ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಜನ ಶಿಕ್ಷಣ ಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಮತ್ತು ಯಶಸ್ವಿ ಫಲಾನುಭವಿಗಳಿಗೆ ಪ್ರಮಾಣ ಪತ್ರ ವಿತರಣಾ ಸಮಾರಂಭ

ಶಿವಮೊಗ್ಗ: ಮಹಿಳಾ ಸಬಲೀಕರಣಕ್ಕೆ ಸಮಾನತೆ ಮತ್ತು ಪ್ರಗತಿಯ ಸೇರ್ಪಡೆಯಾದಾಗ ಮಹಿಳೆ ಸಶಕ್ತಳಾಗಲು ಸಾಧ್ಯ ಎಂದು ಜನ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ. ವಾಣಿಕೋರಿಯವರು ಜನ ಶಿಕ್ಷಣ ಸಂಸ್ಥೆ ಮತ್ತು ಸ್ವಾಮಿ ವಿವೇಕಾನಂದ ವಿದ್ಯಾ ಸಂಸ್ಥೆ (ರಿ.), ಸಹಯೋಗದಲ್ಲಿ ದಿನಾಂಕ 08.3.2025ರಂದು ಸಂಸ್ಥೆಯ ಆವರಣದಲ್ಲಿ ಅಂತರ್ರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ಹಮ್ಮಿಕೊಂಡ ಮಾಹಿತಿ ಮತ್ತು ಯಶಸ್ವಿ ಫಲಾನುಭವಿಗಳಿಗೆ ಪ್ರಮಾಣ ಪತ್ರ ವಿತರಣಾ ಸಮಾರಂಭ (ಘಟಿಕೋತ್ಸವ) ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ ನುಡಿದರು.
ಮುಂದುವರೆದು ಮಾತನಾಡುತ್ತಾ ಮಹಿಳೆಯರಿಗೆ ಜೀವನದಲ್ಲಿ ಅಡೆ-ತಡೆಗಳು ಬಂದೇ ಬರುತ್ತವೆ ಅದನ್ನು ಮೀರಿ ನಡೆದರೆ ಯಶಸ್ಸು ಸಾಧ್ಯ. ಮೊದಲು ನಮ್ಮನ್ನು ನಾವು ಗುರುತಿಸಿಕೊಳ್ಳಬೇಕು. ನಾವೆಲ್ಲಾ ಹೋರಾಟದ ಹಾದಿಯನ್ನು ಹಿಡಿದಾಗ ಮಾತ್ರ ಆರ್ಥಿಕವಾಗಿ ಸಬಲರಾಗಲು ಸಾಧ್ಯ ಎಂದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದಂತಹ ಜನ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರು ಹಾಗೂ ಶಿವಮೊಗ್ಗ ಶಾಂತಲಾ ಅಟೋಮೇಷನ್ ಪ್ರೈ. ಲಿ. ಮ್ಯಾನೇಜಿಂಗ್ ಡೈರೆಕ್ಟರ್ ಶ್ರೀ ಎ. ಎಲ್. ಚಂದ್ರಶೇಖರ್ ರವರು ವಿವಿಧ ಕೌಶಲ್ಯ ತರಬೇತಿಗಳನ್ನು ಪಡೆದ ಯಶಸ್ವೀ ಫಲಾನುಭವಿಗಳಿಗೆ ಪ್ರಮಾಣ ಪತ್ರವನ್ನು ವಿತರಿಸಿ ಮಾತನಾಡುತ್ತಾ ಪ್ರಮಾಣಪತ್ರಕ್ಕೆ ಬೆಲೆ ತಂದು ಕೊಡುವ ಕೆಲಸವನ್ನು ನೀವು ಮಾಡಬೇಕು. ಡಿಜಿಟಲ್ ಮಾರ್ಕೆಟಿಂಗ್ ಬಳಸಿಕೊಂಡು ನಿಮ್ಮ ಸಮಯವನ್ನು ಸದುಪಯೋಗ ಪಡಿಸಿಕೊಳ್ಳಿ ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಜನ ಶಿಕ್ಷಣ ಸಂಸ್ಥೆಯ ನಿರ್ದೇಶಕಿ ಶ್ರೀಮತಿ ಎಸ್. ವೈ. ಅರುಣಾದೇವಿಯವರು ಮಾತನಾಡುತ್ತಾ ಭಾರತ ಸರಕಾರವು ಶಿವಮೊಗ್ಗ ಜನ ಶಿಕ್ಷಣ ಸಂಸ್ಥೆಗೆ ವಿವಿಧ ಅಭಿನಂದನಾ ಪತ್ರ ಗಳನ್ನು ನೀಡಿರುವುದು ಸಂಸ್ಥೆಗೆ ಹೆಮ್ಮೆ ಮತ್ತು ಶ್ಲಾಘನೀಯ ಎಂದರು. ಇದರ ಸದ್ಭಳಕೆಯನ್ನು ಶಿವಮೊಗ್ಗ ಜಿಲ್ಲೆಯ ಎಲ್ಲಾ ಕಲಿಕಾರ್ಥಿಗಳು ಸದುಪಯೋಗ ಪಡೆಯಬೇಕೆಂದು ಕರೆ ನೀಡಿದರು.

ವರದಿ: ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ