ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ತಾಲೂಕು ಯೋಜನಾಧಿಕಾರಿ ಹಾಲಪ್ಪ ಇವರಿಗೆ ಸನ್ಮಾನದೊಂದಿಗೆ ಬೀಳ್ಕೊಡಿಗೆ

ಬಳ್ಳಾರಿ / ಕಂಪ್ಲಿ : ಸ್ಥಳೀಯ ಧರ್ಮಸ್ಥಳ ಕ್ಷೇಮಾಭಿವೃದ್ಧಿಯ ತಾಲೂಕು ಯೋಜನಾ ಕಛೇರಿಯಲ್ಲಿ ಬುಧವಾರ ಆಯೋಜಿಸಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಬೇರೆ ಕಡೆ ವರ್ಗಾವಣೆಗೊಂಡ ತಾಲೂಕು ಯೋಜನಾಧಿಕಾರಿ ಹಾಲಪ್ಪ ಇವರಿಗೆ ಸನ್ಮಾನದೊಂದಿಗೆ ಬೀಳ್ಕೊಡಲಾಯಿತು.

ಸನ್ಮಾನ ಸ್ವೀಕರಿಸಿದ ನಂತರ ಹಾಲಪ್ಪ ಅವರು ಮಾತನಾಡಿ, ಕಂಪ್ಲಿಯಲ್ಲಿ ನೂತನ ತಾಲೂಕು ಯೋಜನಾ ಕಛೇರಿ ಆರಂಭಿಕ ದಿನದಿಂದಲೂ ಸುಮಾರು ಐದು ವರ್ಷಗಳ ಕಾಲ ಯೋಜನಾಧಿಕಾರಿಯಾಗಿ ಸೇವೆ ಮಾಡಿರುವುದು ತೃಪ್ತಿ ತಂದಿದೆ. ಈ ಭಾಗದ ಜನರ ಮಾತು ಒರಟಾದರೂ, ವಿಶಾಲವಾದ ಹೃದಯವುಳ್ಳವರಾಗಿದ್ದಾರೆ. ಇಲ್ಲಿನ ಸಿಬ್ಬಂದಿಗಳ ಸಹಕಾರದೊಂದಿಗೆ ಸೇವಾನುಭವವಾಗಿದೆ. ಕೇಂದ್ರ ಕಛೇರಿಯ ಯೋಜನಾಧಿಕಾರಿಗಳ ಆದೇಶದಂತೆ ಮಂಡ್ಯ ಜಿಲ್ಲೆಗೆ ವರ್ಗಾವಣೆಗೊಂಡಿದ್ದು, ಇದರಿಂದ ಅನಿರ್ವಾಯವಾಗಿ ಹೋಗಬೇಕಾಗಿದೆ. ಇಷ್ಟು ದಿನ ಕಂಪ್ಲಿ ಜನತೆ ನೀಡಿರುವ ಪ್ರೀತಿ, ಸಹಕಾರಕ್ಕೆ ಚಿರರುಣಿಯಾಗಿರುವೆ. ಮುಂದಿನ ದಿನದಲ್ಲಿ ಮತ್ತೊಮ್ಮೆ ಅವಕಾಶ ಸಿಕ್ಕರೆ, ಕಂಪ್ಲಿಯಲ್ಲಿ ಸೇವೆ ಮಾಡಲಾಗುವುದು ಎಂದರು.

ತದನಂತರ ಮುಖಂಡ ಡಾ.ವೆಂಕಟೇಶ ಸಿ. ಭರಮಕ್ಕನವರ್ ಮಾತನಾಡಿ, ಧರ್ಮಸ್ಥಳ ಯೋಜನೆಯೊಂದಿಗೆ ಸಾಕಷ್ಟು ಜನಪರ ಕಾರ್ಯಕ್ರಮಗಳನ್ನು ಮಾಡುವ ಮೂಲಕ ಜನರ ಪರಿವರ್ತನೆ ಮಾಡಲಾಗಿದೆ. ಹಾಲಪ್ಪ ಅವರು ಐದು ವರ್ಷ ಸೇವೆ ಸಲ್ಲಿಸಿ, ಇಲ್ಲಿನ ಜನರ ಪ್ರೀತಿ, ವಿಶ್ವಾಸವನ್ನು ಗಳಿಸಿದ್ದಾರೆ ಇಂತಹ ಯೋಜನಾಧಿಕಾರಿ ಸಿಗುವುದಿಲ್ಲ ಎಂದರು.
ವರ್ಗಾವಣೆಗೊಂಡ ಹಾಲಪ್ಪ ಮಾಲತಿ ದಂಪತಿಗಳಿಗೆ ಸನ್ಮಾನಿಸಿ ಗೌರವಿಸಿದರು.

ಈ ಸಂದರ್ಭದಲ್ಲಿ ಪುರಸಭೆ ಸದಸ್ಯ ರಾಮಾಂಜಿನಿ, ಧರ್ಮಸ್ಥಳ ಯೋಜನೆಯ ಜಿಲ್ಲಾ ನಿರ್ದೇಶಕ ರೋಹಿತಾಕ್ಷ, ಕಾ. ನಿ. ಪ. ತಾಲೂಕು ಅಧ್ಯಕ್ಷ ಪಿ.ವಿರೇಶ, ಪತ್ರಕರ್ತರಾದ ಯಮನಪ್ಪ, ದ್ಯಾಮನಗೌಡ, ಮುಖಂಡರಾದ ಕೆ.ಎಂ.ಹೇಮಯ್ಯಸ್ವಾಮಿ, ಉಮಾಮಹೇಶ್ವರಿ, ಧರ್ಮಸ್ಥಳ ಯೋಜನಾ ಕಛೇರಿಯ ಸಿಬ್ಬಂದಿಗಳಾದ ಸಂಜೀವಕುಮಾರ, ಮುರುಗೇಶ, ಮಂಜುಳಾ, ರೇಖಾ, ಚೇತನ್ ಸೇರಿದಂತೆ ಇತರರು ಇದ್ದರು.

ವರದಿ : ಜಿಲಾನಸಾಬ್ ಬಡಿಗೇರ್.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ