ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಪ್ರಮುಖ ಉದ್ಘೋಷಕ ಕೊಯಂಜೇರಿ ಗೋಪಾಲಕೃಷ್ಣನ್ ನಿಧನ

ಕೇರಳ / ಕೊಯಂಜೇರಿ ಪತ್ತಾನತಿಟ್ಟ :
ಶಬರಿಮಲೆ ಸನ್ನಿಧಾನಂ ಮುಖ್ಯ ಉದ್ಘೋಷಕ ಹಾಗೂ ಪ್ರಮುಖ ಕಾಂಗ್ರೆಸ್ ನಾಯಕ ಮುರಿಕೇತ್ ವಡಕ್ಕೆತ್ತಿಲ್ ಎ.ಪಿ.ಗೋಪಾಲಕೃಷ್ಣನ್ ನಾಯರ್ ನಿಧನರಾಗಿದ್ದಾರೆ. 25 ವರ್ಷಗಳಿಂದ ಶಬರಿಮಲೆಗೆ ಭೇಟಿ ನೀಡುವ ಭಕ್ತರಿಗೆ ಪ್ರಮುಖ ಸಲಹೆ ಸೂಚನೆಗಳನ್ನು ಮೈಕ್ ಮೂಲಕ ನೀಡುವ ಮೂಲಕ ಖ್ಯಾತಿ ಗಳಿಸಿದ್ದರು.

ಗೋಪಾಲ ಕೃಷ್ಣ ನಾಯರ್ ಇವರು ಕೊಯಂಜೇರಿ ಪತ್ತಾನತಿಟ್ಟ ಜಿಲ್ಲೆಯವರಾಗಿದ್ದು
ಇವರು ಸರಿ ಸುಮಾರು ಸತತ 25 ವರ್ಷಗಳ ಕಾಲ ಕೇರಳದ ಶಬರಿಮಲೈ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಮಲಯಾಳಂ , ತೆಲುಗು ತಮಿಳು ಮೂರೂ ಭಾಷೆಯಲ್ಲಿ ಅನೌನ್ಸ್ ಮೆಂಟ್ ಮಾಡುತ್ತಿದ್ದರು. ಇವರು ಇಂದು ಏಪ್ರಿಲ್ 30 ರ ಬುಧವಾರದಂದು ಬೆಳಿಗ್ಗೆ ವಯೋಸಹಜ ಆನಾರೋಗ್ಯದ ಕಾರಣದಿಂದ ಮೃತ ಪಟ್ಟಿದ್ದು, ಇವರ ಅಂತ್ಯಕ್ರಿಯೆಯನ್ನು ಶುಕ್ರವಾರ ಸಂಜೆ ಇವರ ಹುಟ್ಟೂರಾದ ಕೊಯಂಜೆರಿಯಲ್ಲಿ ಪತ್ತಾನತಿಟ್ಟ ಜಿಲ್ಲೆಯಲ್ಲಿ ನೆಡಸಲಾಗುತ್ತದೆ ಎಂದು ಕುಟುಂಬದ ಸದಸ್ಯರು ತಿಳಿಸಿದರು.

ಇನ್ನೂ ಮೃತರ ಆತ್ಮಕ್ಕೆ ಶಾಂತಿ ಸಿಗಲೆಂದು ಕರ್ನಾಟಕ ರಾಜ್ಯದ ಶಬರಿಮಲೆ ಅಯ್ಯಪ್ಪ ಸ್ವಾಮಿ ಭಕ್ತರು ಸಂತಾಪ ಸೂಚಿಸಿದ್ದಾರೆ.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ