ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕುಂದು ಕೊರತೆ ಸಭೆಯಲ್ಲಿ ಸಮಸ್ಯೆಗಳ ಅಹವಾಲು ಸ್ವೀಕಾರ

ಬಳ್ಳಾರಿ / ಕಂಪ್ಲಿ : ಪಟ್ಟಣದ ತಹಶೀಲ್ದಾರ್ ಕಛೇರಿಯ ಸಭಾಂಗಣದಲ್ಲಿ ಬಳ್ಳಾರಿ ಲೋಕಾಯುಕ್ತದಿಂದ ಹಮ್ಮಿಕೊಂಡಿದ್ದ ಸಾರ್ವಜನಿಕರ ಕುಂದು ಕೊರತೆ ಹಾಗೂ ಸಮಸ್ಯೆಗಳ ಅರ್ಜಿ ಅಹವಾಲು ಸ್ವೀಕಾರ ಕಾರ್ಯಕ್ರಮ ಗುರುವಾರ ಜರುಗಿತು.
ಈ ವೇಳೆ ಪಟ್ಟಣ ಹಾಗೂ ಗ್ರಾಮೀಣ ಭಾಗದ ಜನರು ತಮ್ಮ ಸಮಸ್ಯೆಗಳ ಅಹವಾಲುಗಳನ್ನು ಅರ್ಜಿಗಳ ಮೂಲಕ ಅಳಲು ತೋಡಿಕೊಂಡರು. ಒಂದೊಂದಾಗಿ ಕುಂದು ಕೊರತೆಗಳ ಅರ್ಜಿಗಳನ್ನು ಖದ್ದಾಗಿ ಪರಿಶೀಲಿಸಿ, ಮುಂದಿನ ಕ್ರಮಕ್ಕೆ ಆದೇಶಿಸಿದರು. ತದನಂತರ ಸಿಪಿಐ ನಾಗರೆಡ್ಡಿ ಮಾತನಾಡಿ, ದೇವಲಾಪುರ ಬಳಿಯ ಸುಗ್ಗೇನಹಳ್ಳಿಯ ರಸ್ತೆಯಲ್ಲಿರುವ ಕಲ್ಲು ಕ್ವಾರಿ (ಕಾರ್ಖಾನೆ) ಯಿಂದ ಧೂಳು, ಕಲ್ಲು ಹೊಡೆಯುವುದು ಸೇರಿದಂತೆ ನಾನಾ ಸಮಸ್ಯೆಗಳ ತೊಂದರೆಯಾಗುತ್ತಿದೆ ಎಂದು ರೈತರು ದೂರು ನೀಡಿದ್ದು, ಈಗಾಗಲೇ ಕಲ್ಲು ಕ್ವಾರಿ ಕೆಲಸ ಸ್ಥಗಿತಗೊಳಿಸಿದ್ದು, ಈ ಸಮಸ್ಯೆ ಬಗೆಹರಿಸಬೇಕೆಂದು ಸಂಬಂಧ ಅಧಿಕಾರಿಗೆ ಸೂಚಿಸಲಾಗಿದೆ. ನಂ.10 ಮುದ್ದಾಪುರ ಗ್ರಾಮದಲ್ಲಿ ಮೊಬೈಲ್ ಟವರ್, ವೈನ್ ಶಾಪ್ ಮತ್ತು ಕಂಪ್ಲಿ ನಗರದ ಹಳೆ ಬಸ್ ನಿಲ್ದಾಣ ಬಳಿಯಲ್ಲಿರುವ ವೈನ್ ಶಾಪ್ ಸ್ಥಳಾಂತರಿಸುವಂತೆ ದೂರು ನೀಡಿದ್ದಾರೆ. ಹೀಗೆ ಹಲವು ದೂರುಗಳು ಬಂದಿದ್ದು, ಹಂತ ಹಂತವಾಗಿ ಅರ್ಜಿಗಳ ವಿಲೇವಾರಿ ಮಾಡಲಾಗುವುದು. ಕಂದಾಯ 2, ಭೂ ಸರ್ವೆ ಇಲಾಖೆ, ಶಿಕ್ಷಣ, ಪೊಲೀಸ್ ಇಲಾಖೆಗೆ ತಲಾ 1 ಅರ್ಜಿಗಳು ಸ್ವೀಕಾರವಾಗಿವೆ ಎಂದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಶಿವರಾಜ ಶಿವಪುರ, ತಾಪಂ ಇಒ ಆರ್.ಕೆ.ಶ್ರೀಕುಮಾರ, ಮುಖ್ಯಾಧಿಕಾರಿ ಕೆ.ದುರುಗಣ್ಣ, ಲೋಕಾಯಕ್ತ ಇಲಾಖೆ ಸಿಬ್ಬಂದಿಗಳಾದ ಅಂಜಿನಪ್ಪ, ದಾನಪ್ಪ, ಹೊನ್ನೂರಪ್ಪ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು, ಸಾರ್ವಜನಿಕರು ಪಾಲ್ಗೊಂಡಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ