ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಮಾರುಕಟ್ಟೆ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಿ : ಕೆ.ರಾಜು

ಬಳ್ಳಾರಿ/ ಕಂಪ್ಲಿ: ಮಾ.08. ಎ.ಪಿ.ಎಂ.ಸಿ ಮಾರುಕಟ್ಟೆಯ ಶುಲ್ಕವನ್ನು ಆನ್‌ಲೈನ್ ಮೂಲಕ ವರ್ತಕರು ಪಾವತಿಸಲು ಜಾಗ್ರತೆವಹಿಸಬೇಕೆಂದು ಕಂಪ್ಲಿ ಎ.ಪಿ.ಎಂ‌.ಸಿ ಪ್ರಭಾರ ಕಾರ್ಯದರ್ಶಿ ಕೆ.ರಾಜು ತಿಳಿಸಿದರು.
ಪಟ್ಟಣದ ಎ.ಪಿ.ಎಂ.ಸಿ ಕಛೇರಿಯಲ್ಲಿ ಆನ್‌ಲೈನ್ ಪೇಮೆಂಟ್ ಮಾಡುವ ಹಿನ್ನಲೆ ವರ್ತಕರಿಗೆ ಶನಿವಾರ ಆಯೋಜಿಸಿದ್ದ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿ, 2025ರ ಫೆ.28 ರಿಂದ ಇಡೀ ರಾಜ್ಯಾದ್ಯಂತ ಮಾರುಕಟ್ಟೆ ಶುಲ್ಕವನ್ನು ಆನ್‌ಲೈನ್‌ನಲ್ಲಿ ಪಾವತಿಸಬೇಕಾಗಿದೆ. ಏಕೀಕೃತ ಮಾರಾಟ ವೇದಿಕೆ ಅಡಿಯಲ್ಲಿ ಆನ್‌ಲೈನ್ ಮೂಲಕ ಮಾರುಕಟ್ಟೆ ಶುಲ್ಕ ಪಾವತಿಸುವುದು ಕಡ್ಡಾಯವಾಗಿದೆ. ಆದ್ದರಿಂದ ಕಂಪ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಿಂದ ನೋಂದಾಯಿತ ವರ್ತಕರಿಗೆ ಆನ್‌ಲೈನ್ ವ್ಯವಹಾರ ಮಾಡುವುದು ಹೇಗೆ ಎಂಬುವುದರ ಬಗ್ಗೆ ತರಬೇತಿ ಮೂಲಕ ತಿಳಿಸಲಾಗಿದೆ ಎಂದರು.
ಈ ಸಂದರ್ಭದಲ್ಲಿ ಅಕ್ಕಿಗಿರಿಣಿ ಮಾಲೀಕರ ಸಂಘದ ಅಧ್ಯಕ್ಷ ಕೆ.ಎಂ.ಹೇಮಯ್ಯಸ್ವಾಮಿ, ವರ್ತಕರಾದ ಟಿ.ಕೊಟ್ರೇಶ, ಟಿ.ರಮಣಯ್ಯ, ಎಸ್.ಎಂ.ನಾಗರಾಜ, ಸತ್ಯನಾರಾಯಣಬಾಬು, ಹರೀಶ, ಹನುಮಂತರೆಡ್ಡಿ, ಸುರೇಶ, ಎ.ರಾಮಲಿಂಗಯ್ಯ, ಜಿ.ಗಿರಿಯಪ್ಪ, ಶ್ರೀನಿವಾಸ ಹಾಗೂ ಮಾರುಕಟ್ಟೆ ಮೇಲ್ವಿಚಾರಕ ಎಂ.ಸುಕೃಸ್ವಾಮಿ, ಕಂಪ್ಯೂಟರ್ ಆಪರೇಟರ್‌ಗಳಾದ ಮಂಜುನಾಥ, ಮಹ್ಮದ್‌ಗೌಸ್ ಇದ್ದರು.

ವರದಿ : ಜಿಲಾನ್ ಸಾಬ್ ಬಡಿಗೇರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ