ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಜಂಟಿ ಸರ್ವೆಗೆ ಶಾಸಕ ಗಣೇಶ ಸೂಚನೆ : ಬೆಳೆ ನಷ್ಟ ಪರಿಹಾರದ ಭರವಸೆ

ಬಳ್ಳಾರಿ / ಕಂಪ್ಲಿ : ಅಕಾಲಿಕ ಆಲಿಕಲ್ಲು ಮಳೆ ಗಾಳಿಗೆ ನೂರಾರು ಎಕರೆಯಷ್ಟು ಭತ್ತ ಸೇರಿದಂತೆ ವಿವಿಧ ಬೆಳೆಗಳು ಹಾನಿಯಾಗಿದ್ದು, ಕಂದಾಯ ಮತ್ತು ಕೃಷಿ ಇಲಾಖೆ ಜಂಟಿಯಾಗಿ ಕೂಡಲೇ ಬೆಳೆ ಹಾನಿ ಸರ್ವೆ ಕಾರ್ಯ ಮಾಡಿ, ವರದಿ ನೀಡಿದರೆ, ಸರ್ಕಾರದ ಗಮನಕ್ಕೆ ತಂದು ನಷ್ಟ ಪರಿಹಾರ ಒದಗಿಸಲಾಗುವುದು ಎಂದು ಶಾಸಕ ಜೆ. ಎನ್. ಗಣೇಶ್ ಹೇಳಿದರು.
ತಾಲೂಕಿನ ದೇವಲಾಪುರ ಗ್ರಾ‌.ಪಂ ವ್ಯಾಪ್ತಿಯ ಸೋಮಲಾಪುರ ಪ್ರದೇಶದಲ್ಲಿ ಹಾನಿಯಾದ ರೈತರ ಭತ್ತದ ಹೊಲಗಳಿಗೆ ಭಾನುವಾರ ಭೇಟಿ ನೀಡಿ, ಪರಿಶೀಲಿಸಿದ ನಂತರ ಮಾತನಾಡಿ, ರೈತರು ನಾಲ್ಕು ತಿಂಗಳು ಶ್ರಮಪಟ್ಟು ಬೆಳೆದ ಭತ್ತದ ಬೆಳೆಗಳು ಈಗ ಅಕಾಲಿಕ ಮಳೆಗೆ ಹಾನಿಯಾಗಿರುವುದು ದುಃಖ ತರಿಸಿದೆ. ಇಲ್ಲಿನ ರೈತರನ್ನು ವಿಚಾರಿಸಿದಾಗ ಸುಮಾರು 200ಕ್ಕೂ ಅಧಿಕ ಎಕರೆಯಷ್ಟು ಭತ್ತದ ಬೆಳೆಗಳು ನೆಲಕಚ್ಚಿದ್ದು, ಕಾಳು ಭೂಮಿಗೆ ಬಿದ್ದಿರುವುದರಿಂದ ನಷ್ಟವಾಗಿದ್ದು, ಸೂಕ್ತ ಪರಿಹಾರ ಕಲ್ಪಿಸಲು ಸರ್ಕಾರದ ಮಟ್ಟದಲ್ಲಿ ಧ್ವನಿ ಎತ್ತಲಾಗುವುದು. ರೈತರು ಅತಾಸೆಯಾಗದೇ, ಕುಗ್ಗದೇ ಧೈರ್ಯದಿಂದ ಇರಬೇಕು. ಆದಷ್ಟು ಬೇಗ ಬೆಳೆ ಹಾನಿ ಸಮೀಕ್ಷೆ ನಡೆಸಿ, ಪರಿಹಾರ ಒದಗಿಸಲಾಗುವುದು ಎಂದರು.
ನಂತರ ತಹಶೀಲ್ದಾರ್ ಶಿವರಾಜ ಶಿವಪುರ ಮಾತನಾಡಿ, ಆಲಿಕಲ್ಲು ಮಳೆ ಗಾಳಿಗೆ ಭತ್ತದ ಬೆಳೆಗಳು ಹಾನಿಯಾಗಿದ್ದು, ಸರ್ವೆ ಮಾಡಿ, ಸರ್ಕಾರಕ್ಕೆ ನಷ್ಟ ಪರಿಹಾರಕ್ಕಾಗಿ ವರದಿ ನೀಡಲಾಗುವುದು ಎಂದರು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸರಾವ್ ಸೇರಿದಂತೆ ಹಲವಾರು ರೈತರು ಇದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ