ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಯಾದಗಿರಿ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾಧಿಕಾರಿಗೆ ಮನವಿ

ಯಾದಗಿರಿ:- ಇಂದು ಕರ್ನಾಟಕ ರಾಜ್ಯ ರೈತ ಸಂಘ ಯಾದಗಿರಿ ಜಿಲ್ಲೆಯ ವತಿಯಿಂದ ಜಿಲ್ಲೆಯಲ್ಲಿ ಹಾಲಿ ಕಲ್ಲು ಮಳೆಯಿಂದ

ಬೆಳೆಗಳು ಹಾಳಾಗಿರುವ ರೈತರಿಗೆ ಸೂಕ್ತ ಪರಿಹಾರ ಒದಗಿಸಬೇಕು, ಶುಗರ್ ಕಂಪನಿಯಲ್ಲಿ ರೈತರಿಗೆ ಬಾಕಿ ಇರುವ ಎಲ್ಲಾ ಹಣವನ್ನು ಶೀಘ್ರದಲ್ಲೇ ರೈತರ ಖಾತೆಗೆ ಜಮಾವಣೆ ಮಾಡಬೇಕು, ಯಾದಗಿರಿ ಜಿಲ್ಲೆಯಲ್ಲಿ ವಿದ್ಯುತ್ ಪರಿಕರಗಳು ಹಳೆಯದಾಗಿದ್ದು ಇದರಿಂದ ರೈತರಿಗೆ ಸಮರ್ಪ ವಿದ್ಯುತ್ ಸಂಪರ್ಕವಾಗುತ್ತಿಲ್ಲ ಎಲ್ಲಾ ಹಳೆಯ ಪರಿಕರಗಳನ್ನು ಶೀಘ್ರದಲ್ಲೇ ನವೀಕರಿಸಬೇಕು ಮತ್ತು ರೈತರಿಗೆ ಹಗಲಿನ ವೇಳೆಯಲ್ಲಿ ವಿದ್ಯುತ್ ನೀಡಬೇಕು, ಕಡೇಚೂರ್ ಬಾಡಿಯಾಳ ಕಂಪನಿಗಳಲ್ಲಿ ಆಗುತ್ತಿರುವ ಮಾಲಿನ್ಯವನ್ನು ತಡೆಗಟ್ಟಿ ಭೂಮಿ ನೀಡಿದ ರೈತ ಕುಟುಂಬಕ್ಕೆ ಉದ್ಯೋಗವನ್ನು ನೀಡಬೇಕು, ರೈತರ ಬೆಳೆ ಸಮೀಕ್ಷೆಯನ್ನು ಪಾರದರ್ಶಕವಾಗಿ ಮಾಡಬೇಕು, ಮತ್ತು ರೈತರ ಜಮೀನುಗಳ ಮಣ್ಣು ಪರೀಕ್ಷೆಯನ್ನು ಮಾಡಿ ರೈತರಿಗೆ ಯಾವ ಬೆಳೆಯನ್ನು ಬೆಳೆಯಬೇಕೆಂದು ಸೂಕ್ತ ಮಾಹಿತಿಗಳನ್ನು ನೀಡಬೇಕು, ಹಾಗೂ ಗ್ರಾಮೀಣ ಪ್ರದೇಶದಲ್ಲಿ ಕಿರಣ ಅಂಗಡಿ,ಹೋಟೆಲ್, ಭೀಡಾ ಅಂಗಡಿಗಳಲ್ಲಿ ರಾಜ್ಯ ರೋಷವಾಗಿ ಮಧ್ಯಪಾನವನ್ನು ಮಾಡುತ್ತಿದ್ದಾರೆ ಎಂದು ಮನವಿಯನ್ನು ಸಲ್ಲಿಸಲಾಯಿತು ಈ ಒಂದು ಸಂದರ್ಭದಲ್ಲಿ ರಾಜ್ಯ ರೈತ ಸಂಘದ ಮಹಿಳಾ ಘಟಕದ ರಾಜ್ಯ ಅಧ್ಯಕ್ಷರಾದ ಶ್ರೀಮತಿ ನಾಗರತ್ನ ಯಕ್ಷಿoತಿ, ರಾಜ್ಯ ಉಪಾಧ್ಯಕ್ಷರಾದ ಮಲ್ಲಿಕಾರ್ಜುನ್ ಸತ್ಯಂ ಪೆಟ್, ಯಾದಗಿರಿ ಜಿಲ್ಲಾ ಅಧ್ಯಕ್ಷರಾದ ಶರಣು ಮಂದಾರವಾಡ, ಜಿಲ್ಲಾ ಕಾರ್ಯದರ್ಶಿ ಹಣಮಂತ ಕೊಂಗಂಡಿ, ಗುರುಮಿಟ್ಕಲ್ ತಾಲೂಕ ಅಧ್ಯಕ್ಷರಾದ ಭೀಮರಾಯ, ಯಾದಗಿರಿ ತಾಲೂಕ ಅಧ್ಯಕ್ಷರಾದ ಬಾಲಾಜಿ, ವಡಗೇರ ತಾಲೂಕು ಅಧ್ಯಕ್ಷರಾದ ಮಲ್ಲಿಕಾರ್ಜುನ್, ಶಹಾಪುರ, ಸುರಪುರ, ಹುಣಸಗಿ ತಾಲೂಕ ಅಧ್ಯಕ್ಷರುಗಳು ಮತ್ತು ರೈತ ಸಂಘದ ವಿವಿಧ ಮುಖಂಡರು ಈ ಒಂದು ಸಂದರ್ಭದಲ್ಲಿ ಹಾಜರಿದ್ದರು.

ವರದಿ: ಜಗದೀಶ್ ಕುಮಾರ್ ಭೂಮಾ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ