ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇಗುಲ ರಥೋತ್ಸವದ ವೇಳೆ ತೇರು ಮುರಿದು ಅವಘಡ

ದಕ್ಷಿಣ ಕನ್ನಡ / ಬಪ್ಪನಾಡು : ಕಣ್ಮನ ಸೆಳೆಯುವ ದುರ್ಗಾಪರಮೇಶ್ವರಿ ಜಾತ್ರೆಗೆ ಲಕ್ಷೋಪಾದಿಯಲ್ಲಿ ಭಕ್ತಾದಿಗಳು ಸೇರಿದ್ದರು.

ಹಿನ್ನಲೆ :
ದಕ್ಷಿಣ ಕನ್ನಡ ಜಿಲ್ಲೆಯ ಉತ್ತರ ಭಾಗದಲ್ಲಿರುವ ಮೂಲ್ಕಿಯ ಶಾಂಭವಿ ನದಿ ತಟದಲ್ಲಿ ಶ್ರೀ ಕ್ಷೇತ್ರ ಬಪ್ಪನಾಡು ಶ್ರೀ ದುರ್ಗಾ ಪರಮೇಶ್ವರಿ ದೇವಳವಿದೆ.
ಶಾಂಭವಿ ಹೊಳೆಯಲ್ಲಿ ಲಂಗರು ಹಾಕಿದ್ದ ಹಡಗಿನ ಲಂಗರು ಮೇಲಕ್ಕೆಳೆಯುವಾಗ ಅದರಲ್ಲಿ ರಕ್ತ ಕಾಣಿಸಿಕೊಂಡಿತು. ಇದರಿಂದ ಹಡಗಿನ ಮಾಲೀಕ ಬಪ್ಪ ಬ್ಯಾರಿ ಚಿಂತಾಕ್ರಾಂತನಾದ. ಆತನ ಕನಸಿನಲ್ಲಿ ಕಾಣಿಸಿಕೊಂಡ ಶ್ರೀ ದುರ್ಗೆಯು ಇಲ್ಲಿ ದೇಗುಲ ನಿರ್ಮಿಸುವಂತೆ ಕೇಳಿಕೊಂಡಳು – ಎಂಬುದು ಜನಪದ ಕತೆ.

ಮುಂದೆ ಬಪ್ಪ ಬ್ಯಾರಿ ಈ ದೇಗುಲ ಕಟ್ಟಿದನಂತೆ. ಇದಕ್ಕೆ ಪೂರಕವಾಗಿ ಇಂದಿಗೂ ಬಪ್ಪ ಬ್ಯಾರಿ ನೆಲೆಸಿದ ಮನೆತನಕ್ಕೆ ಬಪ್ಪನಾಡು ಶ್ರೀ ದುರ್ಗೆ ರಥದಲ್ಲಿ ತೆರಳಿ ಪ್ರಸಾದ ವಿತರಿಸುವ ಕಾರ್ಯಕ್ರಮ ಅನೂಚಾನವಾಗಿ ನಡೆದುಬಂದಿದೆ. ಅಲ್ಲದೆ ಇಲ್ಲಿನ ಧಾರ್ಮಿಕ ಕಾರ್ಯಗಳಲ್ಲಿ ಎಲ್ಲಾ ಧರ್ಮೀಯರೂ ಪಾಲ್ಗೊಳ್ಳುತ್ತಾರೆ.

ಮಹಾ ರಥೋತ್ಸವ ಸಂದರ್ಭದಲ್ಲಿ ದುರ್ಗಾಪರಮೇಶ್ವರಿ ರಥೋತ್ಸವ ವೇಳೆ ತೇರು ಮುರಿದು ಅವಘಡ. ತೇರಿನ ಮೇಲ್ಭಾಗ ಏಕಾಏಕಿ ಕುಸಿತ. ತೇರಿನ ಮೇಲ್ಭಾಗ ಕುಸಿಯುವ ವೇಳೆ ತೇರಿನಲ್ಲೇ ಇದ್ದ ಅರ್ಚಕರು ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಮಧ್ಯರಾತ್ರಿ‌ 1.40ರ ಸುಮಾರಿಗೆ ವೇಳೆ ನಡೆದಿರುವ ಘಟನೆ. ಬಳಿಕ ಚಂದ್ರಮಂಡಲ ತೇರಿನಲ್ಲಿ ಉತ್ಸವ ಮುಂದುವರಿಯಿತು.

ವರದಿ : ಜಿಲಾನಸಾಬ್ ಬಡಿಗೇರ್.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ