ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕಾರ್ಮಿಕರಿಗೆ ನಿವೇಶನ ಜತೆಗೆ ಸೂರು ನೀಡಿ : ಅಧ್ಯಕ್ಷ ಕಾನೀರ್ ಮಲೆಪ್ಪ

ಬಳ್ಳಾರಿ / ಕಂಪ್ಲಿ : ತಾಲೂಕಿನ ದೇವಲಾಪುರ ಗ್ರಾಮದಲ್ಲಿ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಫೆಡರೇಷನ್ ವತಿಯಿಂದ ಗುರುವಾರ ಕಾರ್ಮಿಕರ ದಿನಾಚರಣೆ ಆಚರಿಸಲಾಯಿತು.
ನಂತರ ಗ್ರಾಮ ಘಟಕ ಅಧ್ಯಕ್ಷ ಕಾನೀರ್ ಮಲೆಪ್ಪ ಮಾತನಾಡಿ, ಗ್ರಾಮೀಣ ಭಾಗದಲ್ಲಿರುವ ಕಟ್ಟಡ ಸೇರಿದಂತೆ ನಾನಾ ಕಾರ್ಮಿಕರಿಗೆ ನಿವೇಶನ ಜತೆಗೆ ಸೂರು ನೀಡಬೇಕು. ಮತ್ತು ಸರ್ಕಾರದ ಪ್ರತಿಯೊಂದು ಯೋಜನೆಗಳನ್ನು ಕಲ್ಪಿಸುವ ಮೂಲಕ ಅವರ ಬದುಕಿಗೆ ಆಸರೆಯಾಗಬೇಕು. ಪ್ರಸಕ್ತ ವರ್ಷದಲ್ಲಿ ಕಾರ್ಮಿಕರಿಗೆ ಸುರಕ್ಷಿತ ಸಾಮಾಗ್ರಿಗಳು ಸೇರಿದಂತೆ ಕಿಟ್ ನೀಡಬೇಕು. ಮಕ್ಕಳಿಗೆ ಸ್ಕಾಲರ್‌ಶಿಪ್ ಕೊಡಬೇಕು. ಕಾರ್ಮಿಕ ಮಕ್ಕಳ ಕಲಿಗೆ ವಿಶೇಷ ಗಮನ ಹರಿಸುವ ಜತೆಗೆ ನಾನಾ ಸೌಲಭ್ಯಗಳನ್ನು ಒದಗಿಸಬೇಕು ಎಂದರು.
ಈ ಸಂದರ್ಭದಲ್ಲಿ ಪದಾಧಿಕಾರಿಗಳಾದ ಕಲ್ಡಳ್ಳಿ ಬಸುವ, ಕರೇಗೌಡ್ರು ಹನುಮೇಶ, ಹೆಚ್.ಪರಶುರಾಮ, ಕುಂಬಾರ ಚಿದಾನಂದಪ್ಪ, ಸದಸ್ಯರಾದ ಶಿವರಾಜಕುಮಾರ, ಚಿಕ್ಕಣ್ಣ, ಸೋಮಣ್ಣ, ಬಿ.ದೇವರಾಜ, ಜಿ.ನಾಗರಾಜ, ರಾರಾವಿ ವಿರೇಶ, ಎನ್.ಗೋವಿಂದ, ಶೆಕ್ಷಾವಲಿ, ಗೊರವರ ಹಳ್ಳಪ್ಪ, ತಿಪ್ಪೇಶ, ಗೌಡ್ರು ಅಂಜಿನಪ್ಪ, ಗೌಡ್ರು ಕರಿಯಪ್ಪ ಸೇರಿದಂತೆ ಇತರರು ಪಾಲ್ಗೊಂಡಿದ್ದರು.

ವರದಿ : ಜಿಲಾನಸಾಬ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ