ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಪತ್ರಿಕಾ ಪ್ರಕಟಣೆ

ಕಲಬುರಗಿ/ ಜೇವರ್ಗಿ: ಪಟ್ಟಣ ಹಾಗೂ ಗ್ರಾಮೀಣ ಪ್ರದೇಶ ವ್ಯಾಪ್ತಿಯಲ್ಲಿ ಸರಕಾರಿ ಸ್ಥಳಗಳು ಹಾಗೂ ರಸ್ತೆಗಳ ಮೇಲೆ ಮತ್ತು ಸರಕಾರಿ ಉದ್ಯಾನವನಗಳಲ್ಲಿ ಮಹಾತ್ಮರ ಪುತ್ಥಳಿಗಳನ್ನು ಪ್ರತಿಷ್ಠಾಪನೆ ಮಾಡದೇ ಇರುವ ಕುರಿತು ಜೇವರ್ಗಿ ಪಟ್ಟಣ ಹಾಗೂ ಗ್ರಾಮೀಣ ಪ್ರದೇಶ ವ್ಯಾಪ್ತಿಯಲ್ಲಿ ಸಂಬಂಧಪಟ್ಟ ಇಲಾಖೆಯಿಂದ ಅನುಮತಿ ಪಡೆಯದೇ ಅನಧಿಕೃತವಾಗಿ ಏಕಾ-ಏಕಿ ಯಾವುದೇ ಸಮಯದಲ್ಲಿ ಸರಕಾರಿ ಸ್ಥಳಗಳಲ್ಲಿ ಹಾಗೂ ರಸ್ತೆಗಳ ಮೇಲೆ ಮತ್ತು ಸರಕಾರಿ ಉದ್ಯಾವನಗಳಲ್ಲಿ ಮಹಾತ್ಮರ ಪುತ್ಥಳಿಗಳನ್ನು ಪ್ರತಿಷ್ಠಾಪನೆ ಮಾಡುತ್ತಿರುವುದು ಕಂಡು ಬಂದಿರುತ್ತದೆ. ಇನ್ನು ಮುಂದೆ ತಾಲೂಕಿನ್ಯಾದಂತ ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ ಇಲಾಖೆಯ ಅನುಮತಿ ಪಡೆಯದೆ ಅನಧಿಕೃತವಾಗಿ ಮಹಾತ್ಮರ ಪ್ರತಿಮೆಗಳನ್ನು ಪ್ರತಿಷ್ಠಾಪನೆ ಮಾಡಿದ್ದು ಕಂಡು ಬಂದಲ್ಲಿ ಮಾನ್ಯ ಸರ್ವೋಚ್ಚ ನ್ಯಾಯಾಲದ ಆದೇಶ ಹಾಗೂ
ಕರ್ನಾಟಕ ಸಾರ್ವಜನಿಕ ಆವರಣಗಳು (ಅನಧಿಕೃತ ನಿವಾಸಿಗಳ ತೆರವು) ಕಾಯಿದೆ, 1974 ಪ್ರಕಾರ ಈ ಕಾರ್ಯಕ್ಕೆ ಸಹಕಾರ ನೀಡಿದವರು ಹಾಗೂ ಕಾರಣೀಭೂತರಾಗಿರುವ ವ್ಯಕ್ತಿಗಳ ಮೇಲೆ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು ಇದರಿಂದ ತಾಲೂಕಿನಲ್ಲಿ ಸಮಸ್ಯೆಗಳು ಉಂಟಾಗುವ ಸಂಬಂಧ ಇರುವುದರಿಂದ ಎಲ್ಲಾ ಸಂಘಟನೆಗಳು ಹಾಗೂ ಸಾರ್ವಜನಿಕರು ಪ್ರತಿಮೆ ಪ್ರತಿಷ್ಠಾಪನೆ ಮಾಡದಂತೆ ತಾಲೂಕ ಆಡಳಿತಕ್ಕೆ ಸಹಕರಿಸುವಂತೆ
ಜೇವರ್ಗಿ ತಹಶೀಲ್ದಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವರದಿ: ಚಂದ್ರಶೇಖರ ಪಾಟೀಲ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ