ನವದೆಹಲಿ: ಮುಂದಿನ ವಿಚಾರಣೆಯವರೆಗೆ ವಕ್ಫ್ ನೇಮಕಾತಿ ಮಾಡುವಂತಿಲ್ಲ ಹಾಗೂ ಯಥಾಸ್ಥಿತಿ ಕಾಪಾಡಿಕೊಳ್ಳಬೇಕು ಎಂದು ಗುರುವಾರ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ.
ಬಳೆದಾರರಿಂದ ವಕ್ಫ್ ಆಸ್ತಿಗಳನ್ನು ಡಿನೋಟಿಪೈ ಮಾಡುವುದು, ವಕ್ಫ್ ಮಂಡಳಿಯಲ್ಲಿ ಮುಸ್ಲಿಮೇತರರಿಗೆ ಅವಕಾಶ, ವಕ್ಫ್ ಭೂಮಿಯ ಮೇಲೆ ಜಿಲ್ಲಾಧಿಕಾರಿಯ ಅಧಿಕಾರದ ನಿಬಂಧನೆಗಳ ಬಗ್ಗೆ ವಿವರವಾದ ವರದಿ ನೀಡಲು ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚಿಸಿತು.
ಈ ಮೂರು ನಿಬಂಧನೆಗಳ ಕುರಿತು ಮಧ್ಯಂತರ ಆದೇಶ ಹೊರಡಿಸಲಾಗುವುದು ಎಂದು ಸುಪ್ರೀಂಕೋರ್ಟ್ ವಿಚಾರಣೆಯ ವೇಳೆ ತಿಳಿಸಿದಾಗ, ಆದೇಶಕ್ಕೂ ಮೊದಲು ವಿವರವಾದ ವಿಚಾರಣೆಗೆ ಕೇಂದ್ರ ಸರ್ಕಾರವು ಒಂದು ವಾರ ಗಡುವು ಕೇಳಿತು. ಇದಕ್ಕೆ ನ್ಯಾಯಪೀಠವು ಒಪ್ಪಿಗೆ ನೀಡಿದೆ.
ವರದಿ : ಜಿಲಾನಸಾಬ್ ಬಡಿಗೇರ್.
