ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ತುಂಗಭದ್ರಾ ನದಿಯಲ್ಲಿ ನೀರುನಾಯಿಗಳ ಪುಳಕ ಅಪರೂಪದ ದೃಶ್ಯ ಕಣ್ತುಂಬಿಕೊಂಡ ಜನರು

ಬಳ್ಳಾರಿ / ಕಂಪ್ಲಿ : ಕಳೆದ ಒಂದೆರಡು ದಿನದಿಂದ ಕಂಪ್ಲಿಯ ತುಂಗಭದ್ರ ನದಿಗೆ ಹೆಚ್ಚಿನ ನೀರು ಹರಿಸಿದ್ದು, ಈ ನೀರಿನ ಹೊರ ಹರಿವಿನ ಹೆಚ್ಚಳದಿಂದಾಗಿ ನೀರುನಾಯಿಗಳು ಪ್ರತ್ಯಕ್ಷವಾಗಿದ್ದು, ಪ್ರವಾಸಿಗರನ್ನು ಆಕರ್ಷಿಸುತ್ತಿರುವುದು ಕಂಡು ಬಂದಿತು.
ಇಲ್ಲಿನ ಕಂಪ್ಲಿ-ಕೋಟೆಯ ತುಂಗಭದ್ರಾ ನದಿಯಲ್ಲಿ ಭಾನುವಾರ ತಂಡ ತಂಡವಾಗಿ ನೀರು ನಾಯಿಗಳು ಹೆಚ್ಚಾಗಿ ಪ್ರತ್ಯಕ್ಷವಾಗುತ್ತಿದ್ದು, ಪ್ರವಾಸಿಗರ ಗಮನ ಸೆಳೆಯುತ್ತಿವೆ. ನೀಳ ದೇಹ, ನೀರಿನಲ್ಲಿ ತೋಯದ ತುಪ್ಪಳದ ಚರ್ಮ, ಚಪ್ಪಟೆ ತಲೆ, ಬಲವಾದ ಬಾಲ, ಹುಟ್ಟುಗಳಿಂತಿರುವ ಕಾಲು, ಸ್ವರ್ಶ ಸೂಕ್ಷ್ಮ ಮೀಸೆ ಇದರ ದೈಹಿಕ ವಿಶೇಷತೆ. ಶುದ್ಧ ನೀರಿನಲ್ಲಿ ವಾಸಿಸುವ ನೀರುನಾಯಿ ಚಾಣಾಕ್ಷ ಮೀನು ಬೇಟೆಗಾರವಾಗಿದೆ. ತಕ್ಷಣಕ್ಕೆ ಮುಂಗುಸಿಯ ಮುಖ ಹೋಲುವ ಇದು ವಿರಳ ಗೋಚರ ಜೀವಿ. ಶಬ್ದ, ಜನರಿಂದ ದೂರವಿರುವ ಅಂಜುಬುರುಕ, ಅಪರೂಪಕ್ಕೆ ಎದುರಾಗುವ ಜಲಚರ, ಮೀನು, ಏಡಿ, ಕಪ್ಪೆ, ಬಾತುಕೋಳಿ, ನೀರುಕೋಳಿ ಬೇಟೆ ಆಡುವಲ್ಲಿ ನಿಷ್ಣಾತ, ನೀರು ನಾಯಿಗಳು ಸ್ವಚ್ಚಂದವಾಗಿ ಆಟವಾಡುವುದನ್ನು ಕಂಡು ಜನರು ಕೂಡ ಖುಷಿಯಾಗಿದ್ದಾರೆ. ಕಳೆದ ವರ್ಷ ಭರ್ತಿಯಾದ ಜಲಾಶಯದಿಂದಾಗಿ ಈಗ ನದಿಯಲ್ಲಿ ನೀರಿನ ಪ್ರಮಾಣ ತುಸು ಹೆಚ್ಚಾಗಿದ್ದು, ಹರಿವಿಯುವ ನೀರಿನ ಈಜುವ ನೀರುನಾಯಿಗಳ ದೃಶ್ಯ ಮನಮೋಹಕವಾಗಿದೆ. ಕಲ್ಯಾಣ ಕರ್ನಾಟಕದ ಜೀವನಾಡಿ ತುಂಗಭದ್ರಾ ಜಲಾಶಯದ ನದಿಯಲ್ಲಿ ಅಪರೂಪದ ಪ್ರಾಣಿ ನೀರು ನಾಯಿಗಳು ಕಂಡು ಬರುತ್ತಿರುವುದು ವನ್ಯಜೀವಿ ಪ್ರೇಮಿಗಳಿಗೆ ಖುಷಿ ತಂದಿದೆ. ಈಗಾಗಲೇ ಸರ್ಕಾರ ತುಂಗಭದ್ರಾ ಜಲಾಶಯದಿಂದ ಕಂಪ್ಲಿ ಸೇತುವೆ ವರೆಗಿನ ಪ್ರದೇಶವನ್ನು ನೀರುನಾಯಿ ಸಂರಕ್ಷಣಾ ಪ್ರದೇಶ ಎಂದು ಘೋಷಿಸಿದ ಹಿನ್ನಲೆ ನೀರು ನಾಯಿಗಳು ಸ್ವತಂತ್ರವಾಗಿ ಜೀವಿಸುತ್ತಿವೆ.
ಇಲ್ಲಿನ ಕಂಪ್ಲಿ-ಗಂಗಾವತಿ ಮಧ್ಯದ ತುಂಗಭದ್ರಾ ನದಿ ವೀಕ್ಷಣೆಗೆ ಆಗಮಿಸುವ ಪ್ರವಾಸಿಗರು ನೀರು ನಾಯಿ ಕಂಡು ಖುಷಿ ಪಡುತ್ತಿದ್ದಾರೆ. ಕೋಟೆ ಪ್ರದೇಶದ ನದಿಯಲ್ಲಿ ನೀರುನಾಯಿಗಳು ಕಂಡು ಬರುತ್ತಿವೆ. ಸೂಕ್ಷ್ಮ ಜೀವಿಗಳು ಕಂಡುಬರುತ್ತಿರುವುದು ವನ್ಯಜೀವಿ ಪ್ರೇಮಿಗಳಲ್ಲಿ ಕೂಡಾ ಆಶಾಭಾವ ಒಡಮೂಡಿದೆ. ನದಿ ಹಾಗೂ ಪಟ್ಟಣದ ಸೋಮಪ್ಪ ಕೆರೆಯಲ್ಲಿ ನೀರುನಾಯಿ ಕುಟುಂಬವೊಂದು ಪ್ರತ್ಯಕ್ಷವಾಗಿದೆ. ನದಿಯಿಂದ ಹೊರಬಂದು ಆಗಾಗ ದರ್ಶನ ನೀಡುವ ಐದಾರು ನೀರುನಾಯಿಗಳ ಗುಂಪು ಜನರ ದೃಷ್ಟಿಗೆ ನಾಚಿ ಮತ್ತೆ ನೀರಿಗೆ ಇಳಿಯುತ್ತಿವೆ. ಈ ದೃಶ್ಯವನ್ನು ಕಂಡು ಜನರು ಪುಳಕಿತರಾಗಿದ್ದಾರೆ.

ವಾಸ ಸ್ಥಾನ: ಇಲ್ಲಿನ ತುಂಗಭದ್ರಾ ನದಿಯು ನೀರುನಾಯಿಗಳಿಗೆ ವಾಸಸ್ಥಾವವಾಗಿದೆ. ನದಿಯಲ್ಲಿ ನೀರು ಹೆಚ್ಚಾದಾಗ ಮಾತ್ರ ಹೊರಗೆ ಕಾಣಿಸಿಕೊಳ್ಳುತ್ತವೆ. ತೀರಾ ನಾಚಿಕೆ ಸ್ವಭಾವದ ನೀರುನಾಯಿಗಳು ಮೂರು ದಿನಗಳಿಂದ ಕಂಪ್ಲಿ ನದಿಯಲ್ಲಿ ಪ್ರತ್ಯಕ್ಷವಾಗಿದ್ದು, ನೋಡುಗರ ಆಕರ್ಷಣೆಯ ಕೇಂದ್ರ ಬಿಂದುವಾಗಿದೆ. ನದಿಯಲ್ಲೇ ವಾಸಿಸುವ ಪರಿಯನ್ನು ಹೊಂದಿದ್ದು, ನೀರಿನ ಪ್ರಮಾಣ ಹೆಚ್ಚಾದಾಗ ಮಾತ್ರ ಹೊರಗಡೆ ಬರುವದುಂಟು. ಈ ವೇಳೆ ಮನುಷ್ಯನ ಕಣ್ಣಿಗೆ ಬೀಳುತ್ತವೆ. ನದಿಯಲ್ಲಿ ನೀರು ಹೆಚ್ಚಾದಾಗ ಆಹಾರ ಸಿಗುವುದು ಅಪರೂಪವಾಗುತ್ತದೆ. ಮೀನುಗಳು ಕೈಗೆ ಸಿಗದಿದ್ದಾಗ ಆಹಾರ ಅರಸಿ ನಾಲೆ, ಹಳ್ಳ, ನದಿ ದಡಕ್ಕೆ ಬರುತ್ತವೆ. ಏಡಿ, ಕಪ್ಪೆ ಸೇರಿ ಇತರೆ ಪ್ರಾಣಿಗಳನ್ನು ಆಹಾರವಾಗಿವೆ ಎನ್ನಲಾಗುತ್ತಿದೆ. ತುಂಗಭದ್ರಾ ನದಿಯಲ್ಲಿ ಈಜಾಡುತ್ತಿರುವ ನೀರುನಾಯಿಗಳು ಸಡಗರ, ಸಂಭ್ರಮದಿಂದ ಇರುವಂತೆ ಗೋಚರವಾಗುತ್ತಿವೆ. ಕೆಲ ಸಮಯದ ಬಳಿಕ ದಡವನ್ನೇರಿ ಕುಳಿತುಕೊಳ್ಳುತ್ತ, ಮುದ್ದಾಡುವ ದೃಶ್ಯ ಮನಮೋಹಕ. ನೀರಿನಲ್ಲಿ ಸಿಕ್ಕ ಮೀನುಗಳನ್ನು ದಡಕ್ಕೆ ತಂದು ಸೇವಿಸುವುದು ಇವುಗಳ ದಿನಚರಿಯಾಗಿದೆ. ಇಲ್ಲಿನ ನೀರಿನಲ್ಲಿ ನೀರುನಾಯಿಗಳ ಪುಳಕ ನೋಡಿ, ಪ್ರವಾಸಿಗರು ಆಕರ್ಷಿತರಾಗಿದ್ದಾರೆ.

ವಿಜ್ಞಾನ ಶಿಕ್ಷಕ ವಿ. ವಸಂತ ಕುಮಾರ ಮಾತನಾಡಿ, ನೀರಿನಲ್ಲೇ ವಾಸಿಸುವ ನೀರುನಾಯಿಗಳು ದಿನನಿತ್ಯದಲ್ಲಿ ಮೀನು ಸೇರಿದಂತೆ ನಾನಾ ಪ್ರಾಣಿಗಳ ಆಹಾರದೊಂದಿಗೆ ಜೀವನ ನಡೆಸುತ್ತವೆ. ನಡುಗಡ್ಡೆ, ಮರಳಿನ ದಿಬ್ಬಗಳಲ್ಲಿ ಬಿಸಿಲಿಗೆ ಮೈಯೊಡ್ಡಿ ವಿರಮಿಸುತ್ತವೆ. ನದಿಯಲ್ಲಿ ನೀರು ಹೆಚ್ಚಾದಾಗ ಮರಳು, ಮಣ್ಣಿನ ದಿಬ್ಬಗಳು ಕಣ್ಮರೆಯಾಗುತ್ತವೆ. ಈ ಸಮಯದಲ್ಲಿ ಮಾತ್ರ ನದಿಯ ಅಲ್ಲಲ್ಲಿ ಕಾಣಿಸಿಕೊಳ್ಳುತ್ತವೆ. ಒಮ್ಮೆ ಕಾಣಿಸಿಕೊಂಡ ಸ್ಥಳದಲ್ಲಿ ಮತ್ತೊಮ್ಮೆ ಕಣ್ಣಿಗೆ ಬೀಳುವುದು ಅಪರೂಪವಾದದ್ದು ಎಂದರು.

ವರದಿ : ಜಿಲಾನ್ ಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ