ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಗುತ್ತಿಗೆ ಕಾರ್ಮಿಕರಿಗೆ ಪ್ರತ್ಯೇಕ ಕನಿಷ್ಠ ವೇತನ ನೀಡಿ. ಇಲ್ಲವಾದಲ್ಲಿ ಹೋರಾಟಕ್ಕೆ ಸದಾ ಸಿದ್ದ : ವೆಂಕಟರಮಣಬಾಬು

ಬಳ್ಳಾರಿ/ ಕಂಪ್ಲಿ : ಗುತ್ತಿಗೆ ಪದ್ದತಿ ಕೈಬಿಟ್ಟು, ಕೆಪಿಸಿಎಲ್ (ಬಿಟಿಪಿಎಸ್) ಗುತ್ತಿಗೆ ಕಾರ್ಮಿಕರಿಗೆ ಪ್ರತ್ಯೇಕ ಕನಿಷ್ಠ ವೇತನ ನೀಡುವ ಮೂಲಕ ನ್ಯಾಯ ಒದಗಿಸಿಕೊಡಬೇಕೆಂದು ಕಾರ್ಮಿಕ ಹಿತ ರಕ್ಷಣಾ ವೇದಿಕೆ ಗೌರವಾಧ್ಯಕ್ಷ ಹಾಗೂ ಪ.ಪಂ. ಸದಸ್ಯ ವೆಂಕಟರಾಮಣಬಾಬು ಒತ್ತಾಯಿಸಿದರು.
ಕುಡತಿನಿ ಪಟ್ಟಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕೆ ಪಿ ಸಿ ಎಲ್ ನ ಬಿಟಿಪಿಎಸ್ ಶಾಖೋತ್ಪನ್ನ ಕಾರ್ಖಾನೆಯು 2006ರಲ್ಲಿ ತಲೆ ಎತ್ತಿದೆ. ಇಲ್ಲಿನ ಸುಮಾರು 12 ಸಾವಿರ ಎಕರೆ ಜಾಗದಲ್ಲಿ ಕಾರ್ಖಾನೆ ನಿರ್ಮಿಸಿದೆ. ಇಲ್ಲಿನ ಕಾರ್ಖಾನೆಯಲ್ಲಿ 2242 ಜನ ಕಾರ್ಮಿಕರು ಕಡಿಮೆ ವೇತನದಲ್ಲಿ ಕೆಲಸ ಮಾಡುತ್ತಿದ್ದಾರೆ. ಹಲವು ವರ್ಷಗಳಿಂದ ಕನಿಷ್ಠ ವೇತನ ನೀಡದೆ, ಕಡಿಮೆ ವೇತನದಲ್ಲಿ ಕಾರ್ಮಿಕರ ಬೆನ್ನು ಮುರಿಯುವಂತಹ ಕೆಲಸ ಮಾಡುತ್ತಿದ್ದಾರೆ. ಕಾರ್ಖಾನೆ ಅಧಿಕಾರಿಗಳು ಮತ್ತು ಗುತ್ತಿಗೆದಾರರು ಶಾಮೀಲು ಆಗಿ, ಕಾರ್ಮಿಕರ ಮೇಲೆ ಶೋಷಣೆ ಮಾಡುತ್ತಿದ್ದಾರೆ. ಇಲ್ಲಿನ ಕಾರ್ಮಿಕರಿಗೆ ಅನ್ಯಾಯವಾಗುತ್ತಿರುವುದನ್ನು ಪರಿಗಣಿಸಿ, 2024ರ ಸೆ.20ರಂದು ಕಾರ್ಮಿಕರ ಹಿತ ರಕ್ಷಣಾ ವೇದಿಕೆ ಅಧ್ಯಕ್ಷ ವಿ. ರಾಜಶೇಖರ ನೇತೃತ್ವದಲ್ಲಿ ಕಾರ್ಮಿಕರೊಂದಿಗೆ ಕಾರ್ಖಾನೆ ಮುಂದೆ ಪ್ರತಿಭಟನೆ ನಡೆಸಲಾಗಿತ್ತು. ಆದರೆ, ಅಧಿಕಾರಿಗಳು ನ್ಯಾಯ ಕೊಡಿಸುವ ಭರವಸೆ ನೀಡಿದ ಹಿನ್ನಲೆ ಮನವಿ ಪತ್ರ ಸಲ್ಲಿಸಿ, ಹಿಂಪಡೆಯಲಾಗಿತ್ತು. ಆದರೆ, ಇದುವರೆಗೂ ಕಾರ್ಮಿಕರಿಗೆ ನ್ಯಾಯ ಸಿಕ್ಕಿಲ್ಲ. ಈಗಾಗಲೇ ಕಾರ್ಮಿಕ ಸಚಿವ ಸಂತೋಷ ಲಾಡ್ ಗಮನಕ್ಕೆ ತಂದ ಹಿನ್ನಲೆ ಸಂಬಂಧಿಸಿದ ಕಾರ್ಖಾನೆಯವರಿಗೆ ಕಾರ್ಮಿಕರಿಗೆ ಕನಿಷ್ಠ ವೇತನ ಹೆಚ್ಚಿಸಿದಲ್ಲಿ ಆಗುವ ಆರ್ಥಿಕ ಹೊರೆಯ ಬಗ್ಗೆ ವರದಿ ನೀಡುವಂತೆ ಸರ್ಕಾರ ಕೇಳಿದೆ. ಆದ್ದರಿಂದ ಪ್ರತ್ಯೇಕ ಕನಿಷ್ಠ ವೇತನ ನೀಡಬೇಕು. ಗುತ್ತಿಗೆ ಪದ್ದತಿ ಕೈಬಿಟ್ಟು ನ್ಯಾಯ ಕೊಡಿಸಬೇಕು. ನ್ಯಾಯಸಿಗುವರೆಗೂ ಹೋರಾಟ ಕೈಬಿಡುವುದಿಲ್ಲ ಎಂದು ಎಚ್ಚರಿಸಿದರು.
ನಂತರ ಕಾರ್ಮಿಕ ಜೆ.ಬಸವರಾಜ ಮಾತನಾಡಿ, ಹಲವು ವರ್ಷಗಳಿಂದ ಕೆಲಸ ಮಾಡಿಕೊಂಡು ಬರಲಾಗಿದೆ. ಆದರೆ, ವೇತನದಲ್ಲಿ ತಾರತಮ್ಯ ಮಾಡಲಾಗುತ್ತಿದೆ. ನುರಿತ, ಅರೆನುರಿತ, ಅನ್ ಸ್ಕಿಲ್ ಕಾರ್ಮಿಕರಿಗೆ ನ್ಯಾಯ ಸಮ್ಮತ ವೇತನ ನೀಡುತ್ತಿಲ್ಲ. ಇದೇ ವರ್ಷದ ಜ.19ರಂದು ಬೆಳಗಾವಿ ಅಧಿವೇಶನ ವೇಳೆ ಸಂತೋಷ ಲಾಡ್ ಇವರಿಗೆ ಮನವಿ ಸಲ್ಲಿಸಲಾಗಿತ್ತು.
ಇದೇ ಮಾ. 4 ರಂದು ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿ, ಪ್ರತ್ಯೇಕ ಕನಿಷ್ಠ ವೇತನ, ವಿಮೆ, ಮಕ್ಕಳ ಶಿಕ್ಷಣಕ್ಕೆ ಅನುವು ಮಾಡಿಕೊಡಬೇಕು. ಹೀಗೆ ಹಲವು ಬೇಡಿಕೆಗಳನ್ನು ಈಡೇರಿಸಬೇಕೆಂದು ಕೋರಿದ ಹಿನ್ನಲೆ ಈಗ ಆರ್ಥಿಕ ಹೊರೆಯ ಸಂಬಂಧ ವರದಿಯನ್ನು ಸರ್ಕಾರ ಕೇಳಿದೆ. ಆದ್ದರಿಂದ ಕೂಡಲೇ ಕಾರ್ಖಾನೆಯವರು ಪ್ರತ್ಯೇಕ ಕನಿಷ್ಠ ವೇತನ ಜತೆಗೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದರು.
ಈ ಸಂದರ್ಭದಲ್ಲಿ ಪಪಂ ಉಪಾಧ್ಯಕ್ಷ ಕನಕೇರಿ ಪಂಪಾಪತಿ, ಕಾರ್ಮಿಕರಾದ ಅಂಬರೀಶ, ಸಾದಕ್ ಅಲಿ, ಹನುಮಯ್ಯ, ಸುರೇಶ, ರಾಘವೇಂದ್ರ, ವೆಂಕಟರೆಡ್ಡಿ, ಪ್ರಶಾಂತ, ಹುಸೇನಪ್ಪ, ಹೊನ್ನೂರಸ್ವಾಮಿ, ಲೋಕೇಶ ಇದ್ದರು.

ವರದಿ : ಜಿಲಾನ್ ಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ