ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಶುದ್ಧ ಕುಡಿಯುವ ನೀರಿನ ಘಟಕ ದುರಸ್ತಿಗೆ ಆಗ್ರಹ

ಕೆಟ್ಟು ನಿಂತು ವರ್ಷ ಕಳೆದರೂ ಸರಿಪಡಿಸದ ಅಧಿಕಾರಿಗಳು

ಯಾದಗಿರಿ/ಗುರುಮಠಕಲ್: ಪಟ್ಟಣದ ಕೃಷಿ ಮಾರುಕಟ್ಟೆ (ಎ.ಪಿ.ಎಮ್.ಸಿ) ಯಲ್ಲಿ ಕಳೆದ ಒಂದು ವರ್ಷದಿಂದ ಶುದ್ದ ಕುಡಿಯುವ ನೀರಿನ ಘಟಕ ಕೆಟ್ಟು ನಿಂತಿದ್ದು, ಕುಡಿಯುವ ನೀರಿಗಾಗಿ ಪ್ರತಿ ನಿತ್ಯ ಬರುವ ರೈತರು ಪರದಾಡುವಂತಾಗಿದೆ
ಬೇಸಿಗೆಯ ಧಗೆಯಿಂದಾಗಿ ತಾಪಮಾನದಲ್ಲಿ ಭಾರೀ ಏರಿಕೆಯಾಗಿದೆ. ಹಗಲಿನ ವೇಳೆಯಲ್ಲಿ ಜನ ಮನೆಗಳಿಂದ ಹೊರ ಬರಲಾಗದಂತಹ ಸ್ಥಿತಿ ಇದೆ. ಇಂತಹ ಪರಿಸ್ಥಿತಿ ಸಂದರ್ಭದಲ್ಲಿ ತಾಲ್ಲೂಕಿನ ಕೃಷಿ ಮಾರುಕಟ್ಟೆಗೆ ಪ್ರತಿದಿನ ಸುತ್ತಮುತ್ತಲಿನ ರೈತರು ತಾವು ಬೆಳೆದ ಧಾನ್ಯಗಳ ಮಾರಾಟ ಮಾಡಲು ಬರುತ್ತಾರೆ, ವಾರಕೊಮ್ಮೆ ಇಲ್ಲಿ ಪಶುಗಳ ಸಂತೆ ನಡೆಯುತ್ತದೆ, ಇಲ್ಲಿಗೆ ನೆರೆಯ ತೆಲಂಗಾಣ ಹಾಗೂ ಪಕ್ಕದ ಸೇಡಂ ತಾಲೂಕಿನ ಜನ ಸಹ ಇಲ್ಲಿ ಪಶುಗಳ ಖರೀದಿ ,ಮಾರಾಟಕ್ಕೆ ಬರುತ್ತಾರೆ, ಇಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಾಣವಾಗಿ ಕೆಟ್ಟು ನಿಂತು ವರ್ಷ ಕಳೆದರೂ ಸಂಬಂಧಪಟ್ಟ ಅಧಿಕಾರಿಗಳು ನೀರಿನ ಘಟಕ ಸರಿಪಡಿಸದೆ ಇರುವುದು, ರೈತರು ನೀರಿಗಾಗಿ ತೊಂದರೆ ಅನುಭವಿಸುವಂತಾಗಿದೆ.
ಶುದ್ಧ ಕುಡಿಯುವ ನೀರಿನ ಘಟಕ ದುರಸ್ತಿ ಮಾಡುವಂತೆ ಸಂಬಂಧ ಪಟ್ಟ ಅಧಿಕಾರಿಗಳಿಗೆ ಕೇಳಿದರೆ ಸರಿಯಾದ ಉತ್ತರ ಸಿಗುತ್ತಿಲ್ಲ ಎನ್ನುವುದು ಸಾರ್ವಜನಿಕರ ಆಗ್ರಹವಾಗಿದೆ. ಬಹು ಬೇಗ ಸಂಬಂಧ ಪಟ್ಟ ಅಧಿಕಾರಿಗಳು ದುರಸ್ಥಿ ಮಾಡಿಸಲು ಮುಂದಾಗಬೇಕು.

ವರದಿ: ಜಗದೀಶ್ ಕುಮಾರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ