ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕಂಪ್ಲಿ ತಾಲೂಕಿನಾದ್ಯಂತ ಮಳೆಯಾರ್ಭಟ : ಜನಜೀವನ ಅಸ್ತವ್ಯಸ್ತ : ಗರಿಗೆದರಿದ ಕೃಷಿ ಚಟುವಟಿಕೆ

ಬಳ್ಳಾರಿ / ಕಂಪ್ಲಿ : ತಾಲೂಕಿನ ವಿವಿಧೆಡೆ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಕೃಷಿ ಚಟುವಟಿಕೆಗಳು ಗರಿಗೆದರಿದರೆ ಮತ್ತೊಂದೆಡೆ ಮಳೆಯ ಅವಾಂತರಕ್ಕೆ ಜನರು ತೊಂದರೆ ಅನುಭವಿಸುವಂತಾಯಿತು.
ತಾಲೂಕಿನದ್ಯಾಂತ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಪಟಣದಲ್ಲಿ ಭಾರಿ ಮಳೆಯು ಜನರಿಗೆ ತೊಂದರೆಗಳನ್ನುಂಟು ಮಾಡಿದೆ. ಪಟ್ಟಣ ಸೇರಿದಂತೆ ಹಲವಾರು ಗ್ರಾಮಗಳಲ್ಲಿ ತಗ್ಗು ಪ್ರದೇಶಗಳು ಸಂಪೂರ್ಣವಾಗಿ ಜಲಾವೃತಗೊಂಡಿವೆ. ಹಾಗೂ ಕೆಲವೊಂದು ಮನೆಗಳಿಗೆ ನೀರು ನುಗ್ಗಿದ್ದು, ರಸ್ತೆಗಳು ಕೆರೆಯಂತಾಗಿ ವಾಹನ ಸವಾರರು ಸಂಚರಿಸಲು ಕಷ್ಟದ ಅನುಭವವಾಗಿದೆ. ಒಳಚರಂಡಿಗಳ ನೀರು ರಸ್ತೆಯಲ್ಲಿ ಹರಿದು ಬರುತ್ತಿದ್ದು ಬಹಳಷ್ಟು ತೊಂದರೆಯಾಗುತ್ತಿದೆ.
ಕಳೆದ ರಾತ್ರಿಯಿಂದ ಹಿಡಿದು ಆರಂಭವಾದ ಮಳೆ ಬುಧವಾರವೂ ಸುರಿಯಿತು. ವಿವಿಧೆಡೆ ಮಳೆ ಜೋರಾಗಿ ಸುರಿದ ಪರಿಣಾಮ ಚರಂಡಿಗಳು ತುಂಬಿ ರಸ್ತೆ ಮೇಲೆ ನೀರು ಹರಿಯಿತು. ಕೃಷಿ ಜಮೀನಿನಲ್ಲಿ ನೀರು ಸಂಗ್ರಹಗೊಂಡಿದ್ದು ರೈತರು ಸಂತಸ ವ್ಯಕ್ತಪಡಿಸಿದರು.
ತಾಲೂಕಿನ ಬಹುತೇಕ ಭಾಗದಲ್ಲಿ ಪೂರ್ವಮುಂಗಾರು ಮಳೆಯ ಚುರುಕು ಪಡೆದಿದೆ. ಈ ಮಳೆಯಿಂದಾಗಿ ಮುಂಗಾರು ಹಂಗಾಮಿನ ಬಿತ್ತನೆಗೆ ಸಿದ್ಧತೆಗೆ ಅನುವು ಮಾಡಿಕೊಟ್ಟಿದೆ.
ಈ ಬಾರಿಯ ಬೇಸಿಗೆ ಅವಧಿಯಲ್ಲಿ ಬಿಸಿಲಿನ ತಾಪ ಹೆಚ್ಚಾಗಿದ್ದರಿಂದ ಏಪ್ರಿಲ್ ತಿಂಗಳಲ್ಲಿ ಕೊಳವೆ ಬಾವಿಗಳಲ್ಲಿಯೂ ನೀರಿನ ಪ್ರಮಾಣ ಕಡಿಮೆಯಾಗಿದ್ದು, ಅಂತರ್ಜಲ ಕುಸಿಯುವ ಜತೆಗೆ ನೀರಿನ ಅಭಾವಕ್ಕೆ ಕಾರಣವಾಗಿತ್ತು. ಬಿಸಿಲಿನ ತಾಪಕ್ಕೆ ಜನರು ಬೆಚ್ಚಿಬಿದ್ದಿದ್ದರು. ಆದರೆ, ಸದ್ಯ ಸುರಿದ ಮಳೆಯಿಂದ ಇಳೆ ತಂಪಾಗಿದೆ.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ