ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ತುಮಕೂರು ಜಿಲ್ಲೆಯಲ್ಲಿ ತೆಂಗು ವಿಶೇಷ ಆರ್ಥಿಕ ವಲಯ ಸ್ಥಾಪನೆಮಾಡಿ : ಕೆ.ಎಸ್.ಸದಾಶಿವಯ್ಯ


ತಿಪಟೂರು : ಆತ್ಮ ನಿರ್ಭರ ಭಾರತಕ್ಕೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ರೂಪಿಸಲಾಗಿರುವ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ತುಮಕೂರು ಜಿಲ್ಲೆಗೆ ತೆಂಗು ಉತ್ಪನ್ನ ಆಯ್ಕೆಯಾಗಿರುವುದು ಜಿಲ್ಲೆಯ ತೆಂಗು ಬೆಳೆಗಾರರಿಗೆ ವರದಾನವಾಗಿದೆ.ಈ ಜಲ್ಲೆಯ ರೈತರ ಜೀವನಾಧಾರ ಬೆಳೆ ತೆಂಗನ್ನು ಈ ಯೋಜನೆಯಡಿ ತರುವಲ್ಲಿ ಶ್ರಮಿಸಿದ ತುಮಕೂರು ಲೋಕಸಭಾ ಸದಸ್ಯರಾದ ಜಿ.ಎಸ್.ಬಸವರಾಜುರವರಿಗೆ ತಿಪಟೂರು ತಾಲ್ಲೂಕು ಕೃಷಿಕ ಸಮಾಜದ ಜಿಲ್ಲಾ ಪ್ರತಿನಿಧಿ ಕೆ.ಎಸ್.ಸದಾಶಿವಯ್ಯ ಅಭಿನಂದಿಸಿದ್ದಾರೆ.
ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುವ ಅವರು ಜಿಲ್ಲೆಯ ಅದರಲ್ಲೂ ತಿಪಟೂರು ಕೊಬ್ಬರಿಗೆ

ವಿದೇಶದಲ್ಲೂ ಬಾರಿ ಬೇಡಿಕೆ ಇದೆ. ಈಗ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ತುಮಕೂರಲ್ಲಿ ತೆಂಗು ಆಯ್ಕೆಯಾಗಿರುವುದರಿಂದ ವಿವಿದ ಆಯಾಮಗಳಲ್ಲಿ ಮಾರುಕಟ್ಟೆ ವಿಸ್ತರಣೆಯಾಗುವುದರ ಜೊತೆಗೆ ಉದ್ಯೋಗವಕಾಶಗಳು ಸಿಗದಿದೆ. ಆದ್ದರಿಂದ ತೆಂಗಿನ ಉತ್ಪನ್ನಗಳನ್ನು ಒಂದು ಬ್ರಾಂಡ್‌ಮಾಡಿ ರಫ್ತು ಮಾಡಬಹುದಾಗಿದೆ. ಇದಕ್ಕಾಗಿ ತೆಂಗಿನ ಉತ್ಪನ್ನಗಳು ಬ್ರಾಂಡ್ ಆಗಬೇಕು ಆದ್ದರಿಂದ ತಿಪಟೂರು ತಾಲ್ಲೂಕು ಕಿಬ್ಬನಹಳ್ಳಿಕ್ರಾಸ್ ಬಳಿ ಬೀರಸಂದ್ರ ಗ್ರಾಮದ ಸರ್ವೆ ನಂ 7ರಲ್ಲಿ ಸರ್ಕಾರಿ ಜಾಗವಿದ್ದು ತೆಂಗು ವಿಶೇಷ ಆರ್ಥಿಕ ವಲಯ ಸ್ಥಾಪಿಸಬಹುದಾಗಿದೆ. ಇದು ಸುಧೀರ್ಘ ಪ್ರಕ್ರಿಯೆಯಾಗಿದ್ದು ಕಾರ್ಯರೂಪಕ್ಕೆ ಬಂದಿದ್ದೇ ಆದಲ್ಲಿ ಜಿಲ್ಲೆಗೆ ನಿಜಕ್ಕೂ ಆಶಾಕಿರಣವಾಗಿದೆ. ಈ ನಿಟ್ಟಿನಲ್ಲಿ ಜಿಲ್ಲೆಯ ಸಂಸದರಾದ ಜಿ.ಎಸ್.ಬಸವರಾಜು ಕಾರ್ಯಪ್ರೌವೃತ್ತರಾಗಬೇಕೆಂದು ಕೆ.ಎಸ್.ಸದಾಶಿವಯ್ಯ ಮನವಿಮಾಡಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ