ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಹದನೂರ ಗ್ರಾಮದ ಕೆಲ ಮುಖಂಡರು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

ಯಾದಗಿರಿ ಜಿಲ್ಲೆಯ ಶಹಾಪುರ ವಿಧಾನಸಭಾ ಮತಕ್ಷೇತ್ರದ ಹದನೂರ ಗ್ರಾಮದ ಕೆಲ ಬಿಜೆಪಿ ಮುಖಂಡರುಗಳು ಕಾಂಗ್ರೆಸ್ ಪಕ್ಷ ಸೇರ್ಪಡೆಯಾದರು. ಕಾರ್ಯಕ್ರಮದಲ್ಲಿ ಹಿರಿಯ ಕಾಂಗ್ರೆಸ್ ಮುಖಂಡರುಗಳ ಆದೇಶದಂತೆ ಭಾಗವಹಿಸಿ,ಸನ್ಮಾನ್ಯ ಮಾಜಿ ಸಚಿವರು ಹಾಗೂ ಜನಪ್ರೀಯ ಶಾಸಕರು ಶರಣಬಸಪ್ಪಗೌಡ ದರ್ಶನಾಪುರ ಸಾರಥ್ಯದಲ್ಲಿ ಪಕ್ಷ ಸೇರ್ಪಡೆಯಾದರು ಕಾರ್ಯಕ್ರಮದಲ್ಲಿ ಬೇರೆ ಪಕ್ಷಗಳನ್ನು ತೊರೆದು ನಮ್ಮ ಜನಪ್ರಿಯ ಶಾಸಕರಾದ ಶರಣಬಸಪ್ಪಗೌಡ ದರ್ಶನಾಪುರ ರವರ ಕಾರ್ಯವೈಖರಿಯನ್ನು ಮೆಚ್ಚಿ ಶಾಸಕರು ಹಾಗೂ ನಮ್ಮ ಶಹಾಪುರ ಮತಕ್ಷೇತ್ರದ ಹಿರಿಯ ಮುಖಂಡರಾದ ಶರಣಪ್ಪಣ್ಣ ಸಲದಾಪುರ,ಬಸನಗೌಡ ಹೊಸಮನಿ ಯಾಳಗಿ ಬಸವರಾಜ ಪಾಟೀಲ‌ ಚಿಂಚೋಳಿ (ಅಧ್ಯಕ್ಷರು ಬ್ಲಾಕ್ ಕಾಂಗ್ರೇಸ್ ಕೆಂಭಾವಿ) ಸೇರಿದಂತೆ ಇನ್ನೂ ಅನೇಕ ಗಣ್ಯರ ಸಮ್ಮುಖದಲ್ಲಿ ಪಕ್ಷದ ಶಾಲನ್ನು ಹಾಕಿಕೊಳ್ಳುವುದರ ಮೂಲಕ ಸುಮಾರು 50 ಜನ ಕ್ಕೂ ಹೆಚ್ಚು ವೀರನಗೌಡ ದೇಸಾಯಿ ಅವರ ನೇತೃತ್ವದಲ್ಲಿ ಪಕ್ಷ ಸೇರ್ಪಡೆಯಾದರು ಇದೇ ಸಂದರ್ಭದಲ್ಲಿ ಶರಣಬಸಪ್ಪಗೌಡ ದರ್ಶನಾಪುರ ಮಾಜಿ ಸಚಿವರು ಹಾಗೂ ಜನಪ್ರೀಯ ಶಾಸಕರು ಆದ ಇವರು ಕರ್ನಾಟಕ ಕಾಂಗ್ರೆಸ್ ನಲ್ಲಿ ಪಕ್ಷಕ್ಕೆ ಉನ್ನತ ಸೇವೆ ಮಾಡುವುದರ ಜೊತೆಗೆ ಇವರದ್ದೇ ಆದ ಹೆಜ್ಜೆ ಗುರುತನ್ನು ಮೂಡಿಸಿದ್ದಾರೆ.KPCC ಯ ಚುನಾವಣಾ ಸಮಿತಿಯ‌ ಸದಸ್ಯರಾಗಿರುವ ಸಲುವಾಗಿ ನಗನೂರ ಗ್ರಾಮದ ಕಾಂಗ್ರೆಸ್ ಪಕ್ಷದ ಯುವ ಮುಖಂಡರು ಹಾಗೂ ಗ್ರಾಮ ಪಂಚಾಯಿತಿ ಸದಸ್ಯರಾದ ಮಹಾಂತಗೌಡ ಎಸ್ ಪಾಟೀಲ ಅವರು ಗೌರವ ಪೂರ್ವಕವಾಗಿ ಸನ್ಮಾನಿಸಿದರು.ಈ ಕಾರ್ಯಕ್ರಮಕ್ಕೆ ನಗನೂರ ಗ್ರಾಮ ಪಂ.ಸದಸ್ಯರುಗಳಾದ ಶಿವಶರಣರೆಡ್ಡಿ ಕೆಂಚಾಗೋಳ,ವಿಶ್ವನಾಥ ಹವಾಲ್ದಾರ & ಶರಣಪ್ಪ ಗಾಯಕವಾಡ ರವರು ಕೂಡ ಭಾಗವಹಿಸಿದ್ದರು.

ವರದಿ:ರಾಜಶೇಖರ ಮಾಲಿ ಪಾಟೀಲ ಶಹಾಪುರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ