ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಜೋಳ ಖರೀದಿಯ ಗರಿಷ್ಟ ಮಿತಿ ಹೆಚ್ಚಿಸುವಂತೆ ಮನವಿ

ಬಳ್ಳಾರಿ / ಕಂಪ್ಲಿ : ಹಿಂಗಾರು ಜೋಳ ಖರೀದಿಯ ಗರೀಷ್ಟ ಮಿತಿಯನ್ನು ಹೆಚ್ಚಿಸುವಂತೆ ಮಾನ್ಯ ಕಂಪ್ಲಿ ವಿಧಾನಸಭಾ ಕ್ಷೇತ್ರದ ಶಾಸಕ ಜೆ.ಎನ್. ಗಣೇಶ ಇವರು ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವ ಕೆ. ಹೆಚ್. ಮುನಿಯಪ್ಪ ಇವರಿಗೆ ಮನವಿ ಮಾಡಿದರು.
ನಂತರ ಶಾಸಕ ಗಣೇಶ್ ಇವರು ಪತ್ರಕರ್ತರೊಂದಿಗೆ ಮಾತನಾಡಿ, ಬಳ್ಳಾರಿ ಜಿಲ್ಲೆಯಲ್ಲಿ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಹಿಂಗಾರು ಜೋಳ ಖರೀದಿ ನೋಂದಣಿ ಮಾಡಲು ಏ.13 ರಂದು ಜಿಲ್ಲೆಯಲ್ಲಿ ಖರೀದಿ ಕೇಂದ್ರಗಳನ್ನು ಪ್ರಾರಂಭಿಸಲಾಗಿದ್ದು, ಸರ್ಕಾರದ ಪತ್ರದಂತೆ ಬಳ್ಳಾರಿ ಜಿಲ್ಲೆಗೆ 4000 ಎಂ.ಟಿ. ಮೀತಿಯನ್ನು ನಿಗಧಿಪಡೆಸಲಾಗಿದೆ. ಬಳ್ಳಾರಿ ಜಿಲ್ಲೆಯಲ್ಲಿ ಹಿಂಗಾರು ಬೆಳೆಯ ನೊಂದಣಿಯಲ್ಲಿ ಈವರೆಗೆ 457 ರೈತರಿಂದ 4266 ಎಂ.ಟಿ. ಪ್ರಮಾಣದ ಜೋಳ ನೋಂದಣಿಯಾಗಿರುತ್ತದೆ. ಪ್ರಯುಕ್ತ ಜಿಲ್ಲೆಯಲ್ಲಿ ಹಿಂಗಾರು ಜೋಳ ಬೆಳೆದಿರುವ ವಿಸ್ತೀರ್ಣ 24660.39 ಎಕ್ಟರ್‌ನಲ್ಲಿ 36990.585 ಎಂ.ಟಿ ಉತ್ಪಾದನೆಯಾಗಿದ್ದು, ರೈತರಲ್ಲಿ ಸಂಖ್ಯೆ ಹೆಚ್ಚಿದ್ದು, ರೈತ ಜೋಳ ಖರೀದಿ ಮಾಡಲು ಬೇಡಿಕೆಯನ್ನು ನೀಡಿರುತ್ತಾರೆ. ಹಾಗೂ ಖರೀದಿ ಕೇಂದ್ರದ ಮುಂದೆ ಪ್ರತಿಭಟನೆಯನ್ನು ನಡೆಸುತ್ತಿದ್ದು, ಹಾಗಾಗಿ, ಜಿಲ್ಲೆಗೆ ನಿಗಧಿಪಡೆಸಲಾದ ಖರೀದಿ ಪ್ರಮಾಣದ ಆದೇಶವನ್ನು ಹಿಂಪಡೆದು ಕಳೆದ ವರ್ಷದ ಆದೇಶದಂತೆ ಯಾವುದೇ ಗರಿಷ್ಠ ಮಿತಿ ಇಲ್ಲದೆ ರೈತರಿಂದ ಜೋಳವನ್ನು ಖರೀದಿಸಬೇಕೆಂದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ