ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಅಂಬೇಡ್ಕರ್ ಜಯಂತಿ ಪೂರ್ವಭಾವಿ ಸಭೆ

ಬಳ್ಳಾರಿ / ಕಂಪ್ಲಿ : ತಾಲೂಕು ಆಡಳಿತ ಕಛೇರಿಯಲ್ಲಿ ವಿಶ್ವಮಾನವ, ಭಾರತ ರತ್ನ, ಸಂವಿಧಾನದ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜಯಂತಿಯ ಪೂರ್ವಭಾವಿ ಸಭೆ ನಡೆಯಿತು. ಈ ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು, ಸ್ಥಳೀಯ ಪ್ರತಿನಿಧಿಗಳು ಹಾಗೂ ಸಮಾಜದ ಗಣ್ಯರು ಭಾಗವಹಿಸಿದ್ದರು.
ಸಭೆಯಲ್ಲಿ ಅಂಬೇಡ್ಕರ್ ಜಯಂತಿಯನ್ನು ಶಿಸ್ತಿನಿಂದ ಹಾಗೂ ಗೌರವದಿಂದ ಆಚರಿಸುವ ಕುರಿತು ಮಹತ್ವದ ಚರ್ಚೆಗಳು ನಡೆದವು. ಸಾರ್ವಜನಿಕರಿಗೆ ಸ್ವಚ್ಛತೆ ಸಂದೇಶ ಸಾರುವುದು, ಭದ್ರತಾ ವ್ಯವಸ್ಥೆ ಮಾಡುವುದು ಹಾಗೂ ಕಾರ್ಯಕ್ರಮದ ರೂಪುರೇಷೆಗಳನ್ನು ಸಿದ್ಧಪಡಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಹಶೀಲ್ದಾರ್ ಶಿವರಾಜ್ ತಿಳಿಸಿದರು.
ಅಲ್ಲದೆ, ಅಂಬೇಡ್ಕರ್ ಜಯಂತಿಯನ್ನು ಸರಕಾರದ ಮಾರ್ಗಸೂಚಿಯಂತೆ ಆಚರಿಸಲು ತಾಲೂಕು ಆಡಳಿತ ಎಲ್ಲ ರೀತಿಯ ಸಿದ್ಧತೆಗಳನ್ನು ಕೈಗೊಂಡಿದೆ. ಈ ಸಭೆಯಲ್ಲಿ ದಲಿತಪರ ಸಂಘಟನೆಗಳು, ರೈತ ಸಂಘಟನೆಗಳು ಮತ್ತು ಕರ್ನಾಟಕ ಬೌದ್ಧ ಸಮಾಜದ ಪ್ರತಿನಿಧಿಗಳು ಸಹ ಭಾಗವಹಿಸಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ