ಕಲ್ಬುರ್ಗಿ: ಮುಂಬರುವ ಜನಗಣತಿ-ಜಾತಿಗಣತಿ ಸಂದರ್ಭದಲ್ಲಿ ಪಂಚ ಪೀಠಗಳ ನಿಲುವನ್ನು ಸ್ಪಷ್ಟಪಡಿಸುವ ಉದ್ದೇಶದಿಂದ ಶ್ರೀ ಜಗದ್ಗುರು ರಂಭಾಪುರಿ ಮಹಾಪೀಠದ ಖಾಸಾ- ಶಾಖಾ ಮಠವಾಗಿರುವ ಶ್ರೀ ಮುಕ್ತಿಮಂದಿರ ಶ್ರೀ ಕ್ಷೇತ್ರದಲ್ಲಿ ದಿನಾಂಕ 07-05-2025 ಸಂಜೆ 7 ಗಂಟೆಗೆ ಪಂಚ ಪೀಠಾಚಾರ್ಯರ ಸಮಾಗಮ ಮತ್ತು ಆಂತರಿಕ ಸಮಸ್ಯೆಗಳಿಗೆ ತಾರ್ಕಿಕವಾಗಿ ಅಂತ್ಯಗೊಳಿಸುವ ವಿಚಾರದಲ್ಲಿ ಸಭೆ ಕರೆಯಲಾಗಿದೆ, ಪಂಚ ಪೀಠಾಧೀಶರ ಸಮಾವೇಶದಲ್ಲಿ ಶ್ರೀ ಉಜ್ಜಯಿನಿ, ಶ್ರೀ ಕೇದಾರ, ಶ್ರೀ ಶ್ರೀಶೈಲ ಮತ್ತು ಶ್ರೀ ಕಾಶಿ ಜಗದ್ಗುರುಗಳು ಈ ಸಭೆಯಲ್ಲಿ ಪಾಲ್ಗೊಳ್ಳುವಂತೆ ವಿನಂತಿಸಲಾಗಿದೆ .
ಬಹುದಿನಗಳ ಪಂಚಪೀಠಾಭಿಮಾನಿಗಳ-ಭಕ್ತರ ಒತ್ತಾಸೆಯ ಮೇರೆಗೆ ಈ ಸಭೆಯನ್ನು ಕರೆಯಲಾಗಿದೆ, ಆಂತರಿಕ ಸಮಸ್ಯೆಗಳಿಗೆ ತಾರ್ಕಿಕವಾಗಿ ಅಂತ್ಯಗೊಳಿಸುವ ವಿಚಾರವನ್ನು ಈ ಸಭೆಯಲ್ಲಿ ಚರ್ಚಿಸಲಾಗುವುದು, ಸಮಸ್ತ ಸದ್ಭಕ್ತರು ಆವಕಾಶ ಕಲ್ಪಿಸಿಕೊಂಡು ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಕೈಗೊಂಡು ಮಾರ್ಗದರ್ಶನ ಕೊಡುವ ಅವಶ್ಯಕತೆಯಿದೆ ಈ ಮಹತ್ವ ಪೂರ್ಣ ಸಮಾವೇಶದಲ್ಲಿ ಪಾಲ್ಗೊಳ್ಳಬೇಕೆಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಜಗದ್ಗುರುಗಳವರು ವಿಶ್ವಾಸಾರ್ಹ ಮನವಿ ಆಹ್ವಾನ ನೀಡಿದ್ದಾರೆ.
ವರದಿ: ಜಗದೀಶ್ ಕುಮಾರ್ ಭೂಮಾ




















