ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಡಾ.ಬಿ.ಆರ್ ಅಂಬೇಡ್ಕರ್ ಜಯಂತಿ ಆಚರಣೆ

ಬಳ್ಳಾರಿ / ಕಂಪ್ಲಿ : ನಿವೇದಿತಾ ಆಂಗ್ಲ ಮಾಧ್ಯಮ ಶಾಲೆ ಕಂಪ್ಲಿಯಲ್ಲಿ ಭಾರತರತ್ನ ಡಾ.ಬಿ.ಆರ್. ಅಂಬೇಡ್ಕರ್ ಅವರ 134ನೇ ಜಯಂತಿಯನ್ನು ಆಚರಿಸಲಾಯಿತು.

ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಮುಖ್ಯ ಗುರುಗಳು ಹೆಚ್. ಮರಿಯಪ್ಪ ಮಾತಾನಾಡಿ ಪ್ರತಿಯೊಬ್ಬ ತುಳಿತಕ್ಕೊಳಗಾದ ವ್ಯಕ್ತಿಯು ” ಶಿಕ್ಷಣ” “ಸಂಘಟನೆ” “ಹೋರಾಟದ” ಮೂಲಕ ತನ್ನನ್ನು ತಾನು ಬದಲಾಯಿಸಿಕೊಂಡು ಸಮಾಜದ ದುರ್ಬಲರನ್ನು ಸಬಲರನ್ನಾಗಿ ಮಾಡಬೇಕೆಂದು ಕರೆ ಕೊಟ್ಟ ಹಾಗೂ ಆರ್ಥಿಕ ಸಾಮಾಜಿಕ ಸ್ವಾತಂತ್ರ್ಯವೇ ನಿಜವಾದ ಸ್ವಾತಂತ್ರ್ಯವೆಂದು ಸಾರಿ ಹೇಳಿದ “ಭಾರತ ರತ್ನ” ಭೀಮರಾವ್ ಅಂಬೇಡ್ಕರ್ ” ಅವರ ಆದರ್ಶಗಳು ಹಾಗೂ ತತ್ವಗಳು ನಮ್ಮ ಜೀವನದ ಪಥದೀಪವಾಗಬೇಕು. ವಿಶೇಷವಾಗಿ ಯುವಕರು ಅವರ ಕೊಡುಗೆಗಳನ್ನು ಗುರುತಿಸಿ, ಅವರು ಹಾಕಿಕೊಟ್ಟಿರುವ ಸಂವಿಧಾನದ ಮಾರ್ಗದಲ್ಲಿ ನಡೆಬೇಕು. ಅಂಬೇಡ್ಕರ್ ಎಂಬ ಮಹಾನ್ ಚೇತನ ಸಂಘರ್ಷದ ಅನುಭವದಿಂದ ಹುಟ್ಟಿಕೊಂಡ ವ್ಯಕಿತ್ವ. ಅವರ ಮನಸ್ಸಿನಲ್ಲಿ ಅಂದು ಮೂಡಿದ ಸಮಾನತೆಯ ಪ್ರಜ್ಞೆ ,ಭವ್ಯ ಭಾರತಕ್ಕೆ ಬಲಿಷ್ಠ ಸಂವಿಧಾನವನ್ನು ನೀಡುವಂತೆ ಪ್ರೇರೆಪಿಸಿತು. ನಮ್ಮ ಇಂದಿನ ದಿನ ನಿತ್ಯದ ಜೀವನ ನಮ್ಮ ಸಂವಿಧಾನದ ತಳಹದಿಯ ಮೇಲೆ ನಿಂತಿದೆ. ಅಂದು ಅಂಬೇಡ್ಕರ್ ಸಮಸ್ಯೆಯ ಭಾಗವಾಗಿ, ಕಷ್ಟಕಾರ್ಪಣ್ಯಗಳನ್ನು ಎದುರಿಸಿದ್ದರಿಂದಾಗಿ ಸಮಾಜದಲ್ಲಿನ ಶೋಷಿತರ ಭವಣೆಯನ್ನು ಅರಿಯಲು ಸಾಧ್ಯವಾಯಿತು. ಅಂತಹ ಶೋಷಿತರಿಗೆ ಸಮಾಜದಲ್ಲಿ ಗೌರವಯುತವಾಗಿ ಬದುಕುವ ಪರಿಸ್ಥಿತಿಯನ್ನು ತರಲು ಪ್ರೇರೆಪಿಸಿತು ಎಂದರು.

ಈ ಸಂದರ್ಭದಲ್ಲಿ ಶಾಲೆ ಶಿಕ್ಷಕರು ಸಿಬ್ಬಂದಿ ವರ್ಗ ಮತ್ತು ಮಕ್ಕಳು ಉಪಸ್ಥಿತರಿದ್ದರು.

ವರದಿ : ಜಿಲಾನ್ ಸಾಬ್ ಬಡಿಗೇರ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ