ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸಂಭ್ರಮದ ಮಹಾವೀರ ಜಯಂತಿ

ಬಳ್ಳಾರಿ : ಕಂಪ್ಲಿ : ಶಾಂತಿಯ ಸಂದೇಶ ಸಾರಿದ ಭಗವಾನ್ ಮಹಾವೀರರ ಆದರ್ಶ, ತತ್ವಗಳು ಸರ್ವಕಾಲಕ್ಕೂ ಪ್ರಸ್ತುತ ಎಂದು ಇಲ್ಲಿಯ ಜೈನ ಸಮುದಾಯದ ಶಾಂತಿಲಾಲ್ ಬಾಲಾರ್ ಹೇಳಿದರು.
ಪಟ್ಟಣದಲ್ಲಿ ಗುರುವಾರ ಮಹಾವೀರ ಜಯಂತಿ ಅಂಗವಾಗಿ ಜೈನ ಸಮುದಾಯದವರು ಏರ್ಪಡಿಸಿದ್ದ ಮಹಾವೀರರ ಮೂರ್ತಿಯ ಭವ್ಯ ಮೆರವಣಿಗೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಜೈನ ಧರ್ಮಿಯರು ತತ್ವಗಳಲ್ಲಿರುವ ಬಡವರಿಗಾಗಿ ದಯೆ, ಪ್ರೀತಿ, ಕರುಣೆಯ ಪ್ರತೀಕವಾಗಿ ನೀರಿನ ಅರವಟಿಗೆ, ಬಸ್ ತಂಗುದಾಣ ಆರೋಗ್ಯ ಶಿಬಿರಗಳನ್ನು ಸಮಾಜದ ವತಿಯಿಂದ ಆಯೋಜಿಸಿ ಸಮಾಜಮುಖಿ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ.
ಜಯಂತಿ ಅಂಗವಾಗಿ ಮಹಾವೀರ ಮೂರ್ತಿಗೆ ಅಲಂಕರಿಸಿ, ಜೈನ ಮಂದಿರದಿಂದ ಮುಖ್ಯ ರಸ್ತೆಯ ಮೂಲಕ ಅಂಬೇಡ್ಕರ್ ವೃತ್ತದವರೆಗೂ ಭವ್ಯ ಮೆರವಣಿಗೆ ನಡೆಸಲಾಯಿತು.
ಮೆರವಣಿಗೆಯಲ್ಲಿ ಮಹಿಳೆಯರು, ಯುವಕರು ಮಹಾವೀರರ ಶಾಂತಿ ಸಂದೇಶಗಳುಳ್ಳ ಹಾಡುಗಳನ್ನು ಹಾಡುತ್ತಾ, ಸಾಗಿದರು.
ಸಮುದಾಯದ ಹಿರಿಯ ಮುಖಂಡರಾದ ಪಾರಸ್ ಮಲ್ ಹುಂಡಿಯ, ಜೋರಾಮಲ್ ಬಾಗ್ರೆಚ್, ಶಾಂತಿಲಾಲ್ ಸಿಂಘ್ವಿ , ಗೌತಮ್ ಬಾಗ್ರೇಜ್ , ಫತೇಕುಮಾರ ಭಾಪನಾ, ಸೇರಿದಂತೆ ಇತರರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

ವರದಿ : ಜಿಲಾನ್ ಸಾಬ್ ಬಡಿಗೇರ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ