ಬಳ್ಳಾರಿ: ಮುಂಬರುವ ಜಿಲ್ಲಾ ಪಂಚಾಯತ್ ಚುನಾವಣೆಯ ಟಿಕೆಟ್ ಆಕಾಂಕ್ಷಿಯೂ ಆಗಿದ್ದ, ಬಿಜೆಪಿ ಯುವ ನಾಯಕನೊಬ್ಬ ಏಳು ವರ್ಷದ ಬಾಲಕಿಯನ್ನು ಅಪಹರಿಸಿ ಅವರ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲ್ಲೂಕಿನ ಹಳ್ಳಿಯೊಂದರಲ್ಲಿ ನಡೆದಿದೆ ಎಂದು ವರದಿಯಾಗಿದೆ.
ದುಷ್ಕರ್ಮಿಯನ್ನು ಬಿಜೆಪಿ ಯುವ ನಾಯಕ ದೇವು ನಾಯಕ್ ಎಂದು ಗುರುತಿಸಲಾಗಿದೆ. ಆರೋಪಿಯು ಮಗು ಆಟವಾಡುತ್ತಿದ್ದಾಗ ಆಕೆಯ ಕಣ್ಣುಗಳಿಗೆ ಬಟ್ಟೆ ಕಟ್ಟಿ, ಬಾಯಿ ಮುಚ್ಚಿ, ಪ್ರತ್ಯೇಕ ಸ್ಥಳಕ್ಕೆ ಕರೆದೊಯ್ದು ನಂತರ ಅಪರಾಧ ಎಸಗಿದ್ದಾನೆ ಎಂದು ಹೇಳಲಾಗಿದೆ. ಅಷ್ಟೆ ಅಲ್ಲದೆ, ದೇವು ನಾಯಕ್ನ ಈ ಕೃತ್ಯಕ್ಕೆ ಮಹಿಳೆಯೊಬ್ಬರು ಸಹಾಯ ಮಾಡಿದ್ದಾರೆ ಎಂದು ವರದಿಯಾಗಿದೆ.
ದೇವು ನಾಯಕ್ ವಿರುದ್ಧ ಮಗುವಿನ ಕುಟುಂಬ ದೂರು ದಾಖಲಿಸಿದ್ದು, ಆತನನ್ನು ವಶಕ್ಕೆ ಪಡೆಯಲಾಗಿದೆ. ಈ ಮಧ್ಯೆ ಮಗುವನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ವರದಿಯಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ವರದಿಗಳು ಹೇಳಿವೆ.
ಮುಂಬರುವ ಬಳ್ಳಾರಿ ಚುನಾವಣೆಗೆ ಬಿಜೆಪಿ ಟಿಕೆಟ್ಗಾಗಿ ದೇವು ನಾಯಕ್ ಪೈಪೋಟಿ ನಡೆಸುತ್ತಿದ್ದ ಎನ್ನಲಾಗಿದೆ. ದುಷ್ಕರ್ಮಿ ಬಿಜೆಪಿಯ ಸಾಮಾಜಿಕ ಮಾಧ್ಯಮವನ್ನು ಸಹ ನಿರ್ವಹಿಸುತ್ತಿದ್ದ ಎಂದು ವರದಿಗಳು ಉಲ್ಲೇಖಿಸಿವೆ. ಜೊತೆಗೆ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ಆತನು ಬಿಜೆಪಿಯ ಹಲವಾರು ಪ್ರಮುಖ ನಾಯಕರೊಂದಿಗೆ ಇರುವ ಛಾಯಾಚಿತ್ರಗಳಿವೆ.
ಪ್ರಕರಣದ ಸಂಬಂಧ ಸಿರಿಗೇರಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಪೊಲೀಸರು ದೇವು ನಾಯಕನನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ ಎಂದು ವರದಿಯಾಗಿದೆ.
ಈ ಹಿಂದೆ ಕೂಡಾ ಇದೇ ರೀತಿ ಮಹಿಳೆಯ ಮೇಲೆ ಅತ್ಯಾಚಾರ ಎಸೆಗಿದ ಆರೋಪ ತಿಳಿದು ಬಂದಿದೆ.
ವರದಿ : ಜಿಲಾನ್ ಸಾಬ್ ಬಡಿಗೇರ
