ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

“ಸಿದ್ಧಗಂಗಾ ಶ್ರೀರತ್ನ” ಪ್ರಶಸ್ತಿಗೆ ಪತ್ರಕರ್ತ ಚಳ್ಳಿಗಿಡದ ಭಾಜನ

ವಿಜಯಪುರ/ ತಾಳಿಕೋಟಿ: ತಾಲೂಕಿನ ತುರಕನಗೇರಿ ಗ್ರಾಮದ ಶ್ರೀ ಸಿದ್ದಗಂಗಾ ಕಿರಿಯ ಪ್ರಾಥಮಿಕ ಶಾಲೆ ವತಿಯಿಂದ ಮಾಧ್ಯಮ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಪತ್ರಕರ್ತರಿಗೆ ಕೊಡ ಮಾಡುವ 2025 ನೇ ಸಾಲಿನ “ಸಿದ್ದಗಂಗಾ ಶ್ರೀ ರತ್ನ” ಪ್ರಶಸ್ತಿಗೆ ಪಟ್ಟಣದ ಯುವ ಪತ್ರಕರ್ತ ಅಲ್ಲಾಭಕ್ಷ ಚಳ್ಳಿಗಿಡದ ಭಾಜನ ರಾಗಿದ್ದಾರೆ. ಪಟ್ಟಣದ ಕ್ರಿಯಾಶೀಲ ಯುವ ಪತ್ರಕರ್ತರಾದ ಚಳ್ಳಿಗಿಡದ ಇವರು ಕಳೆದ ಹತ್ತು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ಸಕ್ರಿಯರಾಗಿದ್ದು, ಪ್ರಸಕ್ತ ತಮ್ಮದೇ ನೇತೃತ್ವದ TLK Express ಯೂಟ್ಯೂಬ್ ಚಾನೆಲ್ ಮತ್ತು ಯಾದಗಿರಿ ಜಿಲ್ಲೆಯ ಕಾರಂಜಿ ಎಕ್ಸ್‌ಪ್ರೆಸ್ ದಿನಪತ್ರಿಕೆಯ ತಾಳಿಕೋಟಿ ತಾಲೂಕಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು ತಮ್ಮ ನೇರ ವಸ್ತುನಿಷ್ಠ ವರದಿಗಳಿಗಾಗಿ ಚಿರಪರಿಚಿತರಾಗಿದ್ದಾರೆ. ಇದೀಗ ಶ್ರೀ ಸಿದ್ದಗಂಗಾ ಶಿಕ್ಷಣ ಸಂಸ್ಥೆಯು ಮಾಧ್ಯಮ ಕ್ಷೇತ್ರದಲ್ಲಿಯ ಅವರ ಈ ಕ್ರಿಯಾಶೀಲತೆಯನ್ನು ಗುರುತಿಸಿ ಅವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಿದೆ. ದಿ. 22.03.2025 ಶನಿವಾರ ದಂದು ತುರುಕನಗೇರಿ ಗ್ರಾಮದ ಶ್ರೀ ಸಿದ್ದಗಂಗಾ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿರುವ ಏಳನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಅವರಿಗೆ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದು ಎಂದು ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಶಮಸುದ್ದೀನ ಇನಾಮದಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವರದಿಗಾರರು ನಜೀರ್ ಅಹ್ಮದ್ ಚೋರಗಸ್ತಿ ತಾಳಿಕೋಟಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ