ಬಳ್ಳಾರಿ/ ಕಂಪ್ಲಿ : ಜೆಸ್ಕಾಂ ವ್ಯಾಪ್ತಿಗೆ ಒಳಪಟ್ಟ ವಿದ್ಯುತ್ ಗ್ರಾಹಕರ ಕುಂದು-ಕೊರತೆಗಳ ಸಭೆಯನ್ನು ಇಂದು ಮೇ 17 ರಂದು ಮಧ್ಯಾಹ್ನ 12 ಗಂಟೆಗೆ ಕಂಪ್ಲಿಯ ಜೆಸ್ಕಾಂ ಕಚೇರಿಯಲ್ಲಿ ಆಯೋಜಿಸಲಾಗಿದೆ.
ಗ್ರಾಹಕರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಾಗಿ ತಮ್ಮ ಸಮಸ್ಯೆಗಳನ್ನು ಮಂಡಿಸಲು ಈ ಅವಕಾಶವನ್ನು ಬಳಸಿಕೊಳ್ಳಬೇಕು ಎಂದು ಜೆಸ್ಕಾಂ ಕಾರ್ಯ ಮತ್ತು ಪಾಲನಾ ಉಪ ವಿಭಾಗದ ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.
ವರದಿ : ಜಿಲಾನಸಾಬ್ ಬಡಿಗೇರ್
