ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಕಾಯಕವೇ ಕೈಲಾಸ

12ನೇ ಶತಮಾನದಲ್ಲಿ ಬಸವಣ್ಣನವರು ಸಾರಿದ ಕಾಯಕವೇ ಕೈಲಾಸ ಎಂಬ ಮಾತು ಇಂದಿಗೂ ಜನರ ಮನದಲ್ಲಿ ಹಸಿರಾಗಿರುವ ನುಡಿಮುತ್ತಾಗಿದೆ. ಮಾಡುವ ಕೆಲಸ ಚಿಕ್ಕದಾದರೂ ಸರಿಯೇ ದೊಡ್ಡದಾದರೂ ಸರಿ ಅದರಲ್ಲಿ ಪ್ರಾಮಾಣಿಕ ಪ್ರಯತ್ನ ಬೇಕು, ಮಾಡುವ ಕೆಲಸದಲ್ಲಿ ಕೈಲಾಸವನ್ನು ಕಾಣಬೇಕು ಎಂದು ಬಸವಣ್ಣನವರ ವಚನಸಾರವಾಗಿದೆ. ಕುಳಿತು ಉಂಡರೆ ಕುಡಿಕೆ ಹೊನ್ನು ಸಾಲದು, ಆಳಾಗಿ ದುಡಿ ಅರಸನಾಗಿ ಉಣ್ಣು ಎಂಬ ಕನ್ನಡ ಗಾದೆಗಳಲ್ಲಿಯ ಕಾಯಕದ ಮಹತ್ವವನ್ನು ತಿಳಿಸಲಾಗಿದೆ. ಆದರೆ ಪ್ರಸ್ತುತ ಜಗತ್ತಿನಲ್ಲಿ ಒಂದು ಕೆಲಸ ಮಾಡುವ ಮೊದಲೇ ಅದರಿಂದ ತಮಗಾಗುವ ಪ್ರಯೋಜನೆ ಏನು ಎಂಬ ಮನೋಭಾವ ಇರುವ ವ್ಯಕ್ತಿಗಳು ಅವರು ಯಾವ ಕೆಲಸವನ್ನು ನಿಷ್ಠೆಯಿಂದ ಮಾಡಲಾರರು. ಕಾರ್ಯವನ್ನು ಮಾಡುವುದು ನಮ್ಮ ಕರ್ತವ್ಯ ಫಲಾನುಫಲ ಅವನದು ಎಂದು ದುಡಿಯುವವರನ್ನು ಕಾಣುವುದೇ ಅಪರೂಪ. ನಾವು ಮಾಡುವ ಕೆಲಸದಿಂದ ಸಮಾಜದಲ್ಲಿ ಒಳ್ಳೆಯ ಹೆಸರಿನೊಂದಿಗೆ ನಾಲ್ಕಾರು ಜನಕ್ಕೆ ಒಳ್ಳೆಯದಾಗುವ ರೀತಿಯಲ್ಲಿ ನಡೆದುಕೊಂಡು ಸ್ವಾವಲಂಬಿ ಜೀವನವನ್ನು ನಡೆಸಿದಾಗ ಸತ್ಯವಾಗಿಯೂ ಕಾಯಕದಲ್ಲಿ ದೇವರನ್ನು ಕಾಣಬಹುದು. ಪ್ರತಿಯೊಬ್ಬರೂ ಕಾಯಕದ ಈ ಮಹತ್ವವನ್ನು ಅರಿತಾಗ ಕುಟುಂಬ, ಊರು, ನಾಡು, ಅವರಿದ್ ಅಭಿವೃದ್ಧಿ ಹೊಂದಲು ಸಾಧ್ಯ. ನಾನು ನನ್ನದು ಎಂಬ ಸ್ವಾರ್ಥದ ಮಾತುಗಳನ್ನು ತೆಗೆದುಹಾಕಿ ನಾವು ನಮ್ಮದು ಎಂಬ ವಿಶಾಲ ಮನೋಭಾವದೊಂದಿಗೆ ಒಗ್ಗಟ್ಟಾಗಿ ಕಾಯಕವನ್ನು ಮಾಡಿದರೆ ನಮ್ಮ ದೇಶ ಮುಂದುವರೆದ ರಾಷ್ಟ್ರಗಳಲ್ಲಿ ಸೇರ್ಪಡೆಯಾಗುವುದರಲ್ಲಿ ಸಂದೇಹವಿಲ್ಲ.

  • ರೇಣುಕಾ .ಮಾ. ಕಾಚಾಪುರ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ