ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಒಳಮೀಸಲಾತಿ ಬಲಗೈ ಪಂಗಡದಿಂದ ಬೆಂಗಳೂರು ಚಲೋ ಕರಪತ್ರ ಬಿಡುಗಡೆ

ಬೀದರ್ : ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಬಲಗೈ ಪಂಗಡಗಳ ಒಕ್ಕೂಟದಿಂದ ಬೆಂಗಳೂರು ಚಲೋ ಕರಪತ್ರ ಬಿಡುಗಡೆ ಮಾಡಲಾಯಿತು.
ಇಂದು ನಗರದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ, ಮಾ.23 ರಂದು ಬೆಂಗಳೂರು ನಗರದ ವಸಂತ ನಗರದಲ್ಲಿನ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಏಕ ಸದಸ್ಯ ವಿಚಾರಣ ಆಯೋಗದ ಅಧ್ಯಕ್ಷರಾದ ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್ ನಾಗಮೋಹನದಾಸ್ ಮತ್ತು ಬಲಗೈ ಪಂಗಡ ಸಚಿವರಿಗೆ ಒಳಮೀಸಲಾತಿ ಕುರಿತು ಅಕ್ಷೇಪಣ ಮನವಿ ಸಲ್ಲಿಸಲು ಬೆಂಗಳೂರು ಚಲೋ ಕರ ಪತ್ರ ಬಿಡುಗಡೆ ಮಾಡಲಾಗಿದೆ.
ಸಮಿತಿಯ ಅಧ್ಯಕ್ಷ ಅನಿಲಕುಮಾರ್ ಬೆಲ್ದಾರ್ ಅವರು ಕರಪತ್ರ ಬಿಡುಗಡೆ ಮಾಡಿ ಮಾತನಾಡಿ, ಒಳಮೀಸಲಾತಿಯಲ್ಲಿ 1 ಪ್ರತಿಶತ ಬಲಗೈ ಸಮುದಾಯಕ್ಕೆ ಗೊಂದಲ ಆಗಿರುವುದರಿಂದ ದಲಿತ ಸಂಘಟನೆಯ ಎಲ್ಲಾ ಮುಖಂಡರುಗಳು ಸೇರಿ ಮಾ.23 ರಂದು ನಡೆಯುವ ಆಯೋಗದ ಅಧ್ಯಕ್ಷ ನಾಗಮೋಹನದಾಸ ಅವರಿಗೆ ಬಲಗೈ ಸಮುದಾಯಕ್ಕೆ ಆಗುತ್ತಿರುವ ಅನ್ಯಾಯ ಕುರಿತು ಆಕ್ಷೇಪಣೆ ಸಲ್ಲಿಸಲು ಬೀದರ ದಿಂದ 200 ಜನ ಮುಖಂಡರು ಬೆಂಗಳೂರಿಗೆ ಹೋಗುತ್ತಿದ್ದೇವೆ ಎಂದು ಹೇಳಿದರು.
ಬಲಗೈ ಸಮುದಾಯಕ್ಕೆ ಆಗುತ್ತಿರುವ ಅನ್ಯಾಯದ ಕುರಿತು ಬಲಗೈ ಸಮುದಾಯದ ಎಲ್ಲಾ ಸಚಿವರಿಗೆ ಸಮುದಾಯದ ಪರವಾಗಿ ಮಾತನಾಡಲು ಮನವಿ ಮಾಡುತ್ತೇವೆ ಎಂದರು.
ಈ ಸಂದರ್ಭದಲ್ಲಿ ಸಮಿತಿಯ ಮಹಾ ಪ್ರಧಾನ ಕಾರ್ಯದರ್ಶಿ ರಮೇಶ್ ಡಾಕುಳಗಿ, ಕಾರ್ಯಾಧ್ಯಕ್ಷ ರವಿ ಗಾಯಕವಾಡ್, ವಿನೋದ್ ಅಪ್ಪೆ, ಶ್ರೀಕಾಂತ್ ದೀನೆ, ಬಾಬುರಾವ್ ಪಾಸ್ವಾನ್, ಶಿವುಕುಮಾರ್ ನೀಲಿಕಟ್ಟಿ, ಪ್ರಧಾನ ಕಾರ್ಯದರ್ಶಿ ಪ್ರದೀಪ್ ನಾಟೇಕರ್, ಜಿಲ್ಲಾ ಸಂಯೋಜಕ ಅಂಬಾದಾಸ್ ಗಾಯಕವಾಡ್, ಜಿಲ್ಲಾ ಖಂಜಾಚಿ ಸಂದೀಪ್ ಕಾಂಟೆ, ಪ್ರಶಾಂತ್ ದೊಡ್ಡಿ ಹಾಗೂ ರಮೇಶ್ ಮಂದಕನಳ್ಳಿ ಸೇರಿದಂತೆ ಇತರರು ಭಾಗವಹಿಸಿದ್ದರು.

ವರದಿ: ರೋಹನ್ ವಾಘಮಾರೆ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ