ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕೆಸರು ಗದ್ದೆಯಂತೆ ಮಾವಿನಹಳ್ಳಿಯ ಶ್ರೀ ಸಿದ್ದಪ್ಪ ತಾತನ ರಸ್ತೆ

ಬಳ್ಳಾರಿ / ಕಂಪ್ಲಿ : ತಾಲೂಕಿನ ಮಾವಿನಹಳ್ಳಿಯ ಗ್ರಾಮದ ಶ್ರೀ ಸಿದ್ದಪ್ಪ ತಾತನ ದೇವಸ್ಥಾನದವರೆಗೆ ಕೆಸರುಗದ್ದೆ ಅಂತ ಆಗಿದೆ.
ಗ್ರಾಮದ ಸಾರ್ವಜನಿಕರು ವ್ಯವಸ್ಥಿತವಾದ ರಸ್ತೆ ನಿರ್ಮಾಣ ಮಾಡಲು ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಎಷ್ಟು ಬಾರಿ ಮನವಿ ಮಾಡಿದರೂ ಈ ಕಡೆ ಗಮನಹರಿಸದ ಗ್ರಾಮ ಪಂಚಾಯಿತಿ ಪಿಡಿಓ ಮತ್ತು ಕ್ಷೇತ್ರದ ಶಾಸಕರು, ಕೆಸರು ಗದ್ದೆಯಾಂತಾದ ಮಾವಿನಹಳ್ಳಿಯ ಶ್ರೀ ಸಿದ್ದಪ್ಪ ತಾತನ ರಸ್ತೆ ಮಳೆ ಬಂದರೆ ಓಡಾಡಲು ಹರಸಹಾಸಪಡುತ್ತಿದ್ದಾರೆ.
ವಯೋ ವೃದ್ಧರೂ, ಮಕ್ಕಳು ಈ ರಸ್ತೆಯಲ್ಲಿ ಓಡಾಡಲು ತುಂಬಾ ಕಷ್ಟ ಪಡುತ್ತಿದ್ದಾರೆ.
ಸರಿಯಾಗಿ ದ್ವಿಚಕ್ರ ವಾಹನ ಸಂಚರಿಸಲು ಆಗುವುದಿಲ್ಲ. ಇದರಿಂದ ಜನರು ಓಡಾಟ ನಡೆಸಲು ಹಿಂಜರಿಯುತ್ತಾರೆ. ಹೊಲಗಳಿಗೆ ಹೋಗಲು ಈ ದಾರಿ ಮುಖಾಂತರ ದಿನ ನಿತ್ಯ ಸಂಚಾರ ಮಾಡಬೇಕು ಆದರೆ ಈ ರೀತಿ ಆದರೂ ಸಹ ಗ್ರಾಮೀಣ ಜನರಿಗೆ ಸರಿಯಾಗಿ ಸೌಲಭ್ಯಗಳನ್ನು ನೀಡಿಲ್ಲ ಎಂದು ಸಾರ್ವಜನಿಕರು ತಮ್ಮ ಅಳಲನ್ನು ತೋಡಿಕೊಂಡರು.
ದಯವಿಟ್ಟು ಗ್ರಾಮ ಪಂಚಾಯಿತಿ ಸುಗ್ಗೇನಹಳ್ಳಿ ಪಿಡಿಓ ಮತ್ತು ಕಾರ್ಯದರ್ಶಿ ಹಾಗೂ ಕಂಪ್ಲಿ ಕ್ಷೇತ್ರದ ಶಾಸಕರು ಗ್ರಾಮೀಣ ಜನತೆಯ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಊರಿನ ಸಾರ್ವಜನಿಕರು ಮನವಿ ಮಾಡಿದ್ದಾರೆ.

ವರದಿ : ಜಿಲಾನಸಾಬ್ ಬಡಿಗೇರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ