಂದು ಬಿಜೆಪಿ ಮುಖಂಡ ಶರಣಕುಮಾರ ಹಾಗರಗುಂಡಗಿ ಅವರು ಆರೋಪಿಸಿದರು.
ಶಿಕ್ಷಣಕ್ಕೆ ಶೇ.2 ರಷ್ಟು ಮಹಿಳಾ ಮಕ್ಕಳ ಇಲಾಖೆಗೆ ಶೇ.1 ರಷ್ಟು ಕಡಿಮೆ ಅನುದಾನ ನೀಡಲಾಗಿದೆ. ಅಲ್ಪಸಂಖ್ಯಾತರಿಗೆ ಬಂಪರ್ ಕೊಡುಗೆ ನೀಡಿರುವ ಸಿಎಂ ಬಹು ಸಂಖ್ಯಾತರಿಗೆ ಖಾಲಿ ಚೊಂಬು ಕೊಡುವುದನ್ನು ಈ ಬಜೆಟ್ ನಲ್ಲೂ ಅವರು ಮುಂದುವರೆಸಿದ್ದಾರೆ. ರಾಜ್ಯ ಸರಕಾರ ಮಂಡಿಸಿರುವ ಬಜೆಟ್ ರೈತ ವಿರೋಧಿಯಾಗಿದೆ. ಪ್ರದೇಶ ವ್ಯಾಪ್ತಿಯ ರೈತರಿಗೆ ವಿಶೇಷ ಪ್ಯಾಕೇಜ್ ನಿರೀಕ್ಷೆ ಮಾಡಲಾಗಿತ್ತು. ಯಾವುದೇ ವಿಶೇಷ ಯೋಜನೆ ಜಾರಿಗೊಳಿಸಿಲ್ಲ, ರೈತರ ಉಪಯೋಗಕ್ಕೆ ಬರದಂತಹ ಕೆಲ ಯೋಜನೆಗಳಿಗೆ ಸಹಾಯಧನ ಘೋಷಿಸಲಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
- ಕರುನಾಡ ಕಂದ