ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ವಿಜೃಂಭಣೆಯ ಅಂಬೇಡ್ಕರ್ ಭಾವಚಿತ್ರ ಮೆರವಣಿಗೆ

ಬಳ್ಳಾರಿ / ಕಂಪ್ಲಿ : ಹುಲಿಗೆಮ್ಮ ಕ್ಯಾಂಪಿನ ಅಂಬೇಡ್ಕರ್ ಯುವಕರ ಬಳಗದಿಂದ ಅಂಬೇಡ್ಕರ್ ಭಾವಚಿತ್ರ ಮೆರವಣಿಗೆ ಪಟ್ಟಣದಲ್ಲಿ ವಿಜೃಂಭಣೆಯಿಂದ ಸೋಮವಾರ ಜರುಗಿತು.
ಇಲ್ಲಿನ ಕ್ಯಾಂಪಿನ ರಕ್ಷಣಾ ವೇದಿಕೆ ಕಟ್ಟೆಯಿಂದ ಅಂಬೇಡ್ಕರ್ ವೃತ್ತದವರೆಗೆ ಬೃಹತ್ ಮೆರವಣಿಗೆ ಆರಂಭಗೊಂಡು, ಸಕ್ಕರೆ ಕಾರ್ಖಾನೆ ಮೂಲಕ ಅಂಬೇಡ್ಕರ್ ವೃತ್ತಕ್ಕೆ ತೆರಳಿ, ಪುನಃ ಕ್ಯಾಂಪಿನಲ್ಲಿ ಸಮಾವೇಶಗೊಂಡಿತು. ಧ್ವನಿ ವರ್ಧಕದ ಹಾಡುಗಳಿಗೆ ಯುವಕರು ಹೆಜ್ಜೆ ಹಾಕುವ ಮೂಲಕ ಸಂಭ್ರಮಿಸಿದರು.
ನಂತರ ಕ್ಯಾಂಪಿನ ಸಮುದಾಯ ಭವನದಲ್ಲಿ ವೇದಿಕೆ ಕಾರ್ಯಕ್ರಮ ಅಚ್ಚುಕಟ್ಟಾಗಿ ಜರುಗಿತು. ಯುವ ಮುಖಂಡ ಡಿಎಸ್ ಪ್ರಸಾದ್ ಮಾತನಾಡಿ, ಸಂವಿಧಾನ ರಚನೆಯಿಂದಾಗಿ ಸ್ವತಂತ್ರದ ಹಕ್ಕುಗಳನ್ನು ಪಡೆಯಲು ಸಾಧ್ಯವಾಗಿದೆ. ಸಮಾತನೆಯನ್ನು ಸಾರಿದ ಮಹಾನ್ ವ್ಯಕ್ತಿ ಅಂಬೇಡ್ಕರ್ ಇವರ ಆದರ್ಶಗಳನ್ನು ಪಾಲಿಸಬೇಕೆಂದರು.
ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷ ಭಟ್ಟ ಪ್ರಸಾದ್, ಸದಸ್ಯ ವೀರಾಂಜನಿ, ಪಿಐ ಕೆ.ಬಿ.ವಾಸುಕುಮಾರ ಮುಖಂಡರಾದ ಲಕ್ಷ್ಮಿಪತಿ, ಶ್ರೀನಿವಾಸ, ಎನ್.ಗಂಗಣ್ಣ, ಓಬಳೇಶ, ಹೊನ್ನೂರಪ್ಪ, ದೊಡ್ಡರಾಜು, ಪೆದ್ದಣ್ಣ, ಕಳವಳಿ ರಾಜು, ಯಲ್ಲಪ್ಪ ಸೇರಿದಂತೆ ಅನೇಕರಿದ್ದರು.

ವರದಿ : ಜಿಲಾನ್ ಸಾಬ್ ಬಡಿಗೇರ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ