ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಶಾಂತಿನಿಕೇತನ ಶಾಲೆಯಲ್ಲಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜಯಂತಿ ಆಚರಣೆ.

ಯಾದಗಿರಿ/ ಗುರುಮಠಕಲ್: ಚೆಪೆಟ್ಲಾ ಗ್ರಾಮದ ಶಾಂತಿನಿಕೇತನ ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ ಇಂದು ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ 134 ನೇಯ ಜಯಂತಿಯನ್ನು ಶಾಲೆಯ ನಿರ್ದೇಶಕರು, ಶಿಕ್ಷಕರು ಮತ್ತು ಮಕ್ಕಳು ಆಚರಿಸಿದರು.

ಜಯಂತಿಯನ್ನು ಉದ್ದೇಶಿಸಿ ಮಾತನಾಡಿದ ಶ್ರೀ ಅಶೋಕ್ ಯಾದವ್ ಶಿಕ್ಷಕರು ಬಾಬಾ ಸಾಹೇಬರು ಹೇಳಿದಂತೆ ಜ್ಞಾನ ಪ್ರತಿಯೊಬ್ಬ ವ್ಯಕ್ತಿಯ ಜೀವನಕ್ಕೆ ಆಧಾರ ಮತ್ತು ಬದುಕು ಸುದೀರ್ಘವಾಗಿರುವುದಕ್ಕಿಂತ ಶ್ರೇಷ್ಠವಾಗಿರಬೇಕು ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸುವುದು ಮುಖ್ಯ ಎಂದು ಹೇಳಿದರು.

ತದ ನಂತರ ಮಾತನಾಡಿದ ಶ್ರೀ ಗೌರಿ ಶಂಕರ ಪಾಟೀಲ ಕಾರ್ಯದರ್ಶಿಗಳು, ಡಾ. ಬಿ.ಆರ್. ಅಂಬೇಡ್ಕರ್ ಜನಿಸಿದ್ದರು. ಬಾಲ್ಯದಲ್ಲಿ ಸಾಕಷ್ಟು ಕಷ್ಟಗಳನ್ನು ಕಂಡಿದ್ದ ಅಂಬೇಡ್ಕರ್ ಅವರು ತಮ್ಮ ಛಲ ಸಾಧನೆಯ ಮೂಲಕ ಭವ್ಯ ಭಾರತದ ಕನಸು ಕಾಣುತ್ತಾ ಬೆಳೆದು ನಮ್ಮ ದೇಶದ ಪ್ರಮುಖ ನಾಯಕರಲ್ಲಿ ಒಬ್ಬರಾಗಿ ರೂಪುಗೊಂಡರು ಎಂದು ಹೇಳಿದರು.
ಹಾಗೆ ಮುಂದುವರೆಸುತ್ತಾ ನಮ್ಮ ಯಾದಗಿರಿ ಜಿಲ್ಲೆ ಪಿಯುಸಿ ಫಲಿತಾಂಶ ಗ್ರಾಮೀಣ ಭಾಗದ ವಿದ್ಯಾರ್ಥಿಗಳೇ ನಗರ ಭಾಗದ ವಿಧ್ಯಾರ್ಥಿಗಳಿಗಿಂತ ಹೆಚ್ಚು ಉತ್ತೀರ್ಣರಾಗಿದ್ದರೆ, ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಪಡೆಯಲು ಮತ್ತು ಸರ್ಕಾರಿ ಉದ್ಯೋಗಗಳ ನೇಮಕಾತಿಯಲ್ಲಿ ಗ್ರಾಮೀಣ ಮೀಸಲಾತಿ ಸೌಲಭ್ಯದ ಲಾಭ ಪಡೆಯಬೇಕು ಪೋಷಕರು ತಮ್ಮ ಮಕ್ಕಳನ್ನು ಗ್ರಾಮೀಣ ಭಾಗದ ಶಾಲೆಗಳಿಗೆ ಕಳುಹಿಸುವ ಮೂಲಕ ಗ್ರಾಮೀಣ ಶಾಲೆಗಳ ಹಾಗೂ ಶಿಕ್ಷಣ ವ್ಯವಸ್ಥೆ ಸುಧಾರಣೆಯಾಗಲು ಮುಂದಾಗಬೇಕು ಎಂದು ಹೇಳಿದರು.

ಜಯಂತಿಯ ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕರಾದ ಸಾಬಣ್ಣ , ಅಂಬರೀಷ , ಕರ್ಣ ಗೌಡ, ಮಣಿಕಂಟ,ರಾಧಿಕಾ ಶಿಕ್ಷಕಿ ಮತ್ತು ಮಕ್ಕಳು ಹಾಜರಿದ್ದರು.

ವರದಿ: ಜಗದೀಶ್ ಕುಮಾರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ