ಕಾಸರಗೋಡು: ಸುಮಾರು 2 ದಶಕಗಳ ಸೇವೆಯಲ್ಲಿ ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘವು ಕೇರಳದಲ್ಲಿ ಜನಮನ್ನಣೆಗೆ ಪಾತ್ರವಾಗಿದೆ. ಕಾಸರಗೋಡು ಜಿಲ್ಲೆಯಲ್ಲಿ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘವು ಇಲ್ಲಿನ ಕನ್ನಡ ಭಾಷೆ, ಸಂಸ್ಕೃತಿ, ಕಲೆಗಳ ಉಳಿವಿಗಾಗಿ ಇತರ ಕನ್ನಡಪರ ಸಂಘ ಸಂಸ್ಥೆಗಳೊಂದಿಗೆ ಸೇರಿ ಶ್ರಮಿಸುತ್ತಿದೆ. ಕನ್ನಡ ಮತ್ತು ಮಲೆಯಾಳ ಪತ್ರಕರ್ತರ ಸ್ನೇಹಸೇತುವಾಗಿ ಈ ಸಂಘವು ಕಾರ್ಯಾಚರಿಸುತ್ತಿದೆ.
ಸಂಘವು ವಾರ್ಷಿಕವಾಗಿ ದತ್ತಿನಿಧಿ ಪ್ರಶಸ್ತಿಯನ್ನು ಪ್ರಧಾನಿಸುತ್ತಿದ್ದು, ಈ ಬಾರಿಯ ಹವ್ವಾ ಹಸನ್ ಫೌಂಡೇಶನ್ ಸಂಸ್ಥಾಪಕ ಶ್ರೀ ಅಬ್ದುಲ್ಲಾ ಮಾದುಮೂಲೆ ನೀಡುವ ದತ್ತಿನಿಧಿ ಪ್ರಶಸ್ತಿಗೆ ಶಿವಮೊಗ್ಗದ ಪತ್ರಕರ್ತ ಶ್ರೀ ಎಂ ರವಿಕುಮಾರ್ ಅವರನ್ನು ಆಯ್ಕೆ ಸಮಿತಿಯು ಆರಿಸಿದೆ.
ದತ್ತಿನಿಧಿ ಪ್ರಶಸ್ತಿಯು ನಗದು, ಪ್ರಶಸ್ತಿ ಪತ್ರ ಸ್ಮರಣಿಕೆ ಹೊಂದಿರುತ್ತದೆ. 2025 ನೇ ಮೇ 03 ರಂದು ಕಾಸರಗೋಡು ಜಿಲ್ಲೆಯ, ಸೀತಾಂಗೋಳಿ ಎಲೈನ್ಸ್ ಸಭಾಂಗಣದಲ್ಲಿ ಸ್ವಾಗತ ಸಮಿತಿಯ ಅಧ್ಯಕ್ಷ ಶ್ರೀ ಕೆ. ಕೆ ಶೆಟ್ಟಿ ಕುತ್ತಿಕಾರ್ ಇವರ ಅಧ್ಯಕ್ಷತೆಯಲ್ಲಿ ನಡೆಯುವ ಸಮಾರಂಭದಲ್ಲಿ ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಶ್ರೀ ಬಸವರಾಜ್ ಹೊರಟ್ಟಿ, ಕರ್ನಾಟಕದ ಕೃಷಿ ಸಚಿವ ಶ್ರೀ ಚೆಲುವರಾಯ ಸ್ವಾಮಿ, ಅರಣ್ಯ ಸಚಿವ ಶ್ರೀ ಈಶ್ವರ ಖಂಡ್ರೆ ಹಾಗೂ ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶ್ರೀ ಸೋಮಣ್ಣ ಬೇವಿನಮರದ, ಮಾನ್ಯ ಕರ್ನಾಟಕ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಶ್ರೀ ಕೆ. ವಿ ಪ್ರಭಾಕರ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀ ಶಿವಾನಂದ ತಗಡೂರು, ಮುಂತಾದ ಗಣ್ಯರು ಸೇರಿ ಪ್ರಶಸ್ತಿ ಪ್ರದಾನಿಸುವರು.
ವರದಿ ಕೊಡಕ್ಕಲ್ ಶಿವಪ್ರಸಾದ್
